'ಬಹಿರಂಗ ಹೇಳಿಕೆ ನೀಡದೆ ತೆಪ್ಪಗಿರಿ' : ಪಕ್ಷದಲ್ಲಿ ಗೊಂದಲ ಸೃಷ್ಟಿಸದಂತೆ ರಾಜಣ್ಣಗೆ ಖರ್ಗೆ ಎಚ್ಚರಿಕೆ!

Published : Feb 21, 2025, 06:00 AM ISTUpdated : Feb 21, 2025, 06:05 AM IST
'ಬಹಿರಂಗ ಹೇಳಿಕೆ ನೀಡದೆ ತೆಪ್ಪಗಿರಿ' : ಪಕ್ಷದಲ್ಲಿ ಗೊಂದಲ ಸೃಷ್ಟಿಸದಂತೆ ರಾಜಣ್ಣಗೆ ಖರ್ಗೆ ಎಚ್ಚರಿಕೆ!

ಸಾರಾಂಶ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಸಚಿವ ರಾಜಣ್ಣಗೆ ಖರ್ಗೆ ಸೂಚನೆ ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ವಿರುದ್ಧ ಹೇಳಿಕೆ ನೀಡಿದ್ದ ರಾಜಣ್ಣಗೆ ಖರ್ಗೆ ಬುದ್ಧಿವಾದ ಹೇಳಿದ್ದಾರೆ ಎನ್ನಲಾಗಿದೆ.

ಬೆಂಗಳೂರು (ಫೆ.21) : ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರದಲ್ಲಿ ಅನಗತ್ಯವಾಗಿ ಹೇಳಿಕೆ ನೀಡದಂತೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರಿಗೆ‌ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತ ಪ್ರಸ್ತಾಪ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ವಿರುದ್ಧ ಬಹಿರಂಗ ಹೇಳಿಕೆಗಳನ್ನು ನೀಡುತ್ತಿರುವ ಬಗ್ಗೆ ರಾಜಣ್ಣ ಅವರಿಗೆ ಖರ್ಗೆ ಎಚ್ಚರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: 'ಎಚ್ಚರಿಕೆ ಗಿಚ್ಚರಿಕೆ ಎಲ್ಲಾ ನಡೆಯೋಲ್ಲ, ಯಾರು ಕೇಳ್ತಾರೆ ಇವೆಲ್ಲ? ಡಿಕೆ ಶಿವಕುಮಾರ ಹೇಳಿಕೆಗೆ ರಾಜಣ್ಣ ತಿರುಗೇಟು!

ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಬಗ್ಗೆ ಮಾತನಾಡುತ್ತಿದ್ದ ರಾಜಣ್ಣ ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಬಹಿರಂಗವಾಗಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದರು. ಅಲ್ಲದೆ ಸಿದ್ದರಾಮಯ್ಯ ಹೆಸರು ದುರ್ಬಳಕೆ ಮಾಡಿಕೊಳ್ಳುವುದು ಬೇಡ ಎಂಬ ಡಿ.ಕೆ.ಶಿವಕುಮಾರ್ ಸಲಹೆಗೆ ಪ್ರತಿಕ್ರಿಯೆಯಾಗಿ, ‘ಡಿ.ಕೆ.ಶಿವಕುಮಾರ್‌ ಅವರೇ ಎಐಸಿಸಿ ಹೆಸರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಮೊದಲು ಅದನ್ನು ನಿಲ್ಲಿಸಲಿ. ಅವರ ಎಚ್ಚರಿಕೆ ಗಿಚ್ಚರಿಕೆ ಎಲ್ಲ ನಡೆಯಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷರ ವಿರುದ್ಧವೇ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ರಾಜಣ್ಣ ಅವರಿಗೆ ಖುದ್ದು ಖರ್ಗೆ ಅವರೇ ಬುದ್ಧಿವಾದ ಹೇಳಿದ್ದಾರೆ ಎನ್ನಲಾಗಿದೆ.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಹೈಕಮಾಂಡ್‌ಗೆ ಬಿಟ್ಟದ್ದು‌. ಸೂಕ್ತ ಸಮಯದಲ್ಲಿ ನಾನು ಏನು ಮಾಡಬೇಕೋ ಮಾಡುತ್ತೇನೆ. ಅನಗತ್ಯವಾಗಿ ಈ ವಿಚಾರದಲ್ಲಿ ಗೊಂದಲ ಸೃಷ್ಟಿ ಮಾಡಬೇಡಿ. ಯಾವುದೇ ಕಾರಣಕ್ಕೂ ಬಹಿರಂಗ ಹೇಳಿಕೆ ನೀಡಬೇಡಿ ಎಂದು ತಿಳಿಸಿದ್ದಾಗಿ ಹೇಳಲಾಗಿದೆ. 

ಇದನ್ನೂ ಓದಿ: ದಿನಬೆಳಗಾದ್ರೆ ಸಿದ್ದರಾಮಯ್ಯರ ಹೆಸರು ದುರ್ಬಳಕೆ ನಿಲ್ಲಿಸಿ: ಚುನಾವಣೆಗೆ ಬೇಕೇ ಬೇಕು ಎಂದು ಜಾರಕಿಹೊಳಿಗೆ ಡಿಕೆಶಿ ಪರೋಕ್ಷ ತಿರುಗೇಟು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌