ದಸರಾ, ದೀಪಾವಳಿ ಹಬ್ಬ ಬಂದ್ರೂ ಬಾರದ ಸಂಬಳ‌: ಸಿದ್ದು ಸರ್ಕಾರದ ವಿರುದ್ಧ ಸಿಡಿದೆದ್ದ ಅಂಗನವಾಡಿ ಕಾರ್ಯಕರ್ತೆಯರು

Published : Oct 05, 2024, 11:27 PM IST
ದಸರಾ, ದೀಪಾವಳಿ ಹಬ್ಬ ಬಂದ್ರೂ ಬಾರದ ಸಂಬಳ‌: ಸಿದ್ದು ಸರ್ಕಾರದ ವಿರುದ್ಧ ಸಿಡಿದೆದ್ದ ಅಂಗನವಾಡಿ ಕಾರ್ಯಕರ್ತೆಯರು

ಸಾರಾಂಶ

ಬಡ ಅಂಗನವಾಡಿ ಕಾರ್ಯಕರ್ತೆಯರು ಗೌರವಧನದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಮನೆಯಲ್ಲಿ ಹಬ್ಬ ಆಚರಣೆ ಮಾಡಲು ಹಣ ಇಲ್ಲ ಎಂದು ತಮ್ಮ ಅಸಮಾಧಾನವನ್ನ ಹೊರಹಾಕಿದ ಅಂಗನವಾಡಿ ಕಾರ್ಯಕರ್ತೆಯರು   

ಬೆಂಗಳೂರು(ಅ.05): ಅಂಗನವಾಡಿ ಕಾರ್ಯಕರ್ತೆಯರು ಮತ್ತೊಮ್ಮೆ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಹೌದು,  ಅಂಗನವಾಡಿ ಕೇಂದ್ರವನ್ನು ಬಂದ್ ಮಾಡಲು ಕಾರ್ಯಕರ್ತೆಯರು ಮುಂದಾಗಿದ್ದಾರೆ. ದಸರಾ, ದೀಪಾವಳಿ ಹಬ್ಬ ಬಂದ್ರೂ ಸಂಬಳ‌ ನೀಡದ ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಆಕ್ರೋಶ ಹೊರಹಾಕಿದ್ದಾರೆ. 

ಹಲವು ಜಿಲ್ಲೆಯ ನೌಕರರಿಗೆ 6 ತಿಂಗಳಿಂದ ಸಂಬಳ ಜೊತೆಗೆ ಮೊಟ್ಟೆ ದುಡ್ಡು ಸಿಗದ ಹಿನ್ನಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರ ಕಿಡಿ ಕಾರಿದ್ದಾರೆ.  ಬಡ ಅಂಗನವಾಡಿ ಕಾರ್ಯಕರ್ತೆಯರು ಗೌರವಧನದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಮನೆಯಲ್ಲಿ ಹಬ್ಬ ಆಚರಣೆ ಮಾಡಲು ಹಣ ಇಲ್ಲ ಎಂದು ತಮ್ಮ ಅಸಮಾಧಾನವನ್ನ ಹೊರಹಾಕಿದ್ದಾರೆ. 

13,500 ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ನೇಮಕ; ಸಿಎಂ ಸಿದ್ದರಾಮಯ್ಯ

ಫಲಾನುಭಿಗಳಿಗೆ ಮೊಟ್ಟೆ ಕೂಡ ನೌಕರರ ಹಣದಲ್ಲೇ ಖರೀದಿ ಮಾಡಿ ಕೊಡ್ತಿದ್ದಾರೆ. ಇನ್ಮುಂದೆ ನಾವು ಮೊಟ್ಟೆ ಕೊಡಲು ಸಾಧ್ಯ ಇಲ್ಲ. ಹೀಗಾಗಿ ಸಂಬಳ, ಮೊಟ್ಟೆ ಹಣ ಹಾಕಿ ಎಂದು ಅಂಗನವಾಡಿ ಕಾರ್ಯಕರ್ತೆಯರು ಒತ್ತಾಯಿಸಿದ್ದಾರೆ. ಇಲ್ಲವಾದರೆ ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡುವ ಎಚ್ಚರಿಕೆ ನೀಡಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: Bengaluru - ಬೆಂಗಳೂರಿನಲ್ಲಿ 7ನೇ ಕ್ಲಾಸ್ ವಿದ್ಯಾರ್ಥಿ ಕಪಾಳಕ್ಕೆ ಹೊಡೆದ ಶಿಕ್ಷಕನ ಬಂಧನ