ಪದೇಪದೆ ತೊಂದರೆ ಕೊಟ್ಟರೆ ವಿಷ ಕುಡಿಯುತ್ತೇನೆ: ನೇಹಾ ತಂದೆ ನಿರಂಜನ ಹಿರೇಮಠ್

Published : Jun 24, 2024, 09:47 AM IST
ಪದೇಪದೆ ತೊಂದರೆ ಕೊಟ್ಟರೆ ವಿಷ ಕುಡಿಯುತ್ತೇನೆ: ನೇಹಾ ತಂದೆ ನಿರಂಜನ ಹಿರೇಮಠ್

ಸಾರಾಂಶ

‘ನಮ್ಮ ಸಮಾಜದ ವ್ಯಕ್ತಿಯ ಕೊಲೆಯಾಗಿದೆ. ಅವನನ್ನು ನೋಡಲು ಹೋಗುತ್ತಿದ್ದರೆ ಪೊಲೀಸರು ತಡೆಯುತ್ತಿದ್ದಾರೆ. ಪದೇ ಪದೇ ಈ ರೀತಿಯ ತೊಂದರೆ ಕೊಡುತ್ತಿದ್ದರೆ ನಾನು ವಿಷ ಸೇವಿಸುತ್ತೇನೆ’ ಎಂದು ಮೃತ ನೇಹಾ ಹಿರೇಮಠ ತಂದೆ, ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಆಕ್ರೋಶ ವ್ಯಕ್ತಪಡಿಸಿದ ಘಟನೆ ಭಾನುವಾರ ನಡೆಯಿತು.

ಹುಬ್ಬಳ್ಳಿ (ಜೂ.24): ‘ನಮ್ಮ ಸಮಾಜದ ವ್ಯಕ್ತಿಯ ಕೊಲೆಯಾಗಿದೆ. ಅವನನ್ನು ನೋಡಲು ಹೋಗುತ್ತಿದ್ದರೆ ಪೊಲೀಸರು ತಡೆಯುತ್ತಿದ್ದಾರೆ. ಪದೇ ಪದೇ ಈ ರೀತಿಯ ತೊಂದರೆ ಕೊಡುತ್ತಿದ್ದರೆ ನಾನು ವಿಷ ಸೇವಿಸುತ್ತೇನೆ’ ಎಂದು ಮೃತ ನೇಹಾ ಹಿರೇಮಠ ತಂದೆ, ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಆಕ್ರೋಶ ವ್ಯಕ್ತಪಡಿಸಿದ ಘಟನೆ ಭಾನುವಾರ ನಡೆಯಿತು.

ಇಲ್ಲಿನ ಲೋಹಿಯಾ ನಗರದಲ್ಲಿ ಶನಿವಾರ ರಾತ್ರಿ ಕೊಲೆಗೀಡಾಗಿದ್ದ ಆಟೋ ಚಾಲಕ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಪುತ್ರ ಆಕಾಶ ಮಠಪತಿ(hubballi akash mathpati murder) ಅವರ ಮರಣೋತ್ತರ ಪರೀಕ್ಷೆ ಭಾನುವಾರ ನಡೆಯಿತು. ಈ ವೇಳೆ ಕಿಮ್ಸ್‌ (KIMS hospital hubballi)ಶವಾಗಾರಕ್ಕೆ ನಿರಂಜನ ಹಿರೇಮಠ(Niranja hiremath) ತೆರಳುತ್ತಿದ್ದ ವೇಳೆ ಅವರನ್ನು ಪೊಲೀಸರು ತಡೆದು, ನೀವು ಶವಾಗಾರಕ್ಕೆ ಹೋಗಬೇಡಿ ಎಂದರು. ಈ ವೇಳೆ, ‘ನಾನು ಹೋಗುತ್ತೇನೆ’ ಎಂದು ನಿರಂಜನ, ಪೊಲೀಸರೊಂದಿಗೆ ವಾಗ್ವಾದ ನಡೆಸಿದರು. ನನ್ನ ಮೇಲೆ ಒತ್ತಡ ಹಾಕಿ ಪೊಲೀಸರು ಬಂಧನ ಮಾಡಲು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವೇಶ್ಯಾವಾಟಿಕೆ ಸಂತ್ರಸ್ತೆಯನ್ನ ಶಿಕ್ಷಿಸುವ ಕಾನೂನಿಲ್ಲ: ಹೈಕೋರ್ಟ್‌

ಬಳಿಕ, ಸುದ್ದಿಗಾರರ ಜೊತೆ ಮಾತನಾಡಿದ ನಿರಂಜನ್‌, ನಮ್ಮದೇ ಸಮಾಜದ ವ್ಯಕ್ತಿಯ ಕೊಲೆಯಾಗಿದೆ. ಈ ಕುರಿತು ನ್ಯಾಯ ಕೇಳುವುದು ತಪ್ಪಾ? ಈಗಾಗಲೇ ನನ್ನ ಮಗಳ ಕೊಲೆಯಾಗಿದೆ. ಇನ್ನು ಕೆಲವು ದಿನಗಳಲ್ಲಿ ನನ್ನ ಕೊಲೆಯಾದರೂ ಅಚ್ಚರಿಯಿಲ್ಲ. ಪೊಲೀಸರು ಕಾನೂನು ಕಾಪಾಡುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು. ಪೊಲೀಸರ ಈ ಕಾರ್ಯವೈಖರಿ ಕುರಿತು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗೆ ಮಾಹಿತಿ ನೀಡುತ್ತೇನೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!
New Hate-Speech Law: ದ್ವೇಷ ಭಾಷಣ ತಡೆಗೆ ಹೊಸ ಕಾನೂನು: ಈ ಕಾಯ್ದೆ ತರ್ತಿರೋ ಟಾರ್ಗೆಟ್ ನಾನೇ ಎಂದ ಯತ್ನಾಳ್!