ರಾಜ್ಯದಲ್ಲಿ ಯುಗಾದಿ, ಹೋಳಿ, ಗುಡ್‌ಫ್ರೈಡೇ ಸೇರಿ ಎಲ್ಲ ಹಬ್ಬಗಳಿಗೆ ನಿರ್ಬಂಧ!

Published : Mar 26, 2021, 07:50 AM ISTUpdated : Mar 26, 2021, 08:15 AM IST
ರಾಜ್ಯದಲ್ಲಿ ಯುಗಾದಿ, ಹೋಳಿ, ಗುಡ್‌ಫ್ರೈಡೇ ಸೇರಿ ಎಲ್ಲ ಹಬ್ಬಗಳಿಗೆ ನಿರ್ಬಂಧ!

ಸಾರಾಂಶ

ಯುಗಾದಿ, ಹೋಳಿ ಸೇರಿ ಎಲ್ಲ ಹಬ್ಬ ನಿಷೇಧ| ಕೋವಿಡ್‌ 2ನೇ ಅಲೆ ಭೀತಿ ಹೆಚ್ಚುತ್ತಿದ್ದಂತೆ ಸರ್ಕಾರ ಕಠಿಣ ನಿರ್ಧಾರ| ಉಲ್ಲಂಘಿಸಿದರೆ ರಾಷ್ಟ್ರೀಯ ವಿಪತ್ತು ನಿರ್ವಹಣೆ ಕಾಯ್ದೆಯಡಿ ಕೇಸು

ಬೆಂಗಳೂರು(ಮಾ.26): ರಾಜ್ಯದಲ್ಲಿ ದೈನಂದಿನ ಕೊರೋನಾ ಪ್ರಕರಣಗಳ ಸಂಖ್ಯೆ ಎರಡೂವರೆ ಸಾವಿರದ ಗಡಿ ದಾಟುತ್ತಿದ್ದಂತೆ ಧಾರ್ಮಿಕ ಹಬ್ಬಗಳ ಸಾರ್ವಜನಿಕ ಆಚರಣೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮುಖ್ಯವಾಗಿ ಯುಗಾದಿ, ಹೋಳಿ, ಶಬ್‌-ಎ-ಬಾರತ್‌, ಗುಡ್‌ ಫ್ರೈಡೆಯಂತಹ ಹಬ್ಬಗಳನ್ನು ಸಾರ್ವಜನಿಕವಾಗಿ ಆಚರಿಸುವುದನ್ನು ಸರ್ಕಾರ ನಿರ್ಬಂಧಿಸಿ ಮಾರ್ಗಸೂಚಿ ಹೊರಡಿಸಿದೆ.

ಕೊರೋನಾ ಎರಡನೇ ಅಲೆಯ ಪರಿಣಾಮ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರ ಬೆನ್ನಲ್ಲೇ ಸಾಲು-ಸಾಲು ಹಬ್ಬಗಳು ಬರುತ್ತಿರುವ ಹಿನ್ನೆಲೆಯಲ್ಲಿ ಆಚರಣೆ ನೆಪದಲ್ಲಿ ಸಾರ್ವಜನಿಕವಾಗಿ ಜನ ಸೇರುವುದು, ಮೆರವಣಿಗೆ ಮಾಡುವುದು ಹಾಗೂ ಬಹಿರಂಗ ಆಚರಣೆಯನ್ನು ನಿಷೇಧಿಸಿದೆ.

ಯಾವುದೇ ಸಾರ್ವಜನಿಕ ಸ್ಥಳ, ಮೈದಾನ, ಸಾರ್ವಜನಿಕ ಉದ್ಯಾನವನ, ಮಾರುಕಟ್ಟೆಮತ್ತು ಧಾರ್ಮಿಕ ಸ್ಥಳಗಳಲ್ಲಿ ಹಬ್ಬ ಆಚರಿಸಲು ಗುಂಪು ಸೇರಬಾರದು. ಮೆರವಣಿಗೆ ನಡೆಸಬಾರದು. ಒಂದು ವೇಳೆ ಈ ಆದೇಶ ಉಲ್ಲಂಘಿಸಿದರೆ ಅದು ರಾಷ್ಟ್ರೀಯ ವಿಪತ್ತು ನಿರ್ವಹಣೆ ಕಾಯ್ದೆ- 2005ರಡಿ ಶಿಕ್ಷಾರ್ಹ ಅಪರಾಧವಾಗಲಿದೆ ಎಂದು ಸರ್ಕಾರ ಹೇಳಿದೆ.

ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಬಿಬಿಎಂಪಿ ಆಯುಕ್ತರು ಮತ್ತು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಆದೇಶ ನೀಡಿದ್ದಾರೆ.

ಹೊಸ ಮಾರ್ಗಸೂಚಿ

- ಸಾಲು ಸಾಲು ಹಬ್ಬಗಳು ಬರುತ್ತಿರುವುದರಿಂದ ಅವುಗಳ ಆಚರಣೆ ನೆಪದಲ್ಲಿ ಜನರು ಸಾರ್ವಜನಿಕವಾಗಿ ಸೇರುವಂತಿಲ್ಲ

- ಯುಗಾದಿ, ಹೋಳಿ, ಶಬ್‌-ಎ-ಬಾರಾತ್‌, ಗುಡ್‌ ಫ್ರೈಡೇ ಮುಂತಾದ ಹಬ್ಬಗಳನ್ನು ಮನೆಯಿಂದ ಹೊರಬಂದು ಆಚರಿಸುವಂತಿಲ್ಲ

- ಮೈದಾನ, ಸಾರ್ವಜನಿಕ ಉದ್ಯಾನವನ, ಮಾರುಕಟ್ಟೆಮತ್ತು ಧಾರ್ಮಿಕ ಸ್ಥಳಗಳಲ್ಲಿ ಹಬ್ಬ ಆಚರಿಸಲು ಗುಂಪು ಸೇರಬಾರದು

- ಈ ಆದೇಶ ಕಟ್ಟುನಿಟ್ಟಾಗಿ ಪಾಲಿಸುವಂತೆ ಬಿಬಿಎಂಪಿ ಕಮಿಷನರ್‌, ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸರ್ಕಾರದ ನಿರ್ದೇಶನ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ