
ಮಂಡ್ಯ(ಮೇ.03): ಮುಂಬೈನಿಂದ ಆ್ಯಂಬುಲೆನ್ಸ್ನಲ್ಲಿ ಮೃತದೇಹ ತಂದು ಮಂಡ್ಯದಲ್ಲಿ ಅಂತ್ಯಕ್ರಿಯೆ ನಡೆಸಿದ ಪ್ರಕರಣ ಜಿಲ್ಲೆಯಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಆ್ಯಂಬುಲೆನ್ಸ್ನಲ್ಲಿದ್ದ ನಾಲ್ವರಿಗೆ ಕೊರೋನಾ ದೃಢಪಡುತ್ತಿದ್ದಂತೆ ಮೇಲುಕೋಟೆಯ ಬಿ.ಕೊಡಗಹಳ್ಳಿಯನ್ನು ನಿರ್ಬಂಧಿತ ವಲಯವನ್ನಾಗಿ ಘೋಷಿಸಲಾಗಿದೆ.
ಏತನ್ಮಧ್ಯೆ, ಆ್ಯಂಬುಲೆನ್ಸ್ ಅನ್ನು ಮಾರ್ಗ ಮಧ್ಯೆ ಕೆಲವೆಡೆ ನಿಲ್ಲಿಸಿ ಸಂಬಂಧಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಟ್ಟಿರುವುದು, ವ್ಯಕ್ತಿಯೊಬ್ಬ ಮಾರ್ಗ ಮಧ್ಯೆ ಕೆ.ಆರ್.ಪೇಟೆಯಲ್ಲಿ ಆ್ಯಂಬುಲೆನ್ಸ್ನಿಂದ ಇಳಿದು ಹೋಗಿರುವುದು ಹಾಗೂ ಅಂತ್ಯಕ್ರಿಯೆ ವೇಳೆ ಕನಿಷ್ಠ ಸುರಕ್ಷತಾ ಕಿಟ್ ನೀಡದೆ ಪೌರ ಕಾರ್ಮಿಕನನ್ನು ಅಂತ್ಯಕ್ರಿಯೆ ವೇಳೆ ಮುಂದೆಬಿಟ್ಟಅಧಿಕಾರಿಗಳ ಕ್ರಮ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಸೋಂಕು ಗುಣ: ಕರ್ನಾಟಕ ದೇಶದಲ್ಲೇ ನಂ. 2ನೇ ಸ್ಥಾನ!
ಆಕ್ರೋಶ: ಮೃತದೇಹವನ್ನು ತರಲು ಅವಕಾಶ ಮಾಡಿಕೊಟ್ಟಅಧಿಕಾರಿಗಳ ಕ್ರಮಕ್ಕೆ ಆಕ್ರೋಶ ವ್ಯಕ್ತವಾಗಿದೆ. ಜತೆಗೆ, ಈ ಅಂತ್ಯಸಂಸ್ಕಾರ ರಾಜಕೀಯ ತಿಕ್ಕಾಟಕ್ಕೂ ದಾರಿ ಮಾಡಿಕೊಟ್ಟಿದೆ. ನಕಲಿ ದಾಖಲೆ ಸೃಷ್ಟಿಸಿ ಮೃತದೇಹವನ್ನು ತರಲಾಗಿದೆ. ಇದರ ಹಿಂದೆ ಕಾಣದ ಕೈಗಳಿವೆ ಎಂದು ಶಾಸಕ ಸಿ.ಎಸ್.ಪುಟ್ಟರಾಜು ಆಕೋಪಿಸಿದ್ದಾರೆ.
ಲಾಕ್ಡೌನ್ 3.0 ದೊಡ್ಡ ಸವಾಲು: ಆದರೆ, ಸವಾಲು ಎದುರಿಸಲು ರಾಜ್ಯ ಸರ್ಕಾರ ಸಿದ್ಧ!
ಶವಸಂಸ್ಕಾರದ ವೇಳೆ 200ಕ್ಕೂ ಹೆಚ್ಚು ಮಂದಿ ಭಾಗಿ
ತಾಲೂಕಿನ ಕೊಣನಹಳ್ಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಅಂತ್ಯಕ್ರಿಯೆಯಲ್ಲಿ 250ಕ್ಕೂ ಹೆಚ್ಚು ಮಂದಿ ಪಾಲ್ಗೊಂಡ ಘಟನೆ ಬೆಳಕಿಗೆ ಬಂದಿದೆ. ಅಂತ್ಯಕ್ರಿಯೆಯಲ್ಲಿ 20 ಜನರಷ್ಟೇ ಭಾಗವಹಿಸಬೇಕು ಎಂಬ ನಿಯಮವಿದೆ. ಆದರೆ ಆ ನಿಯಮ ಪಾಲಿಸದಿರುವುದು, ಅಂತ್ಯಕ್ರಿಯೆ ವೇಳೆ ಮಾಸ್ಕ್ಧರಿಸದಿರುವುದು, ಸಾಮಾಜಿಕ ಅಂತರ ಗಾಳಿಗೆ ತೂರಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ