ಪಾಯ ತೆಗೆಯುವಾಗ ಮೊಬೈಲ್‌ಟವರ್‌ ಸಹಿತ ಬಿದ್ದ ಹಳೆ ಕಟ್ಟಡ; ವಿಡಿಯೋ ವೈರಲ್!

Published : Dec 09, 2023, 06:26 AM IST
ಪಾಯ ತೆಗೆಯುವಾಗ ಮೊಬೈಲ್‌ಟವರ್‌ ಸಹಿತ ಬಿದ್ದ ಹಳೆ ಕಟ್ಟಡ; ವಿಡಿಯೋ ವೈರಲ್!

ಸಾರಾಂಶ

ಮನೆ ನಿರ್ಮಿಸುವ ಉದ್ದೇಶಕ್ಕಾಗಿ ಜೆಸಿಬಿಯಿಂದ ನಿವೇಶನ ಸ್ವಚ್ಛಗೊಳಿಸುವಾಗ ಪಕ್ಕದ ಹಳೆಯ ಕಟ್ಟಡವೊಂದು ಮೊಬೈಲ್‌ ಟವರ್‌ ಸಮೇತ ಧರೆಗುರುಳಿದ್ದು, ಅದೃಷ್ಟವಶಾತ್‌ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಬೆಂಗಳೂರು (ಡಿ.9) : ಮನೆ ನಿರ್ಮಿಸುವ ಉದ್ದೇಶಕ್ಕಾಗಿ ಜೆಸಿಬಿಯಿಂದ ನಿವೇಶನ ಸ್ವಚ್ಛಗೊಳಿಸುವಾಗ ಪಕ್ಕದ ಹಳೆಯ ಕಟ್ಟಡವೊಂದು ಮೊಬೈಲ್‌ ಟವರ್‌ ಸಮೇತ ಧರೆಗುರುಳಿದ್ದು, ಅದೃಷ್ಟವಶಾತ್‌ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಲಗ್ಗೆರೆಯ ಪಾರ್ವತಿನಗರದಲ್ಲಿ ಇರುವ ಪ್ರೀತಿ ಬಾರ್ ಪಕ್ಕದಲ್ಲಿರುವ ನಿವೇಶನದ ಬಳಿ ಶುಕ್ರವಾರ ಮಧ್ಯಾಹ್ನ 1ರ ಸುಮಾರಿಗೆ ಈ ಅವಘಡ ನಡೆದಿದೆ. ನಿವೇಶನದ ಮಾಲೀಕ ಹರೀಶ್‌ ಆ ನಿವೇಶನದಲ್ಲಿ ಮನೆ ನಿರ್ಮಿಸುವ ಉದ್ದೇಶದಿಂದ ಪಾಯ ತೆಗೆಸಲು ಸಿದ್ಥತೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಜೆಸಿಬಿಯಿಂದ ನಿವೇಶನ ಸ್ವಚ್ಛಗೊಳಿಸಲು ಮುಂದಾಗಿದ್ದರು. ಅದರಂತೆ ಮಧ್ಯಾಹ್ನ ಜೆಸಿಬಿಯಿಂದ ಮಣ್ಣು ತೆಗೆಯುವಾಗ ನಿವೇಶನಕ್ಕೆಹೊಂದಿಕೊಂಡಂತೆ ಇರುವ ಹಳೆಯ ಕಟ್ಟಡದ ಪಾಯ ಕುಸಿದು ಇಡೀ ಕಟ್ಟಡ ಹಾಗೂ ಅದರ ಮೇಲಿದ್ದ ಮೊಬೈಲ್‌ ನೆಟ್‌ವರ್ಕ್‌ ಟವರ್‌ ನೆಲಕ್ಕುರುಳಿದೆ.

ದೋಚುತ್ತಿದ್ದಾಗಲೇ ಮನೆಗೆ ಬಂದು ಕಳ್ಳರನ್ನು ಕೂಡಿ ಹಾಕಿದ ಮಾಲೀಕ!

ಕೂದಲೆಳೆಯಲ್ಲಿ 11 ಜನರ ಪ್ರಾಣಾಪಾಯದಿಂದ ಪಾರು:

ಮೊಬೈಲ್ ಟವರ್‌ಗೆ ಹೊಂದಿಕೊಂಡಿರುವ ಎರಡು ಅಂತಸ್ತಿನ ಕಟ್ಟಡದಲ್ಲಿ 11 ಮಂದಿ ನೆಲೆಸಿದ್ದರು. ಟವರ್‌ ಬೀಳುವ ಮುನ್ಸೂಚನೆ ಸಿಕ್ಕ ತಕ್ಷಣ ಸ್ಥಳೀಯರು ಆ ಕಟ್ಟಡಗಳಿಂದ ನಿವಾಸಿಗಳನ್ನು ಹೊರಗೆ ಕರೆತಂದಿದ್ದಾರೆ. ಕೊಂಚ ತಡವಾಗಿದ್ದರೂ ಭಾರೀ ದುರಂತವೇ ನಡೆಯುವ ಸಾಧ್ಯತೆ ಇತ್ತು. ಅದೃಷ್ಟವಶಾತ್‌ 11 ಮಂದಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುಮಾರು 30 ಅಡಿ ಉದ್ದದ ಮೊಬೈಲ್‌ ಟವರ್‌ ಬಿದ್ದ ಪರಿಣಾಮ ಅಕ್ಕಪಕ್ಕದ 2 ಅಂಗಡಿಗಳಿಗೆ ಹಾನಿಯಾಗಿದೆ.

ಕಟ್ಟಡ ಕುಸಿತದ ವಿಚಾರ ತಿಳಿದ ಕೂಡಲೇ ಬಿಬಿಎಂಪಿ ಅಧಿಕಾರಿಗಳು ಹಾಗೂ ನಂದಿನಿ ಲೇಔಟ್‌ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದ್ದಾರೆ. ನಿರ್ಲಕ್ಷ್ಯದ ಆರೋಪದಡಿ ನಿವೇಶನದ ಮಾಲೀಕ ಹರೀಶ್‌ ವಿರುದ್ಧ ಬಿಬಿಎಂಪಿ ಅಧಿಕಾರಿಗಳು ನಂದಿನಿ ಲೇಔಟ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು: ವಿಳಾಸ ಕೇಳುವ ನೆಪದಲ್ಲಿ ಒಂಟಿ ಮಹಿಳೆಯರ ಸರ ಕಿತ್ತು ಪರಾರಿ ಆಗುತ್ತಿದ್ದ ರೌಡಿಶೀಟರ್ ಸೆರೆ

ವಿಡಿಯೋ ವೈರಲ್‌

ಕಟ್ಟಡ ಹಾಗೂ ಅದರ ಮೇಲಿನ ಮೊಬೈಲ್‌ ಟವರ್‌ ಧರೆಗುರುಳುವ ದೃಶ್ಯವನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಕಟ್ಟಡ ಹಾಗೂ ಮೊಬೈಲ್‌ ಟವರ್‌ ಖಾಲಿ ಜಾಗಕ್ಕೆ ಉರುಳಿ ಬಿದ್ದಿದೆ. ಒಂದು ವೇಳೆ ಜನ ನಿಂತಿರುವ ಕಡೆಗೆ ಬಿದ್ದಿದ್ದಲ್ಲಿ ದೊಡ್ಡ ಅನಾಹುತವೇ ಸಂಭವಿಸುವ ಸಾಧ್ಯತೆಯಿತ್ತು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಗಡೀಪಾರು ಸಂಕಷ್ಟದಲ್ಲಿ Mahesh Shetty Timarodi: ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಮಹಾಲಿಂಗೇಶ್ವರ ದೇಗುಲದಲ್ಲಿ ಪ್ರಾರ್ಥನೆ
ಸಿನಿಮಾ ರಿಲೀಸ್‌ಗೂ ಮುನ್ನವೇ ಜೈಲಲ್ಲಿ ಡೆವಿಲ್ ರೂಪ ತಾಳಿದ ದರ್ಶನ್; ಸಹ ಕೈದಿಗಳಿಗೆ ಕಾಲಿನಿಂದ ಒದ್ದು ದುರಹಂಕಾರ!