ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಲಾರಿ ಚಾಲಕ ಅರ್ಜುನ್ ಕುಟುಂಬ

By Santosh NaikFirst Published Jul 23, 2024, 10:06 PM IST
Highlights


ಅಂಕೋಲಾ ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಇನ್ನೂ ಮಣ್ಣಿನಾಳದಲ್ಲಿಯೇ ಸಿಲಿಕಿರಬಹುದು ಎಂದು ಅಂದಾಜಿಸಲಾಗಿರುವ ಲಾರಿ ಚಾಲಕ ಅರ್ಜುನ್‌ ಅವರ ಕುಟುಂಬ ಕರ್ನಾಟಕ ಸರ್ಕಾರದ ವಿರುದ್ಧವೇ ಹೈಕೋರ್ಟ್‌ ಮೆಟ್ಟಿಲೇರಿದೆ.
 

ಕಾರವಾರ (ಜು.23): ಅಂಕೋಲಾ ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕೇರಳದ ಲಾರಿ ಚಾಲಕ ಅರ್ಜುನ್‌ ಅವರ ಕುಟುಂಬ ಹೈಕೋರ್ಟ್ ಮೆಟ್ಟಿಲೇರಿದೆ. ಅರ್ಜುನ್ ಕೇರಳ ಮೂಲದ ಲಾರಿ ಚಾಲಕ. ಗುಡ್ಡ ಕುಸಿತ ಸ್ಥಳದಲ್ಲಿ ಅರ್ಜುನ್ ಲಾರಿ ಜಿಪಿಎಸ್  ಲೊಕೇಶನ್ ಪತ್ತೆಯಾಗಿದೆ. ಆದರೆ, ಆತನನ್ನು ರಕ್ಷಣೆ ಮಾಡುವ ಕಾರ್ಯಾಚರಣೆ ಅವೈಜ್ಞಾನಿಕವಾಗಿ ಹಾಗೂ ವಿಳಂಬವಾಗಿ ನಡೆಯುತ್ತಿದೆ ಎಂದು ಕುಟುಂಬ ಆರೋಪ ಮಾಡಿದೆ. ಇದರ ಬೆನ್ನಲ್ಲೊಯೇ ರಾಜ್ಯ ಸರ್ಕಾರದಿಂದ ಈ ಬಗ್ಗೆ ಹೈಕೋರ್ಟ್‌ ವರದಿ ಕೇಳಿದೆ. ಕೇಂದ್ರ ಸರಕಾರದಿಂದಲೂ ಪ್ರಕರಣ ಸಂಬಂಧ ಕೈಗೊಂಡಿರುವ ಕ್ರಮದ ಬಗ್ಗೆ ವರದಿ ಕೇಳಿರುವ ಮಾಹಿತಿ ಸಿಕ್ಕಿದೆ. ನಾಳೆ ಈ ಪ್ರಕರಣ ದಾವೆ ಸಂಬಂಧ ಹೈ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ.

ಶಿರೂರಿನಲ್ಲಿ ಕರ್ನಾಟಕ ಹಾಗೂ ಕೇರಳದಿಂದ ಜಂಟಿಯಾಗಿ ಭರ್ಜರಿ ಕಾರ್ಯಾಚರಣೆ ನಡೆಯುತ್ತಿದೆ. ಶಿರೂರಿನಲ್ಲಿ ಮಣ್ಣು ತೆರವು ಹಾಗೂ ಗಂಗಾವಳಿ ನದಿಯಲ್ಲಿ ಶೋಧ ಕಾರ್ಯಾಚರಣೆ ಬಿರುಸಿನಿಂದ ಸಾಗಿದೆ. NDRF, SDRF, ಆರ್ಮಿ, ನೇವಿ, ಕೇರಳದ KRT ಹಾಗೂ ವಿಶೇಷ ತಜ್ಞರಿಂದ‌ ಕಾರ್ಯಾಚರಣೆ ನಡೆಯುತ್ತಿದೆ. ರಸ್ತೆಯ ಮೇಲೆ ಬಿದ್ದಿರುವ ಎಲ್ಲಾ ಮಣ್ಣು ಶೇ. 70-80ರಷ್ಟು ತೆರವಾದ ಹಿನ್ನೆಲೆ‌ ನದಿಯಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಮಂಗಳೂರು ಹಾಗೂ ಬೆಂಗಳೂರಿನಿಂದ ತರಿಸಿದ ರೇಡಾರ್, ಆರ್ಮಿಯ ರೇಡಾರ್, ನೇವಿಯ ಸೋನಾರ್ ಮೂಲಕ ಕಾರ್ಯಾಚರಣೆ ಮಾಡಲಾಗುತ್ತಿದೆ. ಹುಬ್ಬಳ್ಳಿಯಿಂದ 60 ಅಡಿ ದೂರದವರೆಗೆ ಮಣ್ಣು ತೆರವು ಮಾಡುವಂತಹ ಹಿಟಾಚಿಯನ್ನು ಬಳಕೆ ಮಾಡಲಾಗುತ್ತಿದೆ. ಲಾರಿ ಸಮೇತ ಮಣ್ಣಿನಡಿ ಸಿಲುಕಿದ ಕೇರಳ ಮೂಲದ ಅರ್ಜುನ್, ಕಾಣೆಯಾದ ಜಗನ್ನಾಥ್, ಲೋಕೇಶ್‌ ಮುಂತಾದವರಿಗಾಗಿ ಹುಡುಕಾಟ ನಡೆದಿದೆ.

Latest Videos

ಜಿಪಿಎಸ್ ಲೊಕೇಶನ್ ಪ್ರಕಾರ ಗುಡ್ಡದ ಕೆಳಭಾಗದಲ್ಲೇ ಲಾರಿ ಸಮೇತ ಅರ್ಜುನ್ ಸಿಲುಕಿದ್ದಾನೆ ಎಂದು ಹೇಳಲಾಗಿತ್ತು ಆದರೆ, 70-80% ಮಣ್ಣು ತೆರೆಯಲಾದ್ರೂ ಲಾರಿಯ ಯಾವುದೇ ಕುರುಹು ದೊರಕದ ಕಾರಣ ನದಿ ಭಾಗದಲ್ಲಿ ಹುಡುಕಾಟ ಮುಂದುವರಿದಿದೆ.

ಶಿರೂರು ಗುಡ್ಡ ಕುಸಿತ: ಬಿಜೆಪಿ ಮೇಲೆ ಆರೋಪ ಮಾಡೋ ಮಣ್ಣೆರೆಚಾಟ ಮಾಡಲ್ಲ, ಸಿಎಂ ಸಿದ್ದರಾಮಯ್ಯ

ಅಂಕೋಲಾದಲ್ಲಿ ಶಾಸಕ ಸತೀಶ್ ಸೈಲ್ ಮಾತನಾಡಿದ್ದು,  ಇಂದು ಕಾರ್ಯಾಚರಣೆ ಬಹುತೇಕ ಮುಗಿದಿದೆ., ಗುಡ್ಡದ ಪಕ್ಕ ಕೇರಳದ ಲಾರಿ ಸಿಕ್ಕಿಲ್ಲ. ನದಿ ಪಕ್ಕದಲ್ಲಿ ಲಾರಿ ಬಿದ್ದಿರುವ ಸಾಧ್ಯತೆ ಇದೆ. ನಾಳೆ ಕಾರ್ಯಾಚರಣೆಗೆ ಗೋಕಾಕ್ ನಿಂದ ಪೋಕ್ಲೈನ್ ಮಷಿನ್ ಬರುತ್ತಿದೆ. ನದಿಯೊಳಗೆ ಮಣ್ಣನ್ನು ತೆಗೆದು ಕಾರ್ಯಾಚರಣೆ ಮಾಡಲಾಗುತ್ತದೆ. ನಾಳೆ ಬಹುತೇಕ ಕೇರಳದ ಲಾರಿ ಸಿಗುವ ಸಾಧ್ಯತೆಗಳಿವೆ. ಸುಮಾರು 60 ಅಡಿ ಉದ್ದದ ಪೋಕ್ಲೈನ್ ಬಳಸಿ ಕಾರ್ಯಾಚರಣೆ ಮಾಡಲಾಗುತ್ತಿದೆ. ಕೇರಳದವರು ನಮಗೆ ಸಹಕರಿಸಬೇಕು. ಪ್ರಕರಣ ದಾಖಲಿಸುವ ಬದಲು ನಮಗೆ ಸಹಕರಿಸಲಿ. ಜಿಲ್ಲಾಡಳಿತ ಸಹ ನಮ್ಮೊಂದಿಗೆ ಕಾರ್ಯಾಚರಣೆಗೆ ಸಹಕರಿಸುತ್ತಿದೆ' ಎಂದು ಹೇಳಿದ್ದಾರೆ.

 

ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ; ಕೇಂದ್ರ ಸರ್ಕಾರದ ಭ್ರಷ್ಟಾಚಾರ ಕಾರಣವೆಂದ ಕಾಂಗ್ರೆಸ್!

click me!