
ಮಂಗಳೂರು (ಜು.22): ಮಂಗಳೂರಿನ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಯ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿದ ಘಟನೆ ನಗರದ ಬಿಜೈ ಕಾಪಿಕಾಡ್ ಎಂಬಲ್ಲಿ ನಡೆದಿದೆ.
ವಿದ್ಯಾರ್ಥಿ ಮಹಮ್ಮದ್ ಹಫೀಸ್ (20) ಮೇಲೆ ಹಲ್ಲೆ ನಡೆಸಿದ ತಂಡ. ಬೀಚ್ಗೆ ತೆರಳಿದ್ದ ವಿದ್ಯಾರ್ಥಿಗಳು. ವಿದ್ಯಾರ್ಥಿಗಳನ್ನು ಹಿಂಬಾಲಿಸಿಕೊಂಡು ಬಂದು ಹಲ್ಲೆ ನಡೆಸಿದ್ದಾರೆ.
ಎ ಜೆ ವೈದ್ಯಕೀಯ ಕಾಲೇಜಿನ ಹಾಸ್ಪಿಟಲ್ ಮ್ಯಾನೆಜ್ಮೆಂಟ್ ಕೋರ್ಸ್(AJ Medical College Hospital Management Course) ನ ವಿದ್ಯಾರ್ಥಿಗಳು ಪಣಂಬೂರು ಬೀಚ್ ಗೆ ಒಟ್ಟೊಟ್ಟಿ ವಿಹಾರಕ್ಕೆ ತೆರಳಿದ್ದರು. 6 ಮಂದಿ ವಿದ್ಯಾರ್ಥಿ ವಿದ್ಯಾರ್ಥಿನಿಯರಿದ್ದರು.ಈ ವೇಳೆ ಹಿಂಬಾಲಿಸಿಕೊಂಡು ಬಂದ ತಂಡ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ್ದಾರೆ. ಅನ್ಯಕೋಮಿನ ವಿದ್ಯಾರ್ಥಿಗಳೊಂದಿಗೆ ತೆರಳಿದ್ದ 4 ಮಂದಿ ವಿದ್ಯಾರ್ಥಿನಿಯರು. ಬೀಚ್ ನಿಂದ ಅನ್ಯಕೋಮಿನ ವಿದ್ಯಾರ್ಥಿಗಳನ್ನು ಬೈಕ್ ನಲ್ಲಿ ಹಿಂಬಾಲಿಸಿ ಬಂದು ಹಲ್ಲೆ ನಡೆಸಿರುವ ತಂಡ
ಗಾಯಗೊಂಡ ವಿದ್ಯಾರ್ಥಿ ಉರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ನಿನ್ನೆ ರಾತ್ರಿ ವೇಳೆ ನಡೆದ ಘಟನೆ
Karnataka Budget 2023: ನೈತಿಕ ಪೊಲೀಸ್ಗಿರಿ, ಸುಳ್ಳು ಸುದ್ದಿಗೆ ಗುದ್ದು..!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ