ರಾಮನಗರಕ್ಕೆ ಏರ್‌ಪೋರ್ಟ್‌, ಕನಕಪುರ ರಸ್ತೆಗೆ ಸ್ಕೈಡೆಕ್‌?

Published : Nov 07, 2024, 09:04 AM IST
ರಾಮನಗರಕ್ಕೆ ಏರ್‌ಪೋರ್ಟ್‌, ಕನಕಪುರ ರಸ್ತೆಗೆ ಸ್ಕೈಡೆಕ್‌?

ಸಾರಾಂಶ

ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಲ್ಲಿ ಸ್ಥಾಪನೆಯಾಗಬೇಕು ಎಂಬ ಬಗ್ಗೆ ತೀವ್ರ ಪೈಪೋಟಿ ನಡೆದಿರುವ ಈ ಹಂತದಲ್ಲೇ ಕೆಂಗೇರಿ ಸಮೀಪದ ಹೆಮ್ಮಿಗೆಪುರದಲ್ಲಿ ನಿರ್ಮಿಸಲು ಉದ್ದೇಶಿಸಿದ್ದ ಸ್ಕೈಡೆಕ್‌ ಬಹುತೇಕ ಕನಕಪುರ ರಸ್ತೆಗೆ ಸ್ಥಳಾಂತರವಾಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. 

ಬೆಂಗಳೂರು (ನ.07): ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಲ್ಲಿ ಸ್ಥಾಪನೆಯಾಗಬೇಕು ಎಂಬ ಬಗ್ಗೆ ತೀವ್ರ ಪೈಪೋಟಿ ನಡೆದಿರುವ ಈ ಹಂತದಲ್ಲೇ ಕೆಂಗೇರಿ ಸಮೀಪದ ಹೆಮ್ಮಿಗೆಪುರದಲ್ಲಿ ನಿರ್ಮಿಸಲು ಉದ್ದೇಶಿಸಿದ್ದ ಸ್ಕೈಡೆಕ್‌ ಬಹುತೇಕ ಕನಕಪುರ ರಸ್ತೆಗೆ ಸ್ಥಳಾಂತರವಾಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ತನ್ಮೂಲಕ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಿಡದಿ, ರಾಮನಗರ ಭಾಗದಲ್ಲಿ ನಿರ್ಮಾಣವಾಗಲಿದೆಯೇ ಎಂಬ ಪ್ರಶ್ನೆ ಉದ್ಬವವಾಗಲು ಕಾರಣವಾಗಿದೆ.

ಉನ್ನತ ಮೂಲಗಳ ಪ್ರಕಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಒತ್ತಡ ನಿವಾರಣೆಗಾಗಿ ನಿರ್ಮಿಸಲು ಉದ್ದೇಶಿಸಿರುವ ಎರಡನೇ ವಿಮಾನ ನಿಲ್ದಾಣ ಬಿಡದಿ ಸೇರಿದಂತೆ ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ ಸರ್ಕಾರದ ಮಟ್ಟದಲ್ಲಿ ಇದೆ. ಹೀಗಾಗಿಯೇ ಸ್ಕೈಡೆಕ್‌ ಸ್ಥಳಾಂತರದ ವಿಚಾರ ಮುನ್ನೆಲೆಗೆ ಬಂದಿದೆ. ಬೆಂಗಳೂರು ನಗರಾಭಿವೃದ್ಧಿ ಇಲಾಖೆ 250 ಮೀಟರ್‌ ಎತ್ತರದ ಸ್ಕೈಡೆಕ್‌ ನಿರ್ಮಿಸಲು ಮುಂದಾಗಿದ್ದು, ಅದಕ್ಕಾಗಿ ಕೆಂಗೇರಿ ಬಳಿಯ ಹೆಮ್ಮಿಗೆಪುರದಲ್ಲಿ ಸ್ಥಳ ಗುರುತಿಸಲಾಗಿದೆ. ಅದಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಸಾರ್ವಜನಿಕರಿಂದ ಆಕ್ಷೇಪಣೆಯನ್ನು ಆಹ್ವಾನಿಸಿದೆ.

ಡಿಸಿ, ಎಸಿಗೆ ಧಮ್ಕಿ ಹಾಕಿದ್ದಾನೆ ಸಚಿವ ಜಮೀರ್‌: ಶಾಸಕ ಬಸನಗೌಡ ಯತ್ನಾಳ

ಆದರೆ, ಇದೀಗ ಬಿಡದಿ ಸೇರಿದಂತೆ ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಿಸಬೇಕು ಎಂಬ ಚರ್ಚೆ ಶುರುವಾಗಿದೆ. ಒಂದು ವೇಳೆ ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿಯೇ ವಿಮಾನ ನಿಲ್ದಾಣ ನಿರ್ಮಿಸಲು ನಿರ್ಧರಿಸಿದರೆ, ವಿಮಾನ ನಿಲ್ದಾಣದ 25 ಕಿ.ಮೀ. ಸುತ್ತಳತೆಯಲ್ಲಿ ಯಾವುದೇ ಹೈ ರೈಸ್‌ ಕಟ್ಟಡ ನಿರ್ಮಿಸಲು ಅನುಮತಿಯಿಲ್ಲ. ಈ ಕಾರಣದಿಂದಲೇ ಸ್ಕೈಡೆಕ್‌ ನಿರ್ಮಾಣಕ್ಕಾಗಿ ಹೆಮ್ಮಿಗೆಪುರದ ಜತೆಗೆ ಹೊಸ ಜಾಗವನ್ನು ಗುರುತಿಸುವ ಕಾರ್ಯ ನಡೆಸಲಾಗುತ್ತಿದೆ. ಹೆಮ್ಮಿಗೆಪುರದಲ್ಲಿ ಸ್ಕೈಡೆಕ್‌ ನಿರ್ಮಿಸಲಾಗದಿದ್ದರೆ, ಕನಕಪುರ ರಸ್ತೆಯಲ್ಲಿನ ತಾತಗುಣಿಯ ರೋರಿಕ್‌ ಎಸ್ಟೇಟ್‌ನಲ್ಲಿ ಸ್ಕೈಡೆಕ್‌ ನಿರ್ಮಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ.

ಸ್ಕೈಡೆಕ್‌ ನಿರ್ಮಿಸಲು ಈ ಹಿಂದೆ ಎನ್‌ಜಿಇಎಫ್‌, ಯಶವಂತಪುರ ಬಳಿಯ ಸಾಬೂನು ಕಾರ್ಖಾನೆ, ವೈಟ್‌ಫೀಲ್ಡ್‌, ಜಿಕೆವಿಕೆ, ರೇಸ್‌ಕೋರ್ಸ್‌, ಬೆಂಗಳೂರು ಅರಮನೆ ಆವರಣ ಹೀಗೆ ಹಲವು ಜಾಗಗಳನ್ನು ಗುರುತಿಸಲಾಗಿತ್ತು. ಆದರೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಎಚ್‌ಎಎಲ್‌ ವಿಮಾನ ನಿಲ್ದಾಣದ ಸುರಕ್ಷತೆ ದೃಷ್ಟಿಯಿಂದಾಗಿ ಆ ಸ್ಥಳಗಳಲ್ಲಿ ಸ್ಕೈಡೆಕ್‌ ನಿರ್ಮಾಣಕ್ಕೆ ಅನುಮತಿ ಸಿಗಲಿಲ್ಲ. ಅಂತಿಮವಾಗಿ ಹೆಮ್ಮಿಗೆಪುರದಲ್ಲಿ ಜಾಗ ಗುರುತಿಸಲಾಯಿತಾದರೂ ಇದೀಗ ಆ ಸ್ಥಳವನ್ನೂ ಬದಲಿಸುವ ಸಾಧ್ಯತೆಯಿದೆ.

ಮುಡಾ ಹಗರಣ ರಾಜ್ಯಕ್ಕೆ, ಕಾಂಗ್ರೆಸ್‌ ಪಕ್ಷಕ್ಕೆ ಕಪ್ಪು ಚುಕ್ಕೆ: ಕೆ.ಎಸ್‌.ಈಶ್ವರಪ್ಪ

2ನೇ ವಿಮಾನ ನಿಲ್ದಾಣ ನಿರ್ಮಾಣ ಏತಕ್ಕೆ?: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಸುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲಿದೆ. 2023-24ನೇ ಸಾಲಿನಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು 3.75 ಕೋಟಿ ಜನರು ಬಳಕೆ ಮಾಡಿದ್ದಾರೆ. ಹೀಗೆ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿರುವ ಕಾರಣದಿಂದಾಗಿ 2ನೇ ಟರ್ಮಿನಲನ್ನು ನಿರ್ಮಿಸಿ, ಸೇವೆಗೆ ನೀಡಲಾಗಿದೆ. ಈ ಕಾರಣದಿಂದಲೇ ಬೆಂಗಳೂರಿಗಾಗಿಯೇ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!