ಟಿಪ್ಪು ಜಯಂತಿ ಆಮಂತ್ರಣದಲ್ಲಿ ಅನಂತ ಹೆಗಡೆ ಹೆಸರಿಗೆ ಕೊಕ್‌

Published : Nov 09, 2018, 10:38 AM IST
ಟಿಪ್ಪು ಜಯಂತಿ ಆಮಂತ್ರಣದಲ್ಲಿ ಅನಂತ ಹೆಗಡೆ ಹೆಸರಿಗೆ ಕೊಕ್‌

ಸಾರಾಂಶ

ಶನಿವಾರ ರಾಜ್ಯದ ಹಲವೆಡೆ ಟಿಪ್ಪು ಜಯಂತಿ ಆಚರಣೆ ಮಾಡುತ್ತಿದ್ದು, ಉತ್ತರ ಕನ್ನಡ ಜಿಲ್ಲಾಡಳಿತ ಮುದ್ರಿಸಿದ ಆಹ್ವಾನ ಪತ್ರಿಕೆಯಲ್ಲಿ ಅನಂತ್ ಕುಮಾರ್ ಹೆಗಡೆ ಹೆಸರನ್ನು ಕೈ ಬಿಡಲಾಗಿದೆ. 

ಕಾರವಾರ: ಉತ್ತರ ಕನ್ನಡ ಜಿಲ್ಲಾಡಳಿತ ಮುದ್ರಿಸಿದ ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹೆಸರು ಹೊರತಾಗಿ ಉಳಿದ ಶಾಸಕರ ಹೆಸರನ್ನು ಮುದ್ರಿಸಲಾಗಿದೆ. 

ಅನಂತಕುಮಾರ ಹೆಗಡೆ ಸರ್ಕಾರಕ್ಕೆ ಪತ್ರ ಬರೆದಿದ್ದರಿಂದ ಅವರ ಹೆಸರನ್ನು ಕೈಬಿಡಲಾಗಿದ್ದು, ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿರುವ ಶಿರಸಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ, ಕುಮಟಾ ಶಾಸಕ ದಿನಕರ ಶೆಟ್ಟಿ, ಭಟ್ಕಳ ಶಾಸಕ ಸುನೀಲ್‌ ನಾಯ್ಕ ಹಾಗೂ ಕಾರವಾರ ಶಾಸಕಿ ರೂಪಾಲಿ ನಾಯ್ಕ ಅವರ ಹೆಸರನ್ನು ನಮೂದಿಸಲಾಗಿದೆ. ಭಟ್ಕಳ ಶಾಸಕ ಸುನೀಲ್‌ ನಾಯ್ಕ ತಮ್ಮ ಹೆಸರನ್ನು ಆಮಂತ್ರಣ ಪತ್ರಿಕೆಯಲ್ಲಿ ಸೇರಿಸದಂತೆ ಜಿಲ್ಲಾಡಳಿತಕ್ಕೆ, ಸರ್ಕಾರಕ್ಕೆ ಪತ್ರ ಬರೆದಿದ್ದರೂ ಅವರ ಹೆಸರನ್ನು ನಮೂದಿಸಲಾಗಿದೆ.

ನ.10ರಂದು ನಡೆಯುವ ಜಯಂತಿಯಲ್ಲಿ ಬಿಜೆಪಿ ಶಾಸಕರು ಗೈರಾಗುವ ಸಾಧ್ಯತೆ ಇದೆ. ಕಳೆದ ವರ್ಷ 2 ಬಾರಿ ಆಮಂತ್ರಣ ಪತ್ರಿಕೆ ಮುದ್ರಿಸಲಾಗಿತ್ತು. ಮೊದಲು ಅನಂತಕುಮಾರ ತಮ್ಮ ಹೆಸರನ್ನು ಬರೆಯದಂತೆ ಪತ್ರ ಬರೆದಿದ್ದರು. ಅವರ ಹೆಸರನ್ನು ಕೈಬಿಟ್ಟು ಉಳಿದ ಗಣ್ಯರ ಹೆಸರು ಸೇರಿಸಲಾಗಿತ್ತು. ತರುವಾಯ ವಿಶ್ವೇಶ್ವರ ಹೆಗಡೆ ಪತ್ರ ಬರೆದಿದ್ದರು. ಇದರಿಂದಾಗಿ ಹೆಸರನ್ನು ತೆಗೆದು ಹೊಸದಾಗಿ ಮುದ್ರಣ ಮಾಡಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಂಗಳೂರಲ್ಲಿ ಇಂದು ಇನ್ನಷ್ಟು ಚಳಿ; ತಾಪಮಾನ ಕುಸಿತ, ಈ ಮೂರು ಜಿಲ್ಲೆಗಳಲ್ಲಿ ಶೀತ ಅಲೆ ಎಚ್ಚರಿಕೆ!
ಬೆಂಗ್ಳೂರಲ್ಲಿ ರಾಜ್ಯದ ಮೊದಲ Gen-Z ಪೋಸ್ಟ್ ಆಫೀಸ್! ಏನಿದರ ವಿಶೇಷತೆ?