ಎಲೆಕ್ಟ್ರಾನಿಕ್ಸ್ ಕ್ಷೇತ್ರದ ಸಮಸ್ತ ಚಟುವಟಿಕೆಗಳೂ ರಾಜ್ಯದಲ್ಲೇ ನಡೆಯಬೇಕು, ಎಂ ಬಿ ಪಾಟೀಲ

Published : Sep 18, 2026, 02:34 PM IST
MB Patil

ಸಾರಾಂಶ

ಕರ್ನಾಟಕವನ್ನು ಎಲೆಕ್ಟ್ರಾನಿಕ್ಸ್ ಉದ್ಯಮದ ಕ್ಲಸ್ಟರ್ ಆಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಭಾರತದಲ್ಲೇ ಎಲೆಕ್ಟ್ರಾನಿಕ್ಸ್‌ನ ಪ್ರತಿಯೊಂದು ಹಂತವೂ ರಾಜ್ಯದಲ್ಲಿ ಅಭಿವೃದ್ಧಿಯಾಗುವಂತೆ ಮಾಡಲಾಗುತ್ತಿದೆ. ಈ ಕುರಿತು ಸಚಿವರ ಎಂಬಿ ಪಾಟೀಲ್ ಮಹತ್ವದ ಅಪ್‌ಡೇಟ್ ನೀಡಿದ್ದಾರೆ.

ಬೆಂಗಳೂರು (ಸೆ.18): ರಾಜ್ಯವು ಜಾಗತಿಕ ಮಟ್ಟದಲ್ಲಿ ಎಲೆಕ್ಟ್ರಾನಿಕ್ಸ್ ಕ್ಷೇತ್ರದ ಬಹುಮುಖ್ಯ ತಾಣವಾಗಬೇಕು. ಇದಕ್ಕಾಗಿ ನಮ್ಮಲ್ಲೇ ವಿನ್ಯಾಸ, ಉತ್ಪಾದನೆ, ಪರೀಕ್ಷೆ ಮತ್ತು ರಫ್ತು ವಹಿವಾಟು ಸೇರಿದಂತೆ ಪ್ರತಿಯೊಂದು ಚಟುವಟಿಕೆಯೂ ನಡೆಯುವಂತೆ ಆಗಬೇಕು ಎನ್ನುವುದೇ ನಮ್ಮ ಗುರಿಯಾಗಿದೆ ಎಂದು ಸಚಿವ ಎಂಬಿ ಪಾಟೀಲ ಹೇಳಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಏರ್ಪಡಿಸಿರುವ ಕರ್ನಾಟಕ ವಿದ್ಯುನ್ಮಾನ ನಾಯಕತ್ವ ಸಮಾವೇಶದಲ್ಲಿ ಪಾಲ್ಗೊಂಡ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಕರ್ನಾಟಕವನ್ನು ಎಲೆಕ್ಟ್ರಾನಿಕ್ಸ್ ಹಬ್ ಆಗಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು.

ರಾಜ್ಯದಲ್ಲಿ 20 ಸಾವಿರ ಚಿಪ್ ವಿನ್ಯಾಸಕಾರರು

ಎಲೆಕ್ಟ್ರಾನಿಕ್ಸ್ ಕ್ಷೇತ್ರವು ನಮ್ಮ ಬದುಕಿನ ಪ್ರತಿಯೊಂದು ಅಂಶವನ್ನೂ ಆವರಿಸಿಕೊಂಡಿದೆ. ರಾಜ್ಯದಲ್ಲಿ 20 ಸಾವಿರಕ್ಕೂ ಹೆಚ್ಚು ಚಿಪ್ ವಿನ್ಯಾಸಕಾರರು ಮತ್ತು 10 ಸಾವಿರಕ್ಕೂ ಹೆಚ್ಚು ಅನಲಾಗ್ ಎಂಜಿನಿಯರುಗಳು ಇದ್ದಾರೆ. ನಮ್ಮಲ್ಲಿ ಈಗಾಗಲೇ ಫಾಕ್ಸ್ ಕಾನ್, ವಿಸ್ಟ್ರಾನ್, ಎಟಿ & ಎಸ್, ಅಪ್ಲೈಡ್ ಮೆಟೀರಿಯಲ್ಸ್, ಸೆಂಟಂ, ಕೇನ್ಸ್, ಟಾಟಾ ಎಲೆಕ್ಟ್ರಾನಿಕ್ಸ್, ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್, ಡೆಲ್ಟಾ ಎಲೆಕ್ಟ್ರಾನಿಕ್ಸ್ ಮುಂತಾದ ಹಲವು ದಿಗ್ಗಜ ಕಂಪನಿಗಳು ನೆಲೆಯೂರಿವೆ. ಬಹಳ ದೀರ್ಘಾವಧಿ ಲಾಭವನ್ನು ಪರಿಗಣಿಸಿ ಬೆಂಗಳೂರು, ಮೈಸೂರು ಮತ್ತು ಹುಬ್ಬಳ್ಳಿ-ಧಾರವಾಡವನ್ನು ಎಲೆಕ್ಟ್ರಾನಿಕ್ಸ್ ಉದ್ಯಮದ ಕ್ಲಸ್ಟರ್ಸ್ ಆಗಿ ಬೆಳೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

100ಕ್ಕೂ ಹೆಚ್ಚು ಕಂಪನಿಗಳಿಂದ ಚಿಪ್ ಅಭಿವೃದ್ಧಿ

ರಾಜ್ಯದಲ್ಲಿ ಚಿಪ್ ವಿನ್ಯಾಸ ಮಾಡುತ್ತಿರುವ 100ಕ್ಕೂ ಹೆಚ್ಚು ಕಂಪನಿಗಳಿದ್ದು, ದೇಶದ ಶೇಕಡ 55ರಷ್ಟು ಐಒಟಿ (ಇಂಟರ್ನೆಟ್ ಆಫ್ ಥಿಂಗ್ಸ್) ನವೋದ್ಯಮಗಳು ನಮ್ಮಲ್ಲೇ ಇವೆ. ಇಲ್ಲಿನ ಕೈಗಾರಿಕಾ ಪರಿವ್ಯವಸ್ಥೆಯಲ್ಲಿ ಸಾಫ್ಟ್-ವೇರ್, ಹಾರ್ಡ್-ವೇರ್ ಎಂಜಿನಿಯರಿಂಗ್, ಪರೀಕ್ಷಾ ವ್ಯವಸ್ಥೆ, ಉತ್ಪಾದನೆ, ಕೈಗಾರಿಕಾ ತಂತ್ರಜ್ಞಾನ ಮತ್ತು ನವೋದ್ಯಮ ನಾವೀನ್ಯತೆ ಎಲ್ಲವೂ ಮೇಳೈಸಿಕೊಂಡಿರುವುದು ವರದಾನವಾಗಿದೆ ಎಂದು ಅವರು ನುಡಿದಿದ್ದಾರೆ.

ದೇಶದಲ್ಲಿ ನಡೆಯುತ್ತಿರುವ ವಿದ್ಯುನ್ಮಾನ ವಿನ್ಯಾಸದಲ್ಲಿ ರಾಜ್ಯದ ಪಾಲು ಶೇಕಡ 40ರಷ್ಟಿದ್ದು, ಉತ್ಪಾದನೆಯಲ್ಲಿ ಶೇಕಡ 10ರಷ್ಟು ಪಾಲು ನಮ್ಮದಾಗಿದೆ. ಎಲೆಕ್ಟ್ರಾನಿಕ್ಸ್ ಉತ್ಪಾದನೆ, ಬಿಡಿಭಾಗಗಳ ತಯಾರಿಕೆ, ಸೆಮಿಕಂಡಕ್ಟರ್ ಪೂರೈಕೆ ಸರಪಳಿಯ ಬಲವರ್ಧನಗಳಿಗೆ ಆದ್ಯತೆ ಕೊಡುವ ಮಧ್ಯಮ, ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳು, ನವೋದ್ಯಮಗಳು, ಹೂಡಿಕೆದಾರರು, ಪಾಲುದಾರರರಿಗೆ ಸರಕಾರದ ಸಂಪೂರ್ಣ ಬೆಂಬಲವಿದೆ ಎಂದು ಪಾಟೀಲ ಭರವಸೆ ಕೊಟ್ಟಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Namma Metro Phase III: ನಮ್ಮ ಮೆಟ್ರೋ 3ನೇ ಹಂತದ ಡಬಲ್ ಡೆಕ್ಕರ್ ಯೋಜನೆ ವಿಳಂಬಕ್ಕೆ ಕಾರಣವೇನು?
ಮಂಗಳೂರಿನಲ್ಲಿ ಸಿಎಂ ಡಿನ್ನರ್ ಪಾರ್ಟಿಗೆ ಬಿಜೆಪಿ ಗೈರು, ಕಾರಣ ಹೇಳಿ ಊಟಕ್ಕೆ ಬಾರದ ಕಮಲ ನಾಯಕರು