ಕಾಂಗ್ರೆಸ್ ಯಾವತ್ತೂ ಅಂಬೇಡ್ಕರ್‌ಗೆ ಒಳ್ಳೆಯದು ಬಯಸಿಲ್ಲ: ಸಂಸದ ಗದ್ದಿಗೌಡರ್ ಕಿಡಿ

Published : Dec 28, 2024, 10:48 PM IST
ಕಾಂಗ್ರೆಸ್ ಯಾವತ್ತೂ ಅಂಬೇಡ್ಕರ್‌ಗೆ ಒಳ್ಳೆಯದು ಬಯಸಿಲ್ಲ: ಸಂಸದ ಗದ್ದಿಗೌಡರ್ ಕಿಡಿ

ಸಾರಾಂಶ

ಕಾಂಗ್ರೆಸ್ ಜನರ ದಿಕ್ಕು ತಪ್ಪಿಸಲು ಹುನ್ನಾರ ನಡೆಸುತ್ತಿದೆ ಮತ್ತು ಅಮಿತ್ ಶಾ ಬಗ್ಗೆ ಅಪಪ್ರಚಾರ ಮಾಡುತ್ತಿದೆ ಎಂದು ಸಂಸದ ಪಿ.ಸಿ. ಗದ್ದಿಗೌಡರ್ ಆರೋಪಿಸಿದ್ದಾರೆ. ಕಾಂಗ್ರೆಸ್ ಡಾ. ಅಂಬೇಡ್ಕರ್‌ಗೆ ಒಳ್ಳೆಯದನ್ನು ಬಯಸಿಲ್ಲ ಮತ್ತು ಈಗ ಅವರ ಹೆಸರು ಹೇಳಿಕೊಂಡು ರಾಜಕೀಯ ಮಾಡಲು ಮುಂದಾಗಿದೆ ಎಂದು ಅವರು ಹೇಳಿದರು.

ಜಮಖಂಡಿ (ಡಿ.28): ಜನರ ದಿಕ್ಕು ತಪ್ಪಿಸಲು ಕಾಂಗ್ರೆಸ್‌ ಹುನ್ನಾರ ನಡೆಸಿದ್ದು ಗೃಹ ಸಚಿವ ಅಮಿತ್‌ ಶಾ ಅವರ ಬಗ್ಗೆ ಅಪಪ್ರಚಾರ ಮಾಡುತ್ತಿದೆ. ಶಾ ಅವರ ಪೂರ್ಣ ವಿಡಿಯೋ ಕೇಳಿದರೆ ಅವರ ಉದ್ದೇಶ ತಮಗೆ ಗೊತ್ತಾಗುತ್ತದೆ. ಜನರಿಗೆ ತಪ್ಪು ಮಾಹಿತಿ ನೀಡಿ ಕಾಂಗ್ರೆಸ್‌ ಗೊಂದಲ ಸೃಷ್ಟಿಸುತ್ತಿದೆ ಎಂದು ಲೋಕಸಭಾ ಸದಸ್ಯ ಪಿ.ಸಿ.ಗದ್ದಿಗೌಡರ ಆರೋಪಿಸಿದರು.

ಮಹಬಳಶೆಟ್ಟಿಯವರು ನೂತನವಾಗಿ ನಿರ್ಮಿಸಿದ ಟರ್ಫ್ ಮೈದಾನದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಹಿಂದಿನಿಂದಲೂ ಡಾ.ಅಂಬೇಡ್ಕರ್‌ಗೆ ಒಳ್ಳೆಯದನ್ನು ಬಯಸಿಲ್ಲ. ಅವರನ್ನು ಬೆಂಬಲಿಸಿಲ್ಲ ಎಂಬುದು ಇತಿಹಾಸದಿಂದ ತಿಳಿಯುತ್ತದೆ. ಆದರೆ ಈಗ ಮಾತ್ರ ಅವರ ಹೆಸರು ಹೇಳಿಕೊಂಡು ರಾಜಕೀಯ ಮಾಡಲು ಮುಂದಾಗಿದೆ. ಬಿಜೆಪಿ ದೂಷಿಸುವ ಭರದಲ್ಲಿ ತನ್ನ ಕರ್ತವ್ಯ ಮರೆತಿದೆ. ಬಲಿಷ್ಟ ವಿರೋಧ ಪಕ್ಷವಾಗಿ ದೇಶದ ಅಭಿವೃದ್ಧಿ ಕೆಲಸ ಮಾಡ ಬೇಕಿದ್ದ ಕಾಂಗ್ರೆಸ್‌ ಗೊಂದಲ ಸೃಷ್ಟಿಸುತ್ತಿದೆ ಎಂದು ದೂರಿದರು.

ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ವೇಳೆ ರಾಹುಲ್ ಗಾಂಧಿ ಮಾಡಿದ್ದೇನು? ವೈರಲ್ ಆಗಿದೆ ಆಘಾತಕಾರಿ ವಿಡಿಯೋ!

ವಿಧಾನ ಪರಿಷತ್‌ನಲ್ಲಿ ಸಿ.ಟಿ.ರವಿ ಮಾತನಾಡಿದ್ದರ ಬಗ್ಗೆ ಸಭಾಪತಿಗಳು ಈಗಾಗಲೇ ಸ್ಪಷ್ಟ ಸಂದೇಶ ನೀಡಿದ್ದಾರೆ. ಕಾಂಗ್ರೆಸ್‌ಗೆ ಅದು ಬೇಕಿಲ್ಲ. ಸಂವಿಧಾನ ಬಾಹಿರವಾಗಿ ಸದನದೊಳಗೆ ಪೊಲೀಸರನ್ನು ಕರೆಯಿಸಿ ರಾದ್ಧಾಂತ ಮಾಡಲಾಗಿದೆ. ಪೊಲೀಸರನ್ನು ಬಳಸಿಕೊಂಡು ಮನ ಬಂದಂತೆ ಕಾಂಗ್ರೆಸ್‌ ನಡೆದುಕೊಂಡಿರುವುದು ಘೋರ ಅಪರಾಧ ಎಂದು ಗದ್ದಿಗೌಡರ ಅಭಿಪ್ರಾಯಪಟ್ಟರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್