ಮುಡಾ ಹಗರಣ ಬಿಜೆಪಿಗೆ ತಿರುಗು ಬಾಣ! ಆರ್ ಅಶೋಕ್ ಸಹ ಸೈಟ್ ವಾಪಸ್ ನೀಡಿದ್ರು: ಕಾಂಗ್ರೆಸ್ ಗಂಭೀರ ಆರೋಪ

Published : Oct 03, 2024, 10:20 AM IST
ಮುಡಾ ಹಗರಣ ಬಿಜೆಪಿಗೆ ತಿರುಗು ಬಾಣ! ಆರ್ ಅಶೋಕ್ ಸಹ ಸೈಟ್ ವಾಪಸ್ ನೀಡಿದ್ರು: ಕಾಂಗ್ರೆಸ್ ಗಂಭೀರ ಆರೋಪ

ಸಾರಾಂಶ

ಅಶೋಕ್‌ ಖರೀದಿ ಮಾಡಿದ ಬಳಿಕ 2009ರಲ್ಲಿ ರಾಮಸ್ವಾಮಿ ಅವರಿಂದ ಜಮೀನು ಡಿನೋಟಿಫಿಕೇಷನ್‌ ಮಾಡುವಂತೆ ಅರ್ಜಿ ಕೊಡಿಸುತ್ತಾರೆ. ಅಂದಿನ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಈ ಅರ್ಜಿಯ ಮೇಲೆ ಕೂಡಲೇ ಮಂಡಿಸಿ ಎಂದು ಬರೆದು ಎರಡು ತಿಂಗಳಲ್ಲಿ ಡಿನೋಟಿಫಿಕೇಷನ್‌ ಮಾಡಿ ಭೂ ಸ್ವಾಧೀನದಿಂದ ಕೈಬಿಟ್ಟಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರು (ಅ.3) :‘ಬಿಡಿಎಗೆ ಸೇರಿದ ಕೋಟ್ಯಂತರ ರು. ಮೌಲ್ಯದ ಜಮೀನನ್ನು ಅಕ್ರಮವಾಗಿ ಖರೀದಿಸಿ, ಪ್ರಭಾವ ಬಳಸಿ ಡಿನೋಟಿಫಿಕೇಷನ್‌ ಮಾಡಿಕೊಂಡು ವಿವಾದವಾದಾಗ ಶಿಕ್ಷೆಯಿಂದ ಪಾರಾಗಲು ಬಿಡಿಎಗೆ ಗಿಫ್ಟ್‌ ಡೀಡ್‌ ಮೂಲಕ ಜಮೀನು ವಾಪಸು ನೀಡಿದ್ದರು’ ಎಂಬ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ವಿರುದ್ಧ ಗಂಭೀರ ಆರೋಪವನ್ನು ಕಾಂಗ್ರೆಸ್‌ ಸಚಿವರು ಮಾಡಿದ್ದಾರೆ.

ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ನೇತೃತ್ವದಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಸಚಿವರಾದ ಕೃಷ್ಣ ಬೈರೇಗೌಡ, ಎಚ್‌.ಕೆ. ಪಾಟೀಲ್‌ ಹಾಗೂ ಸತೀಶ್‌ ಜಾರಕಿಹೊಳಿ ಅವರು ದಾಖಲೆ ಸಹಿತ ಈ ಆರೋಪ ಮಾಡಿದರು.

ಎಲ್ಲ ನ್ಯಾಯಾಲಯಕ್ಕಿಂತ ಆತ್ಮಸಾಕ್ಷಿ ದೊಡ್ಡದು: ಸಿಎಂ ಸಿಎಂ ಸಿದ್ದರಾಮಯ್ಯ

ತನ್ಮೂಲಕ ಮುಡಾ ಸೈಟು ವಾಪಸು ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ತಪ್ಪೊಪ್ಪಿಕೊಂಡಂತೆ ಎಂದು ಟೀಕಿಸಿದ್ದ ಅಶೋಕ್‌ಗೆ ಭಾರಿ ತಿರುಗೇಟು ನೀಡಿದ್ದು, ‘ಇಷ್ಟೆಲ್ಲಾ ಅಕ್ರಮ ಮಾಡಿರುವ ಆರ್.ಅಶೋಕ್ ಅವರು ವಿರೋಧ ಪಕ್ಷದ ನಾಯಕ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೀರಾ?’ ಎಂದು ಪ್ರಶ್ನಿಸಿದರು.

ಆರೋಪ ಏನು?:

ಪರಮೇಶ್ವರ್‌ ಮಾತನಾಡಿ, ಲೊಟ್ಟೆಗೊಲ್ಲಹಳ್ಳಿಯಲ್ಲಿ ಅಶೋಕ್‌ ನೂರಾರು ಕೋಟಿ ರು. ಭೂ ಹಗರಣ ನಡೆಸಿದ್ದರು. 1977ರಲ್ಲಿ ಬಿಡಿಎ ಲೊಟ್ಟೆಗೊಲ್ಲಹಳ್ಳಿಯಲ್ಲಿ ರಾಮಸ್ವಾಮಿ ಎಂಬುವವರಿಗೆ ಸೇರಿದ 32 ಗುಂಟೆ ಜಮೀನು ನೋಟಿಫಿಕೇಶನ್ ಮಾಡುತ್ತದೆ. ಬಳಿಕ 1978ರಲ್ಲಿ ಅಂತಿಮ ಅಧಿಸೂಚನೆ ಹೊರಡಿಸಿ ಬಿಡಿಎ ತನ್ನ ಸುಪರ್ದಿಗೆ ತೆಗೆದುಕೊಳ್ಳುತ್ತದೆ. ಹೀಗೆ ಬಿಡಿಎ ಸ್ವತ್ತಾಗಿರುವ ಜಮೀನನ್ನು ಅಶೋಕ್‌ ಅವರು ಕಾನೂನು ಬಾಹಿರವಾಗಿ 2003 ಹಾಗೂ 2007 ರಲ್ಲಿ ರಾಮಸ್ವಾಮಿ ಅವರಿಂದ ಖರೀದಿ ಮಾಡಿದ್ದಾರೆ.

ಅಲ್ಲದೆ, ಅಶೋಕ್‌ ಖರೀದಿ ಮಾಡಿದ ಬಳಿಕ 2009ರಲ್ಲಿ ರಾಮಸ್ವಾಮಿ ಅವರಿಂದ ಜಮೀನು ಡಿನೋಟಿಫಿಕೇಷನ್‌ ಮಾಡುವಂತೆ ಅರ್ಜಿ ಕೊಡಿಸುತ್ತಾರೆ. ಅಂದಿನ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಈ ಅರ್ಜಿಯ ಮೇಲೆ ಕೂಡಲೇ ಮಂಡಿಸಿ ಎಂದು ಬರೆದು ಎರಡು ತಿಂಗಳಲ್ಲಿ ಡಿನೋಟಿಫಿಕೇಷನ್‌ ಮಾಡಿ ಭೂ ಸ್ವಾಧೀನದಿಂದ ಕೈಬಿಟ್ಟಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ.

ಈ ಅಕ್ರಮ ಡಿನೋಟಿಫಿಕೇಷನ್ ವಿರುದ್ಧ ನಿವೃತ್ತ ವಿಂಗ್ ಕಮಾಂಡರ್ ಜಿ.ವಿ ಅತ್ರಿ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡುತ್ತಾರೆ. ನಂತರ ಇದು ನ್ಯಾಯಾಲಯದ ಮೆಟ್ಟಿಲೇರುತ್ತಾರೆ. ತಪ್ಪು ಸಾಬೀತಾಗಿ ಶಿಕ್ಷೆಗೆ ಗುರಿಯಾಗುವ ಭೀತಿಯಿಂದ ಅಶೋಕ್ ಅವರು ಈ ಜಮೀನು ಹಿಂತಿರುಗಿಸಲು ತೀರ್ಮಾನಿಸುತ್ತಾರೆ. 2011ರ ಆಗಸ್ಟ್‌ನಲ್ಲಿ ಬಿಡಿಎಗೆ ಗಿಫ್ಟ್‌ ಡೀಡ್‌ ಮಾಡಿದ್ದಾರೆ. ಬಿಡಿಎಗೆ ಬಿಡಿಎ ಸ್ವತ್ತನ್ನೇ ಇವರು ಹೇಗೆ ಗಿಫ್ಟ್‌ ಡೀಡ್‌ ಮಾಡಿದರು? ಗಿಫ್ಟ್‌ ಡೀಡ್‌ ಮಾಡಿ ಜಾಗ ವಾಪಸು ನೀಡಿದರೆ ಅವರೇ ಹೇಳಿದಂತೆ ತಪ್ಪು ಒಪ್ಪಿಕೊಂಡಂತೆ ಅಲ್ಲವೇ? ಎಂದು ಪರಮೇಶ್ವರ್ ಪ್ರಶ್ನಿಸಿದ್ದಾರೆ.

ಕ್ರಿಮಿನಲ್‌ ಕೇಸು ಅಗತ್ಯವಿಲ್ಲ ಎಂದಿದ್ದ ಕೋರ್ಟ್:

ಹೈಕೋರ್ಟ್ ಮೆಟ್ಟಿಲೇರಿದಾಗ ನ್ಯಾ। ದಿನೇಶ್ ಮಹೇಶ್ವರಿ ಹಾಗೂ ನ್ಯಾ। ಅರವಿಂದ್ ಕುಮಾರ್ ಅವರು ವಿಚಾರಣೆ ಮಾಡಿ ತೀರ್ಪು ನೀಡುತ್ತಾರೆ. ಈ ತೀರ್ಪಿನಲ್ಲಿ ಈ ಭೂಮಿಯು ಬಿಡಿಎ ಅಧೀನಕ್ಕೆ ವಾಪಸು ಬಂದಿದ್ದು, ಬಿಡಿಎ ಅಧೀನದಲ್ಲೇ ಇರುವ ಕಾರಣ ಕ್ರಿಮಿನಲ್ ಮೊಕದ್ದಮೆ ಹೂಡುವ ಅಗತ್ಯವಿಲ್ಲ ಎಂದು ತಿಳಿಸಲಾಗಿದೆ.

ಸಿದ್ದರಾಮಯ್ಯ ಅವರ ಪತ್ನಿ ತಮಗೆ ಪರಿಹಾರವಾಗಿ ಬಂದ ನಿವೇಶನ ವಾಪಸ್ ನೀಡಿರುವುದನ್ನು ಅಶೋಕ್‌ ಆಕ್ಷೇಪಿಸುತ್ತಿದ್ದಾರೆ. ಆದರೆ ಈ ತೀರ್ಪನ್ನು ನೀವು ಯಾವ ರೀತಿ ಅರ್ಥೈಸುತ್ತಾರೆ? ಇದರ ಬಗ್ಗೆ ಜನರಿಗೆ ಏನು ಹೇಳುತ್ತಾರೆ? ಎಂದು ಕಿಡಿ ಕಾರಿದರು.

ಕಂದಾಯ ಸಚಿವ ಕೃಷ್ಣ ಭೈರೇಗೌಡ ಮಾತನಾಡಿ, ಬಿಡಿಎ ಸ್ವತ್ತನ್ನು ಅಶೋಕ್ ಅಕ್ರಮವಾಗಿ ಕಬಳಿಸಲು ಯತ್ನಿಸಿದ್ದಾರೆ. ಅರ್ಜಿ ನೀಡಿದ 12 ದಿನಗಳ ಅಂತರದಲ್ಲಿ ಡಿನೋಟಿಫಿಕೇಷನ್ ಆಗಿದೆ. ಸರ್ಕಾರಿ ಜಾಗವನ್ನು 23 ವರ್ಷಗಳ ನಂತರ ಡಿನೋಟಿಫಿಕೇಷನ್ ಮಾಡಿರುವುದು ಅಕ್ರಮ ಅಲ್ಲವೇ? ಮೂಲ ವಾರಸುದಾರರು ಡಿನೋಟಿಫಿಕೇಷನ್ ಗೆ ಅರ್ಜಿಯನ್ನೇ ಕೊಟ್ಟಿಲ್ಲ.ಇವರ ಹೆಸರಲ್ಲಿ ಬೇನಾಮಿ ರಾಮಸ್ವಾಮಿ ಎಂಬುವವರನ್ನು ಸೃಷ್ಟಿ ಮಾಡಲಾಗಿದೆ. ಇದು ಅಕ್ರಮವಲ್ಲವೇ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

INTERVIEW: ಸಿಎಂ ಕೈಕೆಳಗಿರುವ ಅಧಿಕಾರಿಗಳಿಂದ ತನಿಖೆ ನಡೆಸುವುದು ಸಮಂಜಸವಲ್ಲ: ನ್ಯಾ.ಎನ್‌. ಸಂತೋಷ್ ಹೆಗ್ಡೆ

ಹೀಗಾಗಿ ಇಷ್ಟೆಲ್ಲಾ ಅಕ್ರಮ ಮಾಡಿರುವ ಆರ್.ಅಶೋಕ್ ಅವರು ವಿರೋಧ ಪಕ್ಷದ ನಾಯಕ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೀರಾ? ಎಂದು ಪ್ರಶ್ನಿಸಿದ್ದಾರೆ.

ಕಾನೂನು ಸಚಿವ ಎಚ್.ಕೆ. ಪಾಟೀಲ್‌ ಮಾತನಾಡಿ, ಅಶೋಕ್‌ ಹೇಳಿಕೆ ಗಮನಿಸಿದರೆ ಅಚ್ಚರಿಯಾಗುತ್ತಿದೆ. ಅಶೋಕ್‌ ಅವರೇ ನೀವು ಮಾಡಿದ್ದು ಸರಿಯಾದರೆ ಪಾರ್ವತಮ್ಮ ಅವರು ಮಾಡಿದ್ದು ತಪ್ಪು ಹೇಗಾಗುತ್ತದೆ? ಎಂದು ಕಿಡಿ ಕಾರಿದರು.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥರಾದ ರಮೇಶ್ ಬಾಬು ಹಾಜರಿದ್ದರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರಲ್ಲಿ ಕಲರ್ಸ್ ಮೊಬೈಲ್ ಅಂಗಡಿ ಮಾಲೀಕನಿಗೆ ಕಲರ್ ಕಲರ್ ಕಾಗೆ ಹಾರಿಸಿದ ಖತರ್ನಾಕ್ ಖದೀಮ!
ದಾಖಲೆ ಮಾಡಿದ ಉತ್ತರ ಕನ್ನಡದ ಅಪರೂಪದ ರಾಜಕಾರಣಿ, ರಾಮಕೃಷ್ಣ ಹೆಗಡೆ ಮೊಮ್ಮಗ ಶಶಿಭೂಷಣ್‌ ಹೆಗಡೆ!