ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕರ್ನಾಟಕದ ಮತ್ತೊಂದು ಐಎಎಸ್‌ ಜೋಡಿ

Published : Feb 26, 2019, 09:32 AM IST
ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕರ್ನಾಟಕದ ಮತ್ತೊಂದು ಐಎಎಸ್‌ ಜೋಡಿ

ಸಾರಾಂಶ

ಇತ್ತೀಚೆಗಷ್ಟೇ ದಾವಣಗೆರೆಯ ಐಎಎಸ್ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬೆನ್ನಲ್ಲೇ ಇದೀಗ ಮತ್ತೊಂದು ಕರ್ನಾಟಕದ ಐಎಎಸ್ ಜೋಡಿ ವಿವಾಹ ಬಂಧನಕ್ಕೆ ಒಳಪಟ್ಟಿದೆ. 

ಹುಬ್ಬಳ್ಳಿ :  ಬಹು ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ರಾಜ್ಯದ ಮತ್ತೊಂದು ಐಎಎಸ್‌ ಜೋಡಿ ಇದೀಗ ವಿವಾಹ ಬಂಧನಕ್ಕೊಳಗಾಗಿದೆ. ಬಾಗಲಕೋಟೆಯ ಕೃಷ್ಣಾ ಮೇಲ್ದಂಡೆ ಪುನರ್ವಸತಿ ಯೋಜನೆ ಆಯುಕ್ತ ಉಜ್ವಲ ಕುಮಾರ್‌ ಘೋಷ್‌ ಮತ್ತು ಉಡುಪಿ ಜಿಲ್ಲಾಧಿಕಾರಿ ಹೆಫ್ಸಿಬಾರಾಣಿ ಕೊರ್ಲಪಾಟಿ ಸೋಮವಾರ ಇಲ್ಲಿನ ಉಪನೋಂದಣಿ ಕಚೇರಿಯಲ್ಲಿ ಅತ್ಯಂತ ಸರಳವಾಗಿ ವಿವಾಹವಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.

ಮೊದಲು ವಿವಾಹ ನೋಂದಣಿ ಮಾಡಿಸಿದರು. ಬಳಿಕ ಪರಸ್ಪರ ಮಾಲೆ ಬದಲಾಯಿಸಿದರು. ಈ ಮದುವೆಗೆ ಸಾಕ್ಷಿಯಾಗಿದ್ದ ಬೆರಳೆಣಿಕೆಯಷ್ಟು ಬಂಧುಗಳು, ಆಪ್ತೇಷ್ಟರಿಗೆ ಸಿಹಿ ಹಂಚಿ ಆಶೀರ್ವಾದ ಪಡೆದರು. ಯಾವುದೇ ಆಡಂಬರ ಇರಲಿಲ್ಲ. ದುಬಾರಿ ಬಟ್ಟೆ, ಚಿನ್ನಾಭರಣವನ್ನೂ ಅವರು ಧರಿಸಿರಲಿಲ್ಲ. ಸರಳ, ಮಾದರಿ ಮದುವೆ ಇದಾಗಿತ್ತು.

ಜಾರ್ಖಂಡ್‌ ರಾಜ್ಯದವರಾದ ಉಜ್ವಲಕುಮಾರ್‌ ಘೋಷ್‌ 2008ರಲ್ಲಿ ಐಎಎಸ್‌ ಪಾಸ್‌ ಮಾಡಿ ಕರ್ನಾಟಕದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ ಸದ್ಯ ಬಾಗಲಕೋಟೆಯ ಕೃಷ್ಣಾ ಮೇಲ್ದಂಡೆ ಪುನರ್ವಸತಿ ಯೋಜನೆಯ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಆಂಧ್ರಪ್ರದೇಶದ ಹೆಫ್ಸಿಬಾರಾಣಿ ಕೊರ್ಲಪಾಟಿ 2012ರ ಐಎಎಸ್‌ ಬ್ಯಾಚ್‌. ಕರ್ನಾಟಕ ಸರ್ಕಾರದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ ಸದ್ಯ ಉಡುಪಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಹಿರಿಯ ಐಎಎಸ್‌ ಅಧಿಕಾರಿಗಳಾದ ಆರ್‌.ವಿಶಾಲ್‌, ಪಿ.ಸಿ.ಜಾಫರ್‌, ಸುನಿಲ್‌ ಪನವಾರ್‌, ಡಿ.ಮಹೇಶ್‌ಕುಮಾರ್‌, ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್‌, ಬಿಆರ್‌ಟಿಎಸ್‌ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್‌, ಪತ್ರಕರ್ತ ಹೃಷಿಕೇಶ ಬಹಾದ್ದೂರ ದೇಸಾಯಿ ಮತ್ತಿತರರು ನೂತನ ದಂಪತಿಗೆ ಶುಭ ಕೋರಿದರು.

ಇತ್ತೀಚೆಗಷ್ಟೆಪ್ರೇಮಿಗಳ ದಿನದಂದು ವಿವಾಹವಾಗುವ ಮೂಲಕ ಸುದ್ದಿ ಮಾಡಿದ್ದ ದಾವಣಗೆರೆ ಐಎಎಸ್‌ ಜೋಡಿಯ ಬಳಿಕ ಈ ಐಎಎಸ್‌ ಜೋಡಿ ಸರಳ ವಿವಾಹವಾಗುವ ಮೂಲಕ ಗಮನ ಸೆಳೆದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Railway Drug Mafia: ರೈಲುಗಳಲ್ಲಿ ಡ್ರಗ್ಸ್ ಮಾಫಿಯಾ ಜಾಲ.. ಹೆಚ್ಚಾಗುತ್ತಲೇ ಇದೆ ಗಾಂಜಾ ಸಾಗಣೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ