ಸಾಹಿತಿ ಅಮರೇಶ ನುಗಡೋಣಿ ಅವರ 'ದಡ ಸೇರಿಸು ತಂದೆ' ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಗೌರವ

Published : Mar 16, 2026, 03:30 PM IST
Amaresh Nugadoni Sahitya Academy award

ಸಾರಾಂಶ

ಖ್ಯಾತ ಸಾಹಿತಿ ಅಮರೇಶ ನುಗಡೋಣಿ ಅವರ ‘ದಡ ಸೇರಿಸು ತಂದೆ’ ಕಥಾ ಸಂಕಲನಕ್ಕೆ 2025ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಈ ಕೃತಿಯು ಗ್ರಾಮೀಣ ಭಾರತದ ಮರ್ಯಾದಾ ಹತ್ಯೆ ಮತ್ತು ಗುಂಪು ಹಿಂಸಾಚಾರದಂತಹ ಜ್ವಲಂತ ಸಮಸ್ಯೆಗಳನ್ನು ನೈಜವಾಗಿ ಚಿತ್ರಿಸುತ್ತದೆ.

ನವದೆಹಲಿ (ಮಾ.16): ಕನ್ನಡದ ಖ್ಯಾತ ಸಾಹಿತಿ ಅಮರೇಶ ನುಗಡೋಣಿ ಅವರ ‘ದಡ ಸೇರಿಸು ತಂದೆ’ ಕಥಾ ಸಂಕಲನಕ್ಕೆ 2025ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಈ ಮೂಲಕ ಕನ್ನಡದ ಗಟ್ಟಿಯಾದ ಕಥಾ ಲೋಕಕ್ಕೆ ರಾಷ್ಟ್ರಮಟ್ಟದ ಮನ್ನಣೆ ದೊರೆತಂತಾಗಿದೆ. ಈ ಪ್ರಶಸ್ತಿಯು ₹1,00,000 ನಗದು ಬಹುಮಾನ, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ. ಡಾ. ಸಿದ್ದಲಿಂಗ ಪಟ್ಟಣಶೆಟ್ಟಿ, ಡಾ. ಜಯಲಲಿತ ಮತ್ತು ಸಹನಾ ಕಾಂತಬೈಲು ಅವರಿದ್ದ ತಜ್ಞರ ಸಮಿತಿಯು ಈ ಕೃತಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. 2025ರ ಜನವರಿ 30ರಂದು ಆರಂಭವಾದ ಸುದೀರ್ಘ ಆಯ್ಕೆ ಪ್ರಕ್ರಿಯೆಯ ನಂತರ ಈ ಅಧಿಕೃತ ಘೋಷಣೆ ಹೊರಬಿದ್ದಿದೆ.

‘ದಡ ಸೇರಿಸು ತಂದೆ’ ಕೃತಿಯ ಹೂರಣ

ಇದು ಅಮರೇಶ ನುಗಡೋಣಿ ಅವರ 6ನೇ ಕಥಾ ಸಂಕಲನವಾಗಿದ್ದು, ಇದರಲ್ಲಿ ಒಟ್ಟು ಎಂಟು ಕಥೆಗಳಿವೆ. ಈ ಕೃತಿಯು ಇಂದಿನ ಗ್ರಾಮೀಣ ಭಾರತದ ಜ್ವಲಂತ ಸಮಸ್ಯೆಗಳನ್ನು ಕನ್ನಡಿ ಹಿಡಿದಿದೆ. ಹಳ್ಳಿಗಳಲ್ಲಿ ನಡೆಯುತ್ತಿರುವ ಮರ್ಯಾದಾ ಹತ್ಯೆಗಳು ಮತ್ತು ಗುಂಪು ಹಿಂಸಾಚಾರದ (Mob Violence) ಕ್ರೌರ್ಯವನ್ನು ಇಲ್ಲಿ ಅತ್ಯಂತ ನೈಜವಾಗಿ ಚಿತ್ರಿಸಲಾಗಿದೆ. ಬದುಕಿನ ವೈವಿಧ್ಯತೆ ಹಾಗೂ ಸಮಕಾಲೀನ ಸಮಾಜದ ವಿಘಟನೆಗಳನ್ನು ಈ ಸಂಕಲನವು ಓದುಗರ ಕಣ್ಣಿಗೆ ಕಟ್ಟುವಂತೆ ವಿವರಿಸುತ್ತದೆ. 2020ರ ಜನವರಿ 19 ರಂದು ರಾಯಚೂರಿನಲ್ಲಿ ಈ ಕೃತಿ ಲೋಕಾಪರ್ಣೆಯಾಗಿತ್ತು. ಪುಸ್ತಕವನ್ನು ಪಲ್ಲವ ಪ್ರಕಾಶನವು ಹೊರತಂದಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಗ್ಯಾಸ್ ಏಜೆನ್ಸಿ ಮುಂದೆಯೇ ಕಳ್ಳರ ಕೈಚಳಕ: ಕಣ್ ಮುಚ್ಚಿ ತೆರೆಯೋಷ್ಟರಲ್ಲಿ ಗ್ಯಾಸ್ ಸಿಲಿಂಡರ್ ನಾಪತ್ತೆ
ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಕಡೆಗಣನೆ: ಹೋರಾಟಕ್ಕೆ ಕರೆ ನೀಡಿದ ನಾರಾಯಣಗೌಡರಿಗೆ ಪೊಲೀಸ್ ನೋಟಿಸ್