
ಬೆಂಗಳೂರು, (ನ.25): ಮಂಡ್ಯದ ಗಂಡು ಅಂಬರೀಶ್ ಅಗಲಿಕೆಯ ನೋವಲ್ಲಿ ಇಡೀ ಕರ್ನಾಟಕ ಕಣ್ಣೀರಿಡುತ್ತಿದೆ. ಈ ಮಧ್ಯೆ ಅಂಬರೀಶ್ ಅಂತ್ಯಸಂಸ್ಕಾರಕ್ಕೆ ಸಂಬಂಧಿಸಿದಂತೆ ಹೊಸದೊಂದು ವಿವಾದ ಸೃಷ್ಟಿಯಾಗಿರುವುದು ವಿಪರ್ಯಾಸ.
ಅಂಬಿ ಅಂತ್ಯಸಂಸ್ಕಾರ ಕಂಠೀರವದಲ್ಲಿ ಬೇಡ್ವಂತೆ: ಕೇಳಿ ಈ ವಕೀಲಪ್ಪನ ಅಂತೆ ಕಂತೆ!
ನಾಳೆ ಅಂದರೆ ಸೋಮವಾರ ಕಂಠೀರವ ಸ್ಟುಡಿಯೋನಲ್ಲಿ ಡಾ. ರಾಜ್ ಕುಮಾರ್ ಅವರ ಸಮಾಧಿ ಪಕ್ಕದಲ್ಲಿ ಅಂಬರೀಶ್ ಅವರ ಅಂತ್ಯಕ್ರಿಯೆಗೆ ಈಗಾಗಲೇ ನಿರ್ಧರಿಸಲಾಗಿದ್ದು,ಇದಕ್ಕೆ ಬೇಕಾದ ಎಲ್ಲ ಸಕಲ ಸಿದ್ಧತೆಗಳನ್ನ ಮಾಡಿಕೊಳ್ಳಲಾಗಿದೆ.
ಆದ್ರೆ ಇದಕ್ಕೆ ವಕೀಲ ಆರ್.ಎಲ್.ಎನ್. ಮೂರ್ತಿ ಎನ್ನುವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಲೆಗೆ ಬೆಲೆ ಕೊಡಬೇಕಾದ ಜಾಗದಲ್ಲಿ ಅಂತ್ಯ ಸಂಸ್ಕಾರ ನಡೆಸುವುದು ಸರಿಯಲ್ಲ. ಇದು ಕಾನೂನು ಉಲ್ಲಂಘನೆ ಎಂದು ಮೂರ್ತಿ ಅವರ ತಕರಾರು.
ಇದೀಗ ಈ ವಿವಾದ ಹೈಕೋರ್ಟ್ ಅಂಗಳಕ್ಕೆ ಹೋಗಿದ್ದು, ನಾಳೆ [ಸೋಮವಾರ] ಕನಕ ಜಯಂತಿ ಸರ್ಕಾರಿ ರಜೆ ಇದ್ದರೂ ಕೂಡ ಅಂಬಿ ಅಂತ್ಯಕ್ರಿಯೆ ಬಗ್ಗೆ ವಿಚಾರಣೆ ನಡೆಸಲಿದೆ.
ಸೋಮವಾರ ಅಂಬಿ ಅಂತ್ಯಕ್ರಿಯೆ ಇರುವುದರಿಂದ ರಜೆ ದಿನವೇ ಕೋರ್ಟ್ ವಿಚಾರಣೆ ನಡೆಸುವುದಕ್ಕೆ ಓಕೆ ಎಂದಿರುವುದು ವಿಶೇಷ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ