ಚಂಡಮಾರುತ 6 ಕಿ.ಮೀ. ದೂರವಿದ್ದಾಗಲೇ ಅಲಾರ್ಮ್‌ ವ್ಯವಸ್ಥೆ: ಅಶೋಕ್‌

Kannadaprabha News   | Asianet News
Published : Aug 18, 2021, 07:12 AM IST
ಚಂಡಮಾರುತ 6 ಕಿ.ಮೀ. ದೂರವಿದ್ದಾಗಲೇ ಅಲಾರ್ಮ್‌ ವ್ಯವಸ್ಥೆ: ಅಶೋಕ್‌

ಸಾರಾಂಶ

*   ಗ್ರಾ.ಪಂ.ನಲ್ಲಿ ಸಿಡಿಲು ಮುನ್ಸೂಚನಾ ವ್ಯವಸ್ಥೆ *  ಪ್ರತಿ ಅಲರ್ಟ್‌ ವ್ಯವಸ್ಥೆಗೆ 1.50 ಲಕ್ಷ ರು. ವೆಚ್ಚ *  ಕೇಂದ್ರ ಸರ್ಕಾರದಿಂದ ಅನುದಾನ 

ಬೆಂಗಳೂರು(ಆ.18): ಮೀನುಗಾರರಿಗೆ ಮತ್ತು ಸಮುದ್ರ ತೀರ ಪ್ರದೇಶದ ನಿವಾಸಿಗಳಿಗೆ ಚಂಡಮಾರುತದ ಮುನ್ಸೂಚನೆ ನೀಡುವ ಅಲರ್ಟ್‌ ಅಲಾರಾಂ ವ್ಯವಸ್ಥೆ ಅಳವಡಿಸಲು ತೀರ್ಮಾನಿಸಲಾಗಿದ್ದು, ಆರು ಕಿ.ಮಿ. ದೂರದಿಂದಲೇ ಮುನ್ಸೂಚನೆ ನೀಡುವ ಸೈರನ್‌ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಚಂಡಮಾರುತ ಪೀಡಿತ ಕರಾವಳಿ ಪ್ರದೇಶದ ಒಟ್ಟು 40 ಕಡೆಗಳಲ್ಲಿ ಮುನ್ಸೂಚನೆ ನೀಡುವ ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಇದನ್ನು 60ಕ್ಕೆ ಹೆಚ್ಚಳ ಮಾಡಲು ಚಿಂತನೆ ನಡೆದಿದೆ. ಕೇಂದ್ರ ಸರ್ಕಾರದಿಂದ ಇದಕ್ಕೆ ಅನುದಾನ ಬರಲಿದೆ. ಒಂದೊಂದು ಕೇಂದ್ರಕ್ಕೆ 12 ಕೋಟಿ ರು. ವೆಚ್ಚವಾಗಲಿದೆ. ಈ ಮೂಲಕ ತೀರ ಪ್ರದೇಶದ ಜನರಿಗೆ, ಮೀನುಗಾರಿಕೆಗೆ ಚಂಡಮಾರುತಗಳ ಸುಳಿವನ್ನು ನೀಡಲಾಗುವುದು ಎಂದರು ಇದರಿಂದ ಕರಾವಳಿ ಭಾಗದ ಜನರಿಗೆ ಅನುಕೂಲವಾಗಲಿದೆ. ಅದರಲ್ಲಿಯೂ ಮೀನುಗಾರರಿಗೆ ಹೆಚ್ಚು ಉಪಯೋಗವಾಗಲಿದೆ ಎಂದು ತಿಳಿಸಿದರು.

ಭೂಮಿಗಪ್ಪಳಿಸಲಿದೆ ಸೌರ ಚಂಡಮಾರುತ: GPS, ನೆಟ್‌ವರ್ಕ್‌ ಸಮಸ್ಯೆ

ಗ್ರಾ.ಪಂ.ನಲ್ಲಿ ಸಿಡಿಲು ಮುನ್ಸೂಚನಾ ವ್ಯವಸ್ಥೆ:

ರಾಜ್ಯದಲ್ಲಿ ಸಿಡಿಲು ಹೊಡೆದು ಹಲವಾರು ಮಂದಿ ಸಾವನ್ನಪ್ಪುತ್ತಿದ್ದಾರೆ. ಈ ಸಂಬಂಧ ಒಂದು ತಿಂಗಳಲ್ಲಿ ಸಿಡಿಲು ಹಾವಳಿ ಹೆಚ್ಚಿರುವ ಗ್ರಾಮಗಳಲ್ಲಿ ಮುನ್ಸೂಚನಾ ವ್ಯವಸ್ಥೆ ಅಳವಡಿಕೆ ಮಾಡಲಾಗುವುದು ಎಂದು ಇದೇ ವೇಳೆ ಅಶೋಕ್‌ ಮಾಹಿತಿ ನೀಡಿದರು.

ಈ ವ್ಯವಸ್ಥೆಯಿಂದ ಒಂದೂವರೆ ಕಿ.ಮೀ.ವರೆಗೆ ಕೇಳಿಸುವಷ್ಟುಮೈಕ್‌ ಸಿಸ್ಟಂ ಮೂಲಕ ಅಲರ್ಟ್‌ ಮಾಡಲಾಗುತ್ತದೆ. ಬೆಂಗಳೂರಿನಿಂದ ಕೇಂದ್ರಿಕೃತ ವ್ಯವಸ್ಥೆಯೊಂದಿಗೆ ಸಿಡಿಲು ಬಗ್ಗೆ ಮುನ್ಸೂಚನೆ ನೀಡಲಾಗುತ್ತದೆ. ಪ್ರತಿ ಅಲರ್ಟ್‌ ವ್ಯವಸ್ಥೆಗೆ 1.50 ಲಕ್ಷ ರು. ವೆಚ್ಚವಾಗಲಿದೆ. ಇದು ಗ್ರಾ.ಪಂ.ಗಳಲ್ಲಿ ವ್ಯವಸ್ಥೆ ಮಾಡಲಾಗುತ್ತದೆ ಎಂದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಯಕ್ಷಗಾನ ಕಲಾವಿದರ ಅಪಮಾನ: 'ಬಿಳಿಮಲೆಗೆ ಒಂದು ನೋಟಿಸ್ ಕೊಡೋಕೂ ಕಷ್ಟವೇ? ಸುನೀಲ್ ಕುಮಾರ್ ಪ್ರಶ್ನೆ, ಈ ವಿಷಯ ದೊಡ್ಡದು ಮಾಡೋದು ಬೇಡ ಎಂದ ತಂಗಡಗಿ
ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!