ಬಿಜೆಪಿ ಮುಖಂಡ ಅಣ್ಣಾಮಲೈ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ

Published : Oct 02, 2025, 04:58 PM IST
Annamalai Kollur temple visit

ಸಾರಾಂಶ

Annamalai Kollur temple visit: ದಸರಾ ಹಬ್ಬದ ಪ್ರಯುಕ್ತ ಬಿಜೆಪಿ ಮುಖಂಡ ಮತ್ತು ಮಾಜಿ ಪೊಲೀಸ್ ಅಧಿಕಾರಿ ಅಣ್ಣಾಮಲೈ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಹಿಂದೆ ಉಡುಪಿಯಲ್ಲಿ ಎಸ್ಪಿಯಾಗಿದ್ದರು. ದೇವಾಲಯದಲ್ಲಿ ಭಕ್ತರೊಂದಿಗೆ ಸರಳತೆಯಿಮದ ಬೆರೆತರು..

ಉಡುಪಿ (ಅ.2): ದಸರಾ ಹಬ್ಬದ ಸಂಭ್ರಮದ ನಡುವೆ ಬಿಜೆಪಿ ಮುಖಂಡ ಮತ್ತು ಮಾಜಿ ಪೊಲೀಸ್ ಅಧಿಕಾರಿ ಅಣ್ಣಾಮಲೈ ಅವರು ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದರು. 

ವಿಜಯದಶಮಿಯ ಪವಿತ್ರ ಸಂದರ್ಭದಲ್ಲಿ ಅವರು ಮುಂಜಾನೆಯೇ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯದ ಆಡಳಿತ ಮಂಡಳಿಯು ಅಣ್ಣಾಮಲೈ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ವಿಶೇಷ ಗೌರವ ಸಮರ್ಪಿಸಿತು.

ಇದನ್ನೂ ಓದಿ: ಸರ್ವರಿಗೂ ವಿಜಯದಶಮಿಯ ಹಾರ್ದಿಕ ಶುಭಾಶಯಗಳು

ಈ ಹಿಂದೆ ಉಡುಪಿಯಲ್ಲಿ ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದ ಅಣ್ಣಾಮಲೈ ಅವರ ಆಗಮನದಿಂದ ಸ್ಥಳೀಯರು ಖುಷಿಗೊಂಡರು. ದೇವಾಲಯದಲ್ಲಿ ಸರದಿಯ ಸಾಲಿನಲ್ಲಿ ನಿಂತಿದ್ದ ಭಕ್ತರೊಂದಿಗೆ ಅವರು ಕೆಲಕಾಲ ಮಾತುಕತೆ ನಡೆಸಿದರು. 

ಇದನ್ನೂ ಓದಿ: Davanagere: ವಿಜಯದಶಮಿ ಶೋಭಾಯಾತ್ರೆಗೆ ಬೆಣ್ಣೆನಗರಿ ಸಜ್ಜು, ಎಲ್ಲೆಲ್ಲೂ ಕೇಸರಿಮಯ, ಪೊಲೀಸ್ ಸರ್ಪಗಾವಲು

ಭಕ್ತರು ಅಣ್ಣಾಮಲೈ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡರು. ಅಣ್ಣಾಮಲೈ ಅವರ ಸರಳತೆ ಮತ್ತು ಆತ್ಮೀಯತೆ ಕಂಡು ಸ್ಥಳೀಯರು ಸಂತಸಗೊಂಡರು . ದೇವಿಯ ಆಶೀರ್ವಾದ ಪಡೆದು ತೆರಳಿದ ಅಣ್ಣಾಮಲೈ, ದೇವಾಲಯದ ಸಂಪ್ರದಾಯಕ್ಕೆ ಗೌರವ ಸೂಚಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸೇವೆಯಲ್ಲಿಯೇ ಸಾರ್ಥಕತೆ ಪಡೆಯುವ ಗೃಹ ರಕ್ಷಕರು
ನೊಂದವರಿಗೆ ನ್ಯಾಯ ಕೊಡಿಸುವಲ್ಲಿ ರಾಜ್ಯ ಮೊದಲ ಸ್ಥಾನ: ಗೃಹಸಚಿವ ಪರಮೇಶ್ವರ್