ಪರಿಶಿಷ್ಟ ಪಂಗಡದ ಎಲ್ಲಾ ವಸತಿ ಶಾಲೆಗಳ ಮರುನಾಮಕರಣ: ಸಿಎಂ ಸಿದ್ದರಾಮಯ್ಯ ಘೋಷಣೆ

By Santosh NaikFirst Published Oct 17, 2024, 4:26 PM IST
Highlights

ರಾಜ್ಯದ ಎಲ್ಲಾ ಪರಿಶಿಷ್ಟ ಪಂಗಡಗಳ ಸರ್ಕಾರಿ ವಸತಿ ಶಾಲೆಗಳನ್ನು ಮಹರ್ಷಿ ವಾಲ್ಮೀಕಿ ವಸತಿ ಶಾಲೆ ಎಂದು ಮರುನಾಮಕರಣ ಮಾಡಲಾಗುವುದು. ರಾಯಚೂರು ವಿಶ್ವವಿದ್ಯಾನಿಲಯವನ್ನು ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು. ವಾಲ್ಮೀಕಿ ಜಯಂತಿಯಂದು ಸಿಎಂ ಈ ಘೋಷಣೆ ಮಾಡಿದ್ದಾರೆ.

ಬೆಂಗಳೂರು (ಅ.17): ರಾಜ್ಯದ ಎಲ್ಲಾ ಪರಿಶಿಷ್ಟ ಪಂಗಡಗಳ (ಎಸ್‌ಟಿ) ಸರ್ಕಾರಿ ವಸತಿ ಶಾಲೆಗಳನ್ನು ಮಹರ್ಷಿ ವಾಲ್ಮೀಕಿ ವಸತಿ ಶಾಲೆ ಎಂದು ಮರುನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಘೋಷಿಸಿದ್ದಾರೆ. ರಾಯಚೂರು ವಿಶ್ವವಿದ್ಯಾನಿಲಯವನ್ನು ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ರಾಮಾಯಣದ ಕರ್ತೃ ಮಹರ್ಷಿ ವಾಲ್ಮೀಕಿ ಅವರ ಗೌರವಾರ್ಥವಾಗಿ ಆಚರಿಸಲಾಗುವ ವಾಲ್ಮೀಕಿ ಜಯಂತಿಯಂದು ಅವರು ಈ ಘೋಷಣೆ ಮಾಡಿದ್ದಾರೆ. ಗುರುವಾರ ಬೆಳಗ್ಗೆ ಸಿಎಂ ಎಕ್ಸ್‌ನಲ್ಲಿ ಸರಣಿ ಪೋಸ್ಟ್‌ಗಳನ್ನು ಮಾಡುವ ಮೂಲಕ ಮಹರ್ಷಿ ವಾಲ್ಮೀಕಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ‘ಪ್ರತಿಭೆ ಎಂಬುದು ಜನ್ಮದ ವರವಲ್ಲ, ಸಾಧನೆ ಎಂಬುದನ್ನು ತೋರಿಸಿಕೊಟ್ಟ ರಾಮಾಯಣ ಮಹಾಕಾವ್ಯ ರಚಿಸಿದ ದಲಿತ ಮೇಧಾವಿ ಆದಿಕವಿ ವಾಲ್ಮೀಕಿ ಅವರ ಜೀವನ ಮತ್ತು ಸಾಧನೆ ನಮಗೆಲ್ಲರಿಗೂ ಸ್ಫೂರ್ತಿಯಾಗಲಿ’ ಎಂದಿದ್ದಾರೆ.

ವಾಲ್ಮೀಕಿ ಜಯಂತಿ 2024: ಕವಿಕುಲ ಸಾರ್ವಭೌಮ ಮಹರ್ಷಿ ವಾಲ್ಮೀಕಿ

ವಿಧಾನಸೌಧದ ಮುಂಭಾಗದಲ್ಲಿರುವ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪನಮನ ಸಲ್ಲಿಸಿದ ಮುಖ್ಯಮಂತ್ರಿಗಳು. ಕಾರ್ಯಕ್ರಮದ ಚಿತ್ರಗಳನ್ನೂ ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಹಲವು ರಾಜ್ಯಗಳಲ್ಲಿ ರಜೆ: ಮಹರ್ಷಿ ವಾಲ್ಮೀಕಿ ಜಯಂತಿಯಂದು ಉತ್ತರ ಪ್ರದೇಶದಲ್ಲಿ ಶಾಲಾ-ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದ್ದು, ಪಂಜಾಬ್, ಹರಿಯಾಣ ಮತ್ತು ಮಧ್ಯಪ್ರದೇಶದಂತಹ ರಾಜ್ಯಗಳು ಸಾರ್ವಜನಿಕ ರಜೆ ಘೋಷಿಸಿವೆ.

Latest Videos

ವಾಲ್ಮೀಕಿ ಪ್ರಶಸ್ತಿಗೆ ಭಾಜನರಾದ ಐವರ ಹಿನ್ನೆಲೆ ಬಹಿರಂಗ: 5 ಲಕ್ಷ ರೂ. ನಗದು, 20 ಗ್ರಾಂ ಬಂಗಾರ!

ಮಹರ್ಷಿ ವಾಲ್ಮೀಕಿಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದದ್ದು

  • ಮಹರ್ಷಿ ವಾಲ್ಮೀಕಿಯನ್ನು ಆದಿ ಕವಿ ಎಂದೂ ಕರೆಯಲಾಗುತ್ತಿತ್ತು.
  • ಅವರು ರಾಮಾಯಣದ ಲೇಖಕರು. ಭಗವದ್ಗೀತೆ ಜೊತೆಗೆ ಹಿಂದೂ ಧರ್ಮದ ಅತ್ಯಂತ ಮಹತ್ವದ ಮಹಾಕಾವ್ಯಗಳಲ್ಲಿ ಒಂದಾಗಿದೆ.
  • ಕೆಲವು ಪ್ರಾಚೀನ ದಂತಕಥೆಗಳ ಪ್ರಕಾರ, ವಾಲ್ಮೀಕಿ ಬ್ರಾಹ್ಮಣ ಕುಟುಂಬದಲ್ಲಿ ಅಗ್ನಿ ಶರ್ಮ ಜನಿಸಿದರು.
  • ಅವರು ತನ್ನ ಜೀವನೋಪಾಯಕ್ಕಾಗಿ ಕಳ್ಳನಾಗಿದ್ದರು. ಆದರೆ ಒಮ್ಮೆ ಅವರು ಮಹಾನ್ ಋಷಿಯಾದ ನಾರದನನ್ನು ಭೇಟಿಯಾಗಿ ಅವನೊಂದಿಗೆ ತನ್ನ ಕರ್ತವ್ಯಗಳನ್ನು ಚರ್ಚಿಸಿರು. ಬಳಿಕ, ನಾರದನ ಬೋಧನೆಯಿಂದ ಪ್ರೇರಿತನಾದ ಅಗ್ನಿ ಶರ್ಮ ತಪಸ್ಸು ಮಾಡಲು ಆರಂಭಿಸಿದ್ದರು.
  • ದಂತಕಥೆಯ ಪ್ರಕಾರ, ಅವರು ತನ್ನ ತಪಸ್ಸಿನಲ್ಲಿ ಎಷ್ಟು ಮುಳುಗಿದ್ದನೆಂದರೆ ಅವರ ಸುತ್ತಲೂ ದೊಡ್ಡ ಇರುವೆಗಳ ಗೂಡು ರೂಪುಗೊಂಡವು. ವರ್ಷಗಳ ಭಕ್ತಿಯ ನಂತರ, ಒಂದು ದೈವಿಕ ಧ್ವನಿಯು ಅವರ ಪ್ರಯತ್ನಗಳ ಯಶಸ್ಸನ್ನು ಘೋಷಿಸಿತು ಮತ್ತು ಅವರಿಗೆ ವಾಲ್ಮೀಕಿ ಎಂಬ ಹೆಸರನ್ನು ನೀಡಿತು, ಅಂದರೆ "ಇರುವೆಗಳಿಂದ ಹುಟ್ಟಿದ" ಎಂದರ್ಥವಾಗಿದೆ.

ಪ್ರತಿಭೆ ಹುಟ್ಟಿನ ಉಡುಗೊರೆ ಅಲ್ಲ, ಸಾಧನೆಯ ಗಳಿಕೆ ಎನ್ನುವುದನ್ನು ರಾಮಾಯಣ ಮಹಾಕಾವ್ಯ ಬರೆದು ತೋರಿಸಿದ ದಲಿತ ಪ್ರತಿಭೆ, ಆದಿ ಕವಿ ವಾಲ್ಮೀಕಿಯವರ ಬದುಕು ಮತ್ತು ಸಾಧನೆ ನಮಗೆಲ್ಲ ಪ್ರೇರಣೆಯಾಗಲಿ.

ಕಟ್ಟುಕತೆಗಳಿಂದ ಹುಟ್ಟಿಕೊಂಡಿರುವ ಪೂರ್ವಗ್ರಹಗಳನ್ನು ಪಕ್ಕಕ್ಕಿಟ್ಟು ಈ ಸಾಧಕನ ನಿಜ ಜೀವನಗಾಥೆಯ ಅಧ್ಯಯನ ತಳಸಮುದಾಯಗಳ ಕೋಟ್ಯಂತರ… pic.twitter.com/kFwJHOMXR2

— Siddaramaiah (@siddaramaiah)

 

 

 

click me!