15ಕ್ಕೆ ಲಾಕ್‌ಡೌನ್‌ ಕೊಂಚ ಸಡಿ​ಲ?

By Kannadaprabha NewsFirst Published Apr 13, 2020, 7:45 AM IST
Highlights

15ರಿಂದ ಲಾಕ್‌ಡೌನ್‌ ಕೊಂಚ ಸಡಿ​ಲ: ಸಿಎಂ| 2 ದಿನ ಕಾಯಿರಿ, ಕೊಂಚ ಓಡಾಟಕ್ಕೆ ಅವಕಾಶ ನೀಡ್ತೇವೆ| ಅಂಗಡಿ ತೆರೆಯಲೂ ಅವಕಾಶ ನೀಡ್ತೇವೆ: ಬಿಎಸ್‌ವೈ

ಬೆಂಗಳೂರು(ಏ.13): ಕೊರೋನಾ ಸೋಂಕು ನಿಯಂತ್ರಣಕ್ಕೆ ಜಾರಿಯಲ್ಲಿರುವ ಲಾಕ್‌ಡೌನ್‌ ಏಪ್ರಿಲ್‌ 15ರ ನಂತರ ಕೊಂಚ ಸಡಿಲಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆಯೇ?

ಇಂತಹದ್ದೊಂದು ಮುನ್ಸೂಚನೆಯನ್ನು ಸ್ವತಃ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೇ ನೀಡಿದ್ದಾರೆ. ಭಾನುವಾರ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಸಂಚರಿಸಿ ಲಾಕ್‌ಡೌನ್‌ನಿಂದ ಉಂಟಾಗಿರುವ ಪರಿಸ್ಥಿತಿ ಅವಲೋಕನ ನಡೆಸಿದ ವೇಳೆ ಮುಖ್ಯಮಂತ್ರಿಗಳ ಮುಂದೆ ಜನರು, ಲಾಕ್‌ಡೌನ್‌ನಿಂದ ತೀವ್ರ ಸಮಸ್ಯೆ ಅನುಭವಿಸುತ್ತಿರುವುದಾಗಿ ಹೇಳಿದರು. ಆಗ ವ್ಯಾಪಾರಿಗಳಿಗೆ ಏ. 15ರ ನಂತರ ಜನರ ಓಡಾಟಕ್ಕೆ ಕೊಂಚ ಅವಕಾಶ ನೀಡಲಾಗುವುದು ಎಂದು ಸಿಎಂ ಅಭಯ ನೀಡಿದರು.

ಲಾಕ್‌ಡೌನ್‌ ಉಲ್ಲಂಘನೆ ಪ್ರಶ್ನಿಸಿದ ಪೊಲೀಸ್‌ ಕೈಕಟ್‌!

ವಿಜಯನಗರದಲ್ಲಿ ಸಾರ್ವಜನಿಕರ ಸಮಸ್ಯೆ ಆಲಿಸಿದ ಯಡಿಯೂರಪ್ಪ ಅವರು, ‘ಇಷ್ಟುದಿನ ಎಲ್ಲರೂ ಸಹಕಾರ ನೀಡಿದ್ದೀರಿ. ಇನ್ನು ಒಂದೆರಡು ದಿನ ಸಹಕಾರ ನೀಡಿ, ಎಲ್ಲವೂ ಹಂತ ಹಂತವಾಗಿ ಸರಿಹೋಗಲಿದೆ. ಏ.15ರಿಂದ ಜನರ ಓಡಾಟಕ್ಕೆ ಕೊಂಚ ಅವಕಾಶ ನೀಡಲಾಗುವುದು, ಅದೇ ರೀತಿ ಅಂಗಡಿಗಳನ್ನು ತೆರೆಯಲೂ ಅವಕಾಶ ಮಾಡಿಕೊಡಲಾಗುವುದು’ ಎಂದರು.

‘ಅಲ್ಲದೆ ವಿಜಯನಗರ ಮಾರುಕಟ್ಟೆಯಲ್ಲಿ ಬಾಳೆಹಣ್ಣು ಮಾರುವ ಮಹಿಳೆಯೊಬ್ಬರು ವ್ಯಾಪಾರವಿಲ್ಲದೆ ಬದುಕು ದುಸ್ತರವಾಗಿದೆ. ಮಾರಾಟವಿಲ್ಲದೆ ಬಾಳೆಹಣ್ಣುಗಳು ಕೊಳೆಯುತ್ತಿವೆ. ಹಾಕಿದ ಬಂಡವಾಳವೂ ಇಲ್ಲದೆ ನಷ್ಟ ಅನುಭವಿಸುತ್ತಿವೆ’ ಎಂದು ಅಳಲು ತೋಡಿಕೊಂಡಾಗ, ‘1-2 ದಿನ ಸಹಕರಿಸಿ ತಾಯಿ. ಆ ಮೇಲೆ ಜನರನ್ನು ಓಡಾಡಲು ಬಿಡುತ್ತೇವಮ್ಮಾ. ಜನರು ಓಡಾಡಲು ಆರಂಭವಾದ ಮೇಲೆ ಎಲ್ಲವೂ ಸರಿಹೋಗುತ್ತದೆ’ ಎಂದು ಸಮಾಧಾನ ಹೇಳಿದರು.

click me!