ಆ. 5ರಿಂದ ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ..!

Kannadaprabha News   | Asianet News
Published : Aug 02, 2021, 07:13 AM ISTUpdated : Aug 02, 2021, 07:16 AM IST
ಆ. 5ರಿಂದ ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ..!

ಸಾರಾಂಶ

*  ಉತ್ತರ ಪ್ರದೇಶ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಯುಭಾರ ಕುಸಿತ *  ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ‘ಆರೆಂಜ್‌ ಅಲರ್ಟ್‌’ *  ಕಾರವಾರ ಹಾಗೂ ಕಲಬುರಗಿಯಲ್ಲಿ ತಲಾ 31.6 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲು 

ಬೆಂಗಳೂರು(ಆ.02): ರಾಜ್ಯದಲ್ಲಿ ಆ.5ರಿಂದ ಮಳೆ ಮತ್ತೆ ಚುರುಕಾಗುವ ಸಂಭವವಿದ್ದು, ಕರಾವಳಿಯ ಮೂರು ಜಿಲ್ಲೆಗಳಿಗೆ ‘ಆರೆಂಜ್‌ ಅಲರ್ಟ್‌’ ಎಚ್ಚರಿಕೆ ನೀಡಲಾಗಿದೆ. ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಗುಡುಗು, ಗಾಳಿ ಸಹಿತ 11 ಸೆಂ.ಮೀ.ಗೂ ಹೆಚ್ಚು ಮಳೆ ನಿರೀಕ್ಷೆ ಇರುವುದರಿಂದ ಆ.5ಮತ್ತು 6ರಂದು ‘ಆರೆಂಜ್‌ ಅಲರ್ಟ್‌’ ಘೋಷಿಸಲಾಗಿದೆ. 

ಈ ಭಾಗದಲ್ಲಿ ಸದ್ಯ ಹಗುರದಿಂದ ಸಾಧಾರಣವಾಗಿ ಕಂಡು ಬರುತ್ತಿರುವ ಮಳೆ ಹಂತ ಹಂತವಾಗಿ ಹೆಚ್ಚಾಗುವ ಸಂಭವವಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಆತಂಕಕಾರಿ ಭವಿಷ್ಯ ನುಡಿದ ಕೋಡಿ ಮಠದ ಸ್ವಾಮಿಜಿ : ಎಚ್ಚರಿಕೆ ಸೂಚನೆ

ಉತ್ತರ ಪ್ರದೇಶ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಯುಭಾರ ಕುಸಿತಗೊಂಡಿದೆ. ಇದರ ಪ್ರಭಾವದಿಂದ ರಾಜ್ಯದ ಅನೇಕ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಹವಾಮಾನ ಏರಿಳಿತ ಹೀಗೆ ಮುಂದುವರಿದರೆ ಆ.5ರಿಂದ ಮತ್ತೆ ಮಳೆ ಆರ್ಭಟಿಸುವ ಸಂಭವವಿದೆ.

ಸುಬ್ರಹ್ಮಣ್ಯದಲ್ಲಿ ಅತ್ಯಧಿಕ ಮಳೆ:

ಕಳೆದ 24 ಗಂಟೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ 7 ಸೆಂ.ಮೀ, ಶಿವಮೊಗ್ಗದ ತಾಳಗುಪ್ಪ 5 ಸೆಂ.ಮೀ, ಚಿಕ್ಕಮಗಳೂರಿನ ಶೃಂಗೇರಿ, ಶಿವಮೊಗ್ಗದ ತುಮ್ರಿ ತಲಾ 4, ಉತ್ತರ ಕನ್ನಡದ ಸಿದ್ದಾಪುರ, ಉಡುಪಿಯ ಕೊಲ್ಲೂರು, ದಕ್ಷಿಣ ಕನ್ನಡದ ಧರ್ಮಸ್ಥಳ, ಶಿವಮೊಗ್ಗದ ಆಗುಂಬೆ, ಚಿಕ್ಕಮಗಳೂರಿನ ಜಯಪುರ, ಕೊಡಗು ಜಿಲ್ಲೆಯ ಸಂತೆಹಳ್ಳಿಯಲ್ಲಿ ತಲಾ 3 ಸೆಂ.ಮೀ. ಮಳೆ ಬಿದ್ದಿದೆ. ಕಾರವಾರ ಹಾಗೂ ಕಲಬುರಗಿಯಲ್ಲಿ ತಲಾ 31.6 ಡಿಗ್ರಿ ಸೆಲ್ಸಿಯಸ್‌ ರಾಜ್ಯದ ಗರಿಷ್ಠ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡೆಲಿವರಿ ಬಾಯ್ಸ್‌ಗೆ ಲಿಫ್ಟ್ ಬಳಸಬೇಡಿ ಎಂದ ಮೇಘನಾ ಫುಡ್ಸ್; ಪೋಸ್ಟರ್ ವೈರಲ್‌ ಆಗ್ತಿದ್ದಂತೆ ಕ್ಷಮೆಯಾಚನೆ
ದರ್ಶನ್ ಗ್ಯಾಂಗ್‌ನಿಂದ ಕೊಲೆಗೀಡಾದ ರೇಣುಕಾಸ್ವಾಮಿಗೆ ಸತ್ತಮೇಲೂ ನೆಮ್ಮದಿಯಿಲ್ಲ! ಸಮಾಧಿ ಧ್ವಂಸಗೈದ ಡೆವಿಲ್ ಗ್ಯಾಂಗ್‌!