ಉತ್ತರಾದಿಮಠದಲ್ಲಿ ಹಣಕಾಸು ಅಕ್ರಮ ಆರೋಪ : ₹30 ಕೋಟಿಗೂ ಹೆಚ್ಚು ದುರ್ಬಳಕೆ

Published : May 01, 2025, 12:13 PM ISTUpdated : May 01, 2025, 12:29 PM IST
ಉತ್ತರಾದಿಮಠದಲ್ಲಿ ಹಣಕಾಸು ಅಕ್ರಮ ಆರೋಪ : ₹30 ಕೋಟಿಗೂ ಹೆಚ್ಚು ದುರ್ಬಳಕೆ

ಸಾರಾಂಶ

ಬೆಂಗಳೂರಿನ ಉತ್ತರಾದಿ ಮಠದಲ್ಲಿ ವ್ಯಾಪಕ ಹಣಕಾಸು ಅವ್ಯವಹಾರ ನಡೆಯುತ್ತಿದ್ದು, ಖಾಸಗಿ ಕಂಪನಿಗಳಿಗೆ ಅನಧಿಕೃತ ಹಣ ವರ್ಗಾವಣೆ ಹಾಗೂ ನಗದು ವಿತ್‌ ಡ್ರಾ ಮೂಲಕ 30 ಕೋಟಿ ರುಪಾಯಿಗೂ ಹೆಚ್ಚು ದುರುಪಯೋಗ ಮಾಡಿಕೊಳ್ಳಲಾಗಿದೆ ಎಂದು ಮಠದ ಭಕ್ತಾದಿಗಳು ಆರೋಪ ಮಾಡಿದ್ದಾರೆ.

ಬೆಂಗಳೂರು (ಮೇ.1) : ಬೆಂಗಳೂರಿನ ಉತ್ತರಾದಿ ಮಠದಲ್ಲಿ ವ್ಯಾಪಕ ಹಣಕಾಸು ಅವ್ಯವಹಾರ ನಡೆಯುತ್ತಿದ್ದು, ಖಾಸಗಿ ಕಂಪನಿಗಳಿಗೆ ಅನಧಿಕೃತ ಹಣ ವರ್ಗಾವಣೆ ಹಾಗೂ ನಗದು ವಿತ್‌ ಡ್ರಾ ಮೂಲಕ 30 ಕೋಟಿ ರುಪಾಯಿಗೂ ಹೆಚ್ಚು ದುರುಪಯೋಗ ಮಾಡಿಕೊಳ್ಳಲಾಗಿದೆ ಎಂದು ಮಠದ ಭಕ್ತಾದಿಗಳು ಆರೋಪ ಮಾಡಿದ್ದಾರೆ.

ಹೀಗಾಗಿ, ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂಬ ಬೇಡಿಕೆ ಭಕ್ತಾದಿಗಳಿಂದ ಬಲವಾಗಿ ಕೇಳಿಬಂದಿದೆ.

ಉತ್ತರಾದಿ ಮಠದ ಅಧಿಕೃತ ಬ್ಯಾಂಕ್‌ ಖಾತೆಯಿಂದ ಅನಧಿಕೃತವಾಗಿ ಹಣಕಾಸು ವರ್ಗಾವಣೆ ನಡೆಯುತ್ತಿದೆ. ಮಠದ ಅಧಿಕೃತ ಬ್ಯಾಂಕ್‌ ಖಾತೆಯಿಂದ 2024ರ ಏ.10 ರಿಂದ 2025ರ ಮಾ.27ರ ನಡುವೆ ಬರೋಬ್ಬರಿ 9.23 ಕೋಟಿ ರು. ಸೇರಿ ಒಟ್ಟು 13 ಕೋಟಿ ರು.ಗಳಷ್ಟು ಹಣವನ್ನು ಶ್ರೀನಿವಾಸ ಕನ್ಸಲ್ಟೆನ್ಸಿ ಎಂಬ ಕಂಪನಿಗೆ ವರ್ಗಾವಣೆ ಮಾಡಲಾಗಿದೆ. ಈ ಕಂಪೆನಿಯ ಬ್ಯಾಂಕ್‌ ಖಾತೆ ಚೆನ್ನೈನಲ್ಲಿದ್ದು ಇದು ಚೆನ್ನೈ ಮೂಲದ ಕಂಪೆನಿ. ಈ ಕಂಪೆನಿಗೆ ಇಷ್ಟು ಹಣ ಯಾಕೆ ವರ್ಗಾವಣೆ ಮಾಡಿದ್ದಾರೆ ಎಂಬ ಬಗ್ಗೆ ಅನುಮಾನ ಹುಟ್ಟಿರುವುದಾಗಿ ಭಕ್ತಾದಿಗಳಿಂದ ಆರೋಪ ವ್ಯಕ್ತವಾಗಿದೆ.

ಇದನ್ನೂ ಓದಿ: ಮಾವನ ಆಸ್ತಿಗೆ ಅಳಿಯ ಉತ್ತರಾಧಿಕಾರಿ ಅಲ್ಲ: ಕಾನೂನು ಬದ್ಧ ಉತ್ತರಾಧಿಕಾರಿ ಮಾತ್ರ ಆಸ್ತಿಗೆ ಪ್ರತಿನಿಧಿ: ಹೈಕೋರ್ಟ್

ಕನಿಷ್ಠ 7 ಲಕ್ಷ ರು.ಗಳಿಂದ ಗರಿಷ್ಠ 1.25 ಕೋಟಿ ರು.ವರೆಗೆ ವಿವಿಧ ದಿನಾಂಕಗಳಲ್ಲಿ ಹಣ ವರ್ಗಾವಣೆ ನಡೆದಿದ್ದು, ಕಳೆದ ಒಂದು ವರ್ಷದಲ್ಲಿ ಒಟ್ಟು 13 ಕೋಟಿ ರು.ಗಳನ್ನು ಖಾಸಗಿ ಕಂಪೆನಿಗೆ ಸಕಾರಣ ಇಲ್ಲದೆ ವರ್ಗಾವಣೆ ಮಾಡಲಾಗಿದೆ. ಈ ಹಣ ವರ್ಗಾವಣೆಗೆ ನಿಯಮಾನುಸಾರ ಜಿಎಸ್‌ಟಿ, ಟಿಡಿಎಸ್‌ ಪಾವತಿಸಿಲ್ಲ. ಯಾವುದೇ ರೀತಿಯ ಇನ್‌ವಾಯ್ಸ್‌ (ರಸೀದಿ ದಾಖಲೆ) ಸೃಜಿಸಿಲ್ಲ. ಒಂದು ವೇಳೆ ಸಾಲ ನೀಡಿದ್ದರೂ ಸಾಲ ಕರಾರುವಿನಂಥ ಯಾವುದೇ ದಾಖಲೆಗಳು ಇಲ್ಲ. ಇದು ಆದಾಯ ತೆರಿಗೆ ನಿಯಮಗಳ ಉಲ್ಲಂಘನೆ. ಈ ಬಗ್ಗೆ ಮಠದ ಅಧಿಕಾರಿಗಳು ಸ್ಪಷ್ಟನೆ ನೀಡಬೇಕು ಎಂದು ಭಕ್ತಾದಿಗಳು ಕೋರಿರುವುದಾಗಿ ಹೇಳಲಾಗಿದೆ.

ಇದಲ್ಲದೆ 10 ಕೋಟಿ ರು.ಗಳಷ್ಟು ಹಣವನ್ನು ವಿತ್‌ ಡ್ರಾ ಮಾಡಲಾಗಿದೆ. ಇಷ್ಟು ಪ್ರಮಾಣದ ನಗದು ಯಾಕೆ ಡ್ರಾ ಮಾಡಲಾಗಿದೆ ಎಂಬ ಬಗ್ಗೆ ಸೂಕ್ತ ದಾಖಲೆಗಳನ್ನು ನಿರ್ವಹಣೆ ಮಾಡಿಲ್ಲ. ಜತೆಗೆ ತಮಿಳುನಾಡು ಮೂಲದ ಜೈನ್‌ ಟ್ರಸ್ಟ್‌ವೊಂದಕ್ಕೆ 8 ಕೋಟಿ ರು. ಹಣ ವರ್ಗಾವಣೆ ಮಾಡಿ ಟ್ರಸ್ಟ್‌ನಿಂದ ಬೇರೆಯವರಿಗೆ ಹಣ ಹಸ್ತಾಂತರಿಸಲಾಗಿದೆ. ಕಳೆದ ಒಂದೆರಡು ವರ್ಷಗಳಲ್ಲಿ ಹಣಕಾಸಿನ ವ್ಯಾಪಕ ಅವ್ಯವಹಾರ ನಡೆಯುತ್ತಿದೆ ಎನ್ನಲಾಗಿದೆ.

ಈ ಬಗ್ಗೆ ಮಠದ ಭಕ್ತಾದಿಗಳು ಮಠದಲ್ಲಿ ಪ್ರಶ್ನಿಸಿದರೂ ಯಾವುದೇ ಉತ್ತರ ಸಿಗುತ್ತಿಲ್ಲ ಎಂದು ಆರೋಪಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ
ಬಿಡಿಎ ಸೈಟ್ ತಗೊಂಡ್ರೆ ಚಿಪ್ಪೇ ಗತಿ; ಕೆಂಪೇಗೌಡ ಲೇಔಟ್ ಸೈಟ್ ತಗೊಂಡು 15 ವರ್ಷವಾದ್ರೂ ಸೈಟೂ ಇಲ್ಲ, ಸಾಲನೂ ಸಿಗ್ತಿಲ್ಲ!