ಬಿಎಸ್‌ಎಫ್‌ ಕ್ಯಾಂಪಲ್ಲಿ ಮತ್ತೆ 22 ಯೋಧರಿಗೆ ಸೋಂಕು

Kannadaprabha News   | Asianet News
Published : Sep 30, 2021, 11:29 AM IST
ಬಿಎಸ್‌ಎಫ್‌ ಕ್ಯಾಂಪಲ್ಲಿ ಮತ್ತೆ 22 ಯೋಧರಿಗೆ ಸೋಂಕು

ಸಾರಾಂಶ

*  ಕೋವಿಡ್‌ ಸೋಂಕಿತರ ಸಂಖ್ಯೆ 113ಕ್ಕೆ ಏರಿಕೆ *  ಸೋಂಕಿತರ ಸಂಖ್ಯೆ ಹೆಚ್ಚಳ ಆತಂಕ *  ಯಲಹಂಕದಲ್ಲಿರುವ ಬಿಎಸ್‌ಎಫ್‌ ಕ್ಯಾಂಪ್‌    

ಬೆಂಗಳೂರು(ಸೆ.30):  ಮೇಘಾಲಯದ(Meghalaya) ಶಿಲ್ಲಾಂಗ್‌ನಿಂದ ಯಲಹಂಕದ ಬಿಎಸ್‌ಎಫ್‌ ಕ್ಯಾಂಪ್‌ಗೆ ತರಬೇತಿಗಾಗಿ ಬಂದಿದ್ದ ಯೋಧರ ಪೈಕಿ ಮತ್ತೆ 22 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಕೋವಿಡ್‌ ಸೋಂಕಿತರ ಸಂಖ್ಯೆ 113ಕ್ಕೆ ಏರಿಕೆಯಾಗಿದೆ.

ಸೋಂಕಿತ ಯೋಧರಲ್ಲಿ 22 ಮಂದಿ ಯಲಹಂಕ ಕೋವಿಡ್‌ ಆರೈಕೆ ಕೇಂದ್ರ, 61 ಯೋಧರು(BSF Soldiers) ದೇವನಹಳ್ಳಿ ಸಾರ್ವಜನಿಕ ಆಸ್ಪತ್ರೆ ಮತ್ತು 21 ಮಂದಿ ಆಕಾಶ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ 34 ಯೋಧರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ ಎಂದು ದೇವನಹಳ್ಳಿ ತಾಲೂಕಿನ ಕಾರಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ.ಧನಂಜಯ ಅವರು ‘ಕನ್ನಡಪ್ರಭ’ಕ್ಕೆ ಮಾಹಿತಿ ನೀಡಿದರು.

ಬಿಎಸ್‌ಎಫ್‌ ಶಿಬಿರದಲ್ಲಿ ಕೊರೋನಾ ಸ್ಫೋಟ: ಮತ್ತೆ 14 ಯೋಧರಿಗೆ ಸೋಂಕು

ಈ ಯೋಧರ ತಂಡ ಸೆ.15ರಂದು ಯಲಹಂಕದ ಬಿಎಸ್‌ಎಫ್‌ ಕ್ಯಾಂಪ್‌ಗೆ ಬಂದಿತ್ತು. ಮೂರು ದಿನದ ಬಳಿಕ ಕೆಲವರಲ್ಲಿ ಶೀತ, ಕೆಮ್ಮು, ಜ್ವರ ಸೇರಿದಂತೆ ಕೋವಿಡ್‌(Covid19) ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಸೆ.19ರಂದು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಬಳಿಕ ಚಿಕ್ಕಜಾಲದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಕ್ಯಾಂಪ್‌ಗೆ ತೆರಳಿ 150 ಮಂದಿ ಯೋಧರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಿದ್ದು, ಆರಂಭದಲ್ಲಿ 34 ಯೋಧರಲ್ಲಿ ಸೋಂಕು ದೃಢಪಟ್ಟಿತ್ತು.

ನಂತರ ನಡೆದ ಕೋವಿಡ್‌ ಪರೀಕ್ಷೆಯಲ್ಲಿ 50ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿತ್ತು. ಮೂರ್ನಾಲ್ಕು ದಿನಗಳ ಹಿಂದೆ ನಡೆದಿದ್ದ ಪರೀಕ್ಷೆಯಲ್ಲಿ ಮತ್ತೆ 22 ಯೋಧರಲ್ಲಿ ಸೋಂಕು ದೃಢಪಟ್ಟಿತ್ತು. ಬುಧವಾರವೂ ಕೋವಿಡ್‌ ಪರೀಕ್ಷೆ ನಡೆದಿದ್ದು ವರದಿ ಇಂದು ಬರಲಿದೆ. ಸೋಂಕಿತ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ. ಹಾಗಾಗಿ ತರಬೇತಿಗೆಂದು ಬಂದಿರುವ ಎಲ್ಲ ಯೋಧರಿಗೆ ಮತ್ತೊಮ್ಮೆ ಎರಡನೇ ಸುತ್ತಿನ ಕೋವಿಡ್‌ ಪರೀಕ್ಷೆ ಮಾಡಲು ಸೇನೆ ಅಧಿಕಾರಿಗಳು ನಿರ್ಧರಿಸಿದ್ದಾರೆ. ಸೋಂಕಿತರು ವಾಸವಿದ್ದ ಕೊಠಡಿ ಸೇರಿದಂತೆ ಸುತ್ತಮುತ್ತಲ ಪ್ರದೇಶವನ್ನು ಸೋಂಕು ನಿವಾರಕ ದ್ರಾವಣದಿಂದ ಸ್ವಚ್ಛಗೊಳಿಸಲಾಗಿದೆ ಎಂದು ಬಿಎಸ್‌ಎಫ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆಂದು ಡಾ.ಧನಂಜಯ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Karnataka News Live: ಮಾಟಗಾತಿಯ ಮಾತು ಕೇಳಿ ಗಂಡು ಮಗುವಿಗಾಗಿ ಪತ್ನಿಯ ತಲೆ ಕೂದಲು ಕತ್ತರಿಸಿದ ಪತಿ
ಸದನದ ಗೌರವ ಎತ್ತಿಹಿಡಿಯಿರಿ: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಕಿವಿಮಾತು