
ಅನಂತಪುರ(ಮಾ.28): ಅನ್ಯ ರಾಜ್ಯಗಳಿಂದ ಬೆಂಗಳೂರಿಗೆ ಬರುವವರು ಏ.1ರಿಂದ ಕೊರೋನಾ ನೆಗೆಟಿವ್ ವರದಿಯನ್ನು ಕಡ್ಡಾಯವಾಗಿ ಹೊಂದಿರಬೇಕೆಂಬ ನಿಯಮ ಜಾರಿಗೆ ಬರುವ ಬೆನ್ನಲ್ಲೇ, ನೆರೆಯ ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ಇನ್ನಿತರ ರಾಜ್ಯಗಳಿಂದ ಭಾರೀ ಪ್ರಮಾಣದ ಜನ ಸಾಗರ ಸಿಲಿಕಾನ್ ಸಿಟಿ ಬೆಂಗಳೂರಿನತ್ತ ಆಗಮಿಸುತ್ತಿದೆ.
ಬೆಂಗಳೂರಿನಲ್ಲಿ ತಮ್ಮ ಮಕ್ಕಳು ಅಥವಾ ಕುಟುಂಬ ಸದಸ್ಯರನ್ನು ಹೊಂದಿರುವವರು ಮತ್ತು ನಾನಾ ಕಾರಣಗಳಿಗಾಗಿ ಆಂಧ್ರ ಮತ್ತು ತೆಲಂಗಾಣಕ್ಕೆ ತೆರಳಿದವರು ಭಾರೀ ಪ್ರಮಾಣದಲ್ಲಿ ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ಹೀಗಾಗಿ ಎಲ್ಲಾ ಬೆಂಗಳೂರಿಗೆ ತೆರಳುವ ಎಲ್ಲಾ ಬಸ್, ರೈಲುಗಳು ತುಂಬಿತುಳುಕುತ್ತಿವೆ.
ಕರ್ನಾಟಕದಲ್ಲಿ ಕೊರೋನಾ 2ನೇ ಅಲೆ: ಜಾತ್ರೆ, ಧಾರ್ಮಿಕ ಉತ್ಸವ ರದ್ದು!
ಕರ್ನಾಟಕ ಮತ್ತು ಮುಖ್ಯವಾಗಿ ಬೆಂಗಳೂರಿನಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಇದರ ನಿಯಂತ್ರಣಕ್ಕಾಗಿ ಅನ್ಯ ರಾಜ್ಯಗಳಿಂದ ಬರುವವರಿಗೆ ಕೊರೋನಾ ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ