ಕೆಕೆಆರ್‌ಡಿಬಿ 300 ಕೋಟಿ ಅನುದಾನ ದುರ್ಬಳಕೆ?: ಯಡಿಯೂರಪ್ಪ ಕಾಲದ ಇನ್ನೊಂದು ಅಕ್ರಮ ತನಿಖೆಗೆ ಆದೇಶ

Published : Nov 12, 2024, 07:02 AM ISTUpdated : Nov 12, 2024, 07:13 AM IST
ಕೆಕೆಆರ್‌ಡಿಬಿ 300 ಕೋಟಿ ಅನುದಾನ ದುರ್ಬಳಕೆ?: ಯಡಿಯೂರಪ್ಪ ಕಾಲದ ಇನ್ನೊಂದು ಅಕ್ರಮ ತನಿಖೆಗೆ ಆದೇಶ

ಸಾರಾಂಶ

ಕಾಂಗ್ರೆಸ್ ಸರ್ಕಾರ ಕೆಕೆಆರ್‌ಡಿಬಿ ಹಾಗೂ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಕ್ರಮದ ತನಿಖೆಗೆ ಮುಂದಾಗಿದೆ. ಅದಕ್ಕಾಗಿ ನಿವೃತ್ತ ಐಎ ಎಸ್ ಅಧಿಕಾರಿ ಸುಧೀ‌ರ್ ಕುಮಾರ್ ನೇತೃತ್ವದ ತನಿಖಾ ಸಮಿತಿ ರಚಿಸಲಾಗಿದೆ.   

ಬೆಂಗಳೂರು(ನ.12):  ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅನುದಾನ ದುರ್ಬಳಕೆಗೆ ಸಂಬಂಧಿಸಿದಂತೆ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದ್ದು, ಆ ಮೂಲಕ ಬಿಜೆಪಿ ಸರ್ಕಾರದ ಅವಧಿಯ ಮತ್ತೊಂದು ಅಕ್ರಮದ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದೆ. 

ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೆಕೆಆರ್‌ಡಿಬಿ (ಆಗ ದತ್ತಾತ್ರೇಯ ಪಾಟೀಲ್ ರೇವೂರ ಅಧ್ಯಕ್ಷರಾಗಿದ್ದರು) ಅಡಿಯಲ್ಲಿ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘ ರಚಿಸಲಾಗಿತ್ತು. 2020-21 ರಿಂದ 2022-23 ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘಕ್ಕೆ ಪ್ರತಿ ವರ್ಷ 100 ಕೋಟಿ ರು.ನಂತೆ ಒಟ್ಟು 300 ಕೋಟಿ ರು. ಅನುದಾನ ನೀಡಲಾಗಿತ್ತು. 
ಕೆಕೆಆ‌ರ್ ಡಿಬಿ ಇರುವಾಗ ಅದರ ಅಡಿ ಸಂಘ ರಚನೆ ಹಾಗೂ ಸಂಘಕ್ಕೆ ನೀಡಿರುವ ಅನುದಾನ ದುರ್ಬಳಕೆ ಕುರಿತಂತೆ ಬಿಜೆಪಿ ಸರ್ಕಾರದ ವಿರುದ್ದ ಕಾಂಗ್ರೆಸ್ ಶಾಸಕರು ಆಕ್ರೋಶ ವ್ಯಕ್ತಪ ಡಿಸಿದ್ದರು. ಜತೆಗೆ ಅಕ್ರಮದ ಕುರಿತು ತನಿಖೆ ನಡೆಸುವಂತೆಯೂ ಆಗ್ರಹಿಸಿದ್ದರು. 

ಮಿನಿ ಸಮರದಲ್ಲಿ ಹಿರಿಯ ನಾಯಕರ ಪ್ರತಿಷ್ಠೆ ಪಣಕ್ಕೆ

ಇದೀಗ ಕಾಂಗ್ರೆಸ್ ಸರ್ಕಾರ ಕೆಕೆಆರ್‌ಡಿಬಿ ಹಾಗೂ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಕ್ರಮದ ತನಿಖೆಗೆ ಮುಂದಾಗಿದೆ. ಅದಕ್ಕಾಗಿ ನಿವೃತ್ತ ಐಎ ಎಸ್ ಅಧಿಕಾರಿ ಸುಧೀ‌ರ್ ಕುಮಾರ್ ನೇತೃತ್ವದ ತನಿಖಾ ಸಮಿತಿ ರಚಿಸಲಾಗಿದೆ. 

ಏನು ಆರೋಪ?

* ಬಿ.ಎಸ್. ಯಡಿಯೂರಪ ಮುಖ್ಯಮಂತ್ರಿ ಆಗಿದ್ದಾಗ 2020 ರಿಂದ 2023 ಕೆಕೆಆರ್‌ಡಿಬಿಗೆ 300 ಕೋಟಿ ರು. ಅನುದಾನ ಬಿಡುಗಡೆ 
* ಈ ಅನುದಾನ ವೆಚ್ಚ ಮಾಡು ವಲ್ಲಿ ವ್ಯಾಪಕ ಅಕ್ರಮ ನಡೆದಿದೆ ಎಂದು ಆಗಲೇ ಆರೋಪ ಮಾಡಿದ್ದ ಕಾಂಗ್ರೆಸ್ ಶಾಸಕರು 
*ಈಗ ಈ ಬಗ್ಗೆ ತನಿಖೆ ನಡೆಸಲು ನಿವೃತ್ತ ಐಎಎಸ್ ಅಧಿಕಾರಿ ಸುಧೀರ್ ಕುಮಾ‌ರ್ ನೇತೃತ್ವದ ತನಿಖಾ ಸಮಿತಿ ರಚನೆ 
* ಕೋವಿಡ್ ಅವಧಿಯಲ್ಲಿ ಮೃತಪಟ್ಟ ಶಿಕ್ಷಕರ ಕುಟುಂಬಕ್ಕೆ ಪರಿಹಾರ ನೀಡಿಕೆ, ದೇಶಿ ಹಸುಗಳ ಸಾಕಣೆಗೆ ಪ್ರೋತ್ಸಾಹ ಧನ ವಿತರಣೆ, 1 ಕೋಟಿ ಸಸಿ ನೆಟ್ಟಿರುವ ಬಗ್ಗೆಯೂ ತನಿಖೆ 
* ಕೊರೋನಾ ಅವಧಿಯ ಆಕ್ರಮ ಗಳ ತನಿಖೆ ಬೆನ್ನಲ್ಲೇ ಬಿಜೆಪಿ ವಿರುದ್ಧ ಇನ್ನೊಂದು ತನಿಖಾಸ್ತ್ರ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್