
ಬಂಟ್ವಾಳ (ಜ.28): ಕಾಡಿಗೆ ವ್ಯಾಪಿಸಿದ್ದ ಬೆಂಕಿಯನ್ನು ನಂದಿಸಲು ಯತ್ನಿಸಿದ ವೃದ್ಧ ದಂಪತಿ ಸಜೀವದಹನ
ಮಂಗಳೂರು: ತಾವು ಹಾಕಿದ ಬೆಂಕಿ ಕಾಡಿಗೆ ವ್ಯಾಪಿಸುತ್ತದೆ ಎಂದು ತಿಳಿದ ವೃದ್ಧ ದಂಪತಿ ಬೆಂಕಿ ಹಾರಿಸಲು ಹೋಗಿ ಜೀವವನ್ನೇ ಕಳೆದುಕೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಅಮ್ಟಾಡಿ ಬಳಿಯ ತುಂಡು ಪದವು ಎಂಬಲ್ಲಿ ಈ ಘಟನೆ ನಡೆದಿದ್ದು ಮೃತ ದಂಪತಿಯನ್ನು ಗಿಲ್ಬರ್ಟ್ ಕಾರ್ಲೋ(78) ಪತ್ನಿ ಕ್ರಿಸ್ಟಿನಾ ಕಾರ್ಲೋ(70) ಎಂದು ಗುರುತಿಸಲಾಗಿದೆ.
ಬಂಟ್ವಾಳದ ತುಂಬೆ ಡ್ಯಾಂಗೆ ರೈತರ ಮುತ್ತಿಗೆ: ಕೃಷಿ ಭೂಮಿ ನೀರು ಪಾಲು.. 9 ಕುಟುಂಬಗಳು ಕಂಗಾಲು
ಮನೆ ಪಕ್ಕದ ಕಸಕ್ಕೆ ಹಾಕಿದ್ದ ಬೆಂಕಿ ಕಾಡಿಗೆ ವ್ಯಾಪಿಸುತ್ತದೆ ಎಂದು ತಿಳಿದು ಬೆಂಕಿಯನ್ನು ನಂದಿಸಲು ಯತ್ನಿಸಿದ್ದ ವೃದ್ಧ ದಂಪತಿ ಸಜೀವದಹನವಾಗಿದ್ದಾರೆ.
ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ರಾಷ್ಟ್ರಪತಿಗಳನ್ನ ಏಕವಚನದಲ್ಲಿ ಸಂಬೋಧಿಸಿ ಅವಮಾನ; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರ ವಜಾಕ್ಕೆ ಎಚ್ಡಿಕೆ ಒತ್ತಾಯ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ