ಪೊಲೀಸರಿಗೆ ಬೆದರಿಕೆ ಹಾಕಿದ ಆರೋಪ; ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಎಫ್‌ಐಆರ್!

Published : May 21, 2024, 11:19 PM ISTUpdated : May 21, 2024, 11:29 PM IST
ಪೊಲೀಸರಿಗೆ ಬೆದರಿಕೆ ಹಾಕಿದ ಆರೋಪ; ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಎಫ್‌ಐಆರ್!

ಸಾರಾಂಶ

ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿ ಪೊಲೀಸರಿಗೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲು ಮಾಡಲಾಗಿದೆ.

ಬೆಳ್ತಂಗಡಿ (ಮೇ.21): ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿ ಪೊಲೀಸರಿಗೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲು ಮಾಡಲಾಗಿದೆ. ಪೊಲೀಸರಿಗೆ ಜೀವ ಬೆದರಿಕೆ ಒಡ್ಡಿದ ಹಾಗೂ ತಾಲೂಕು ಕಚೇರಿಗೆ ಬರುವ ಸಾರ್ವಜನಿಕರಿಗೂ ತಡೆ ಆರೋಪ ಹಿನ್ನೆಲೆ ಐಪಿಸಿ 143, 147, 341, 504, 506 ಜೊತೆಗೆ 149 ಐ.ಪಿ.ಸಿಯಂತೆ ಪ್ರಕರಣ ದಾಖಲು ಮಾಡಲಾಗಿದೆ.

ಮೇ.20ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ನಡೆದಿದ್ದ ಪ್ರತಿಭಟನೆ ವೇಳೆ, ಅರೆಸ್ಟ್ ಆಗಿರುವ ಕಾರ್ಯಕರ್ತರಿಗಾಗಿ ಪೊಲೀಸರ ಕಾಲರ್ ಹಿಡಿಯಲು ಸಿದ್ಧ. ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿಯ ಪೊಲೀಸ್ ಠಾಣೆಗೆ ಆದ ಗತಿಯನ್ನು ಬೆಳ್ತಂಗಡಿ ಠಾಣೆಗೂ ಕಾಣಿಸುತ್ತೇನೆ ಎಂದು ಬೆಳ್ತಂಗಡಿ ಠಾಣಾ ಪೊಲೀಸ್ ನಿರೀಕ್ಷಕರಿಗೆ ಮತ್ತು ಇತರೆ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಪೊಲೀಸ್ ಇಲಾಖೆಗೆ ಅವ್ಯಾಚ ಶಬ್ದಗಳಿಂದ ನಿಂದಿಸಿದ ಆರೋಪ ಹಿನ್ನೆಲೆ ಎಫ್‌ಐಆರ್ ದಾಖಲಿಸಲಾಗಿದೆ.

ಚುನಾವಣೆಗೂ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್: ಹರೀಶ್‌ ಪೂಂಜ 

ಕೆಲದಿನಗಳ ಹಿಂದೆಯಷ್ಟೇ ಶಾಸಕ ಹರೀಶ್ ಪೂಂಜಾ ವಿರುದ್ಧ ಪೊಲೀಸರಿಗೆ ಬೆದರಿಸಿದ್ದ ಆರೋಪದ ಮೇಲೆ ಕೇಸ್ ದಾಖಲಿಸಲಾಗಿತ್ತು. ಬೆಳ್ತಂಗಡಿ ಪೊಲೀಸ್ ಠಾಣೆಗೆ ನುಗ್ಗಿ ದರ್ಪ ಪ್ರದರ್ಶಿಸಿದ್ದಾರೆಂಬ ಆರೋಪದಡಿ ಎಫ್‌ಐಆರ್ ದಾಖಲಿಸಿದ್ದ ಪೊಲೀಸರು. ಆದರೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಂತಬೆಟ್ಟು ಎಂಬಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲುಗಣಿಗಾರಿಕೆ ಮೇಲೆ ದಾಳಿ ನಡೆಸಿ ಸ್ಫೋಟಕಗಳು ಪತ್ತೆ ಪ್ರಕರಣ ಸಂಬಂಧ ಪ್ರಕರಣ ದಾಖಲಿಸಿದ್ದರು.

ಬಿಜೆಪಿ ಟಿಕೆಟ್ ಹಂಚಿಕೆಗೆ ಗಾಡ್ ಫಾದರ್ ಸಂಸ್ಕೃತಿ ಬಂದಿದೆ; ಮಾಜಿ ಶಾಸಕ ರಘುಪತಿ ಭಟ್

ಆರೋಪಿ ಬಿಜೆಪಿ ಮುಖಂಡ ಶಶಿರಾಜ್ ಶೆಟ್ಟಿ (35) ಬಂಧಿಸಿದ್ದ ಪೊಲೀಸರು. ಬಂಧಿತ ಆರೋಪಿ ಶಶಿರಾಜ್  ರೌಡಿಶೀಟರ್. ಆದರೆ ರೌಡಿಶೀಟರ್ ಪರವಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಕಾಲತ್ತು ಮಾಡಿದ್ದರು. ಬಂಧನ ಖಂಡಿಸಿ ಮೇ.18ರಂದು ಬೆಳ್ತಂಗಡಿ ಠಾಣೆಗೆ ಭೇಟಿ ನೀಡಿ ಪೊಲೀಸರ ವಿರುದ್ಧ ದರ್ಪ ಪ್ರದರ್ಶನ ಮಾಡಿದ್ದಾರೆ. ಠಾಣಾಧಿಕಾರಿಗಳಿಗೆ ಒತ್ತಡ ಹಾಕಿ, ಅವಾಚ್ಯವಾಗಿ ನಿಂದಿಸಿದ್ದಾರೆಂದು ಎಫ್‌ಐಆರ್ ದಾಖಲು ಮಾಡಿದ್ದರು. ಇದೀಗ ಶಾಸಕ ಹರೀಶ್ ಪೂಂಜಾ ವಿರುದ್ದ ಮತ್ತೊಂದು ಎಫ್ಐಆರ್ ದಾಖಲಿಸಿರುವ ಪೊಲೀಸರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ