
ಬೆಂಗಳೂರು, (ಜ.30): ನೂತನ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಹುದ್ದೆಗೆ ಹಿರಿಯ ಐಪಿಎಸ್ ಅಧಿಕಾರಿ ಎ.ಎಂ.ಪ್ರಸಾದ್ ನೇಮಕ ಖಚಿತ ಎನ್ನಲಾಗುತ್ತಿದೆ.
"
ಕರ್ನಾಟಕದ ಹಾಲಿ ಡಿಜಿ & ಐಜಿಪಿ ನೀಲಮಣಿ ಎನ್.ರಾಜು ಅವರ ಅಧಿಕಾರವಧಿ ನಾಳೆ ಅಂದ್ರೆ ಜನವರಿ 31ಕ್ಕೆ ಕೊನೆಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಇವರ ಸ್ಥಾನಕ್ಕೆ ಪ್ರವೀಣ್ ಸೂದ್ ಹಾಗೂ ಎ.ಎಂ.ಪ್ರಸಾದ್ ನಡುವೆ ಪೈಟೋಟಿ ನಡೆದಿದೆ.
ಎರಡು ದಿನದಲ್ಲಿ ಹಾಲಿ ಡಿಜಿಪಿ ನಿವೃತ್ತಿ: ಹೊಸಬರ ಆಯ್ಕೆ ಇನ್ನೂ ಇಲ್ಲ!
ಸೇವಾ ಹಿರಿತನಕ್ಕೆ ಮಣೆ ಹಾಕಲು ರಾಜ್ಯ ಸರ್ಕಾರ ಮುಂದಾಗಿದ್ದು, ಇವರಿಬರ ಪೈಕಿ ಎ.ಎಂ.ಪ್ರಸಾದ್ ನೇಮಕ ಬಹುತೇಕ ಖಚಿತವೆಂದು ಸರ್ಕಾರ ಮೂಲಗಳು ಹೇಳುತ್ತಿವೆ.
ಅಂತಿಮವಾಗಿ ಯಾರು ಆಗುತ್ತಾರೆ ಎನ್ನುವುದು ಇಂದು ರಾತ್ರಿ ಅಥವಾ ನಾಳೆ (ಶುಕ್ರವಾರ) ಬೆಳಗ್ಗೆ ಅಧಿಕೃತ ಆದೇಶ ಹೊರಬೀಳಲಿದೆ. 1985 ರ ಬ್ಯಾಚ್ ನ ಬಿಹಾರ ಮೂಲದವರಾಗಿರುವ ಪ್ರವೀಣ್ ಸೂದ್ ಪ್ರಸ್ತುತ ಸಿಐಡಿ ಡಿಜಿಪಿ ಆಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ