ಮಂಗಳೂರು ಗಲಭೆ: ಕುಮ್ಮಕ್ಕು ನೀಡಿದವರಿಗೆ ಸಿಕ್ತು ನೋಟಿಸ್‌!

Published : Dec 30, 2019, 08:48 AM IST
ಮಂಗಳೂರು ಗಲಭೆ: ಕುಮ್ಮಕ್ಕು ನೀಡಿದವರಿಗೆ ಸಿಕ್ತು ನೋಟಿಸ್‌!

ಸಾರಾಂಶ

ಪೌರತ್ವ ಕಾರ್ಯ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ | ಮಂಗಳೂರು ಗಲಭೆ: ಪ್ರಚೋದನಾಕಾರಿ ಸಂದೇಶಕ್ಕೆ ನೋಟಿಸ್‌| 

ಮಂಗಳೂರು[ಡಿ.30]: ಸಾಮಾಜಿಕ ಜಾಲತಾಣದ ಮೂಲಕ ಪ್ರಚೋದನಕಾರಿ ಸಂದೇಶ ಕಳುಹಿಸಿ ಕೋಮು ಸಾಮರಸ್ಯಕ್ಕೆ ಧಕ್ಕೆ ತಂದ ಆರೋಪದಡಿ ಮಂಗಳೂರು ಪೊಲೀಸರು ಹಲವರ ವಿರುದ್ಧ ಪ್ರಕರಣ ದಾಖಲಿಸಿದ್ದು, ತನಿಖೆಗಾಗಿ ನೋಟಿಸ್‌ ಕಳುಹಿಸಿದ್ದಾರೆ.

ಇತ್ತೀಚೆಗೆ ಪೌರತ್ವ ಕಾರ್ಯ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ ವೇಳೆ ನಡೆದ ಗಲಭೆ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಸಂದೇಶಗಳು ಹರಿದಾಡುತ್ತಿದ್ದವು. ಇದನ್ನು ಗಂಭೀರವಾಗಿ ಪರಿಗಣಿಸಿದ ಮಂಗಳೂರು ಪೊಲೀಸ್‌ ಕಮಿಷನರ್‌ ಡಾ.ಪಿ.ಎಸ್‌.ಹರ್ಷ, ಸೈಬರ್‌ ಪೊಲೀಸರ ಮೂಲಕ ತನಿಖೆಗೆ ಆದೇಶಿಸಿದ್ದರು.

ತನಿಖೆ ವೇಳೆ ಹಲವು ಆರೋಪಿಗಳ ಸುಳಿವು ಲಭ್ಯವಾಗಿದ್ದು, ಅವರಿಗೆ ತನಿಖೆಗೆ ಹಾಜರಾಗುವಂತೆ ನೋಟಿಸ್‌ ಕಳುಹಿಸಲಾಗಿದೆ. ಸಾಮಾಜಿಕ ಜಾಲತಾಣ ಮೂಲಕ ಯಾರು ಪ್ರಚೋದನಕಾರಿ ಸಂದೇಶಗಳನ್ನು ಅಥವಾ ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು ಎಂದು ಮಂಗಳೂರು ಪೊಲೀಸ್‌ ಕಮಿಷನರ್‌ ಡಾ.ಪಿ.ಎಸ್‌.ಹರ್ಷ ಎಚ್ಚರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡೆಲಿವರಿ ಬಾಯ್ಸ್‌ಗೆ ಲಿಫ್ಟ್ ಬಳಸಬೇಡಿ ಎಂದ ಮೇಘನಾ ಫುಡ್ಸ್; ಪೋಸ್ಟರ್ ವೈರಲ್‌ ಆಗ್ತಿದ್ದಂತೆ ಕ್ಷಮೆಯಾಚನೆ
ದರ್ಶನ್ ಗ್ಯಾಂಗ್‌ನಿಂದ ಕೊಲೆಗೀಡಾದ ರೇಣುಕಾಸ್ವಾಮಿಗೆ ಸತ್ತಮೇಲೂ ನೆಮ್ಮದಿಯಿಲ್ಲ! ಸಮಾಧಿ ಧ್ವಂಸಗೈದ ಡೆವಿಲ್ ಗ್ಯಾಂಗ್‌!