ಮದರಸಾ ಶಿಕ್ಷಣ ವಿವಾದ, ಸದನದಲ್ಲಿ ಕೋಲಾಹಲ, ಆಕ್ರೋಶ.. ಯತ್ನಾಳ್ ಹೇಳಿದ್ದೇನು?

Published : Mar 21, 2025, 12:00 PM ISTUpdated : Mar 21, 2025, 12:01 PM IST
ಮದರಸಾ ಶಿಕ್ಷಣ ವಿವಾದ, ಸದನದಲ್ಲಿ ಕೋಲಾಹಲ, ಆಕ್ರೋಶ.. ಯತ್ನಾಳ್  ಹೇಳಿದ್ದೇನು?

ಸಾರಾಂಶ

ವಿಧಾನಸಭೆಯಲ್ಲಿ ಮದರಸಾಗಳ ಕುರಿತು ಯತ್ನಾಳ್ ಹೇಳಿಕೆ ವಿವಾದಕ್ಕೆ ಕಾರಣವಾಯಿತು. ಕಾಂಗ್ರೆಸ್ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಯತ್ನಾಳ್ ದೇಶದ್ರೋಹಿ ಎಂದು ವಾಗ್ದಾಳಿ ನಡೆಸಿದರು.

 ವಿಧಾನಸಭೆ (ಮಾ.21): ಮದರಸಾಗಳಲ್ಲಿ ಭಾರತ ವಿರೋಧಿ ಪಾಠ ಹೇಳಿ ಕೊಡಲಾಗುತ್ತಿದೆ ಎಂಬ ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯು ಸದನದಲ್ಲಿ ಆಡಳಿತಾರೂಢ ಕಾಂಗ್ರೆಸ್‌, ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಗಿ ಕೋಲಾಹಲ ಸೃಷ್ಟಿಸಿತು.
ಯತ್ನಾಳ್‌ ಮಾತಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್‌ ಸದಸ್ಯ ರಿಜ್ವಾನ್‌ ಅರ್ಷದ್‌, ಹಿರಿಯ ಸದಸ್ಯರಾಗಿರುವ ಯತ್ನಾಳ್‌ಗೆ ಮಾನ-ಮರ್ಯಾದೆ ಇದೆಯೇ? ಅವರೊಬ್ಬ ದೇಶದ್ರೋಹಿ ಎಂದು ಕೆಂಡಾಮಂಡಲರಾದರು.

ಗುರುವಾರ ಬಜೆಟ್‌ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ ಮಾತನಾಡುತ್ತಿದ್ದ ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್‌ ಯತ್ನಾಳ್‌, ಬಜೆಟ್‌ನಲ್ಲಿ ಮುಸ್ಲಿಂ ಸಮುದಾಯಕ್ಕೆ ಅತಿ ಹೆಚ್ಚು ಆದ್ಯತೆ ನೀಡಲಾಗಿದೆ. 100 ಉರ್ದು ಶಾಲೆಗಳಿಗೆ ಮೂಲಸೌಕರ್ಯ ಒದಗಿಸಲಾಗಿದೆ. ಮದರಸಾಗಳಲ್ಲಿ ಧಾರ್ಮಿಕ ಶಿಕ್ಷಣ ಜೊತೆ ಔಪಚಾರಿಕ ಶಿಕ್ಷಣಕ್ಕೆ ಒತ್ತು ಕೊಡಲು ಅನುದಾನ ಕೊಡಲಾಗಿದೆ‌. ಆದರೆ, ಮದರಸಾಗಳಲ್ಲಿ ಭಾರತದ ವಿರುದ್ಧ ಪಾಠ ಕಲಿಸಲಾಗುತ್ತಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: Karnataka honeytrap row: ಬಾಯಲ್ಲಿ ಆರೋಪ ಬೇಡ, ರಾಜಣ್ಣವ್ರು ದೂರು ಕೊಡಲಿ, ಸಿಬಿಐ ತನಿಖೆಗೆ ಒತ್ತಾಯಿಸಲಿ: ಸಿಟಿ ರವಿ

ಇದರಿಂದ ಕುಪಿತಗೊಂಡ ರಿಜ್ವಾನ್‌ ಅರ್ಷದ್‌, ‘ಏನ್ರಿ ಮಾತನಾಡುತ್ತಿದ್ದೀರಿ. ಭಾರತದ ವಿರುದ್ಧ ಅಂದರೆ ಏನು? ಬಾಯಿಗೆ ಬಂದ ಹಾಗೆ ಮಾತನಾಡುತ್ತಿದ್ದೀರಾ? ಸುಮ್ಮನೆ ಇರ್ರೀ’ ಎಂದು ಕಿಡಿಕಾರಿದರು. ಇದೇ ವೇಳೆ ಕಾಂಗ್ರೆಸ್‌ ಸದಸ್ಯರು ರಿಜ್ವಾನ್‌ ಅರ್ಷದ್‌ ಬೆಂಬಲಕ್ಕೆ ನಿಂತರು. ಈ ನಡುವೆ, ಬಿಜೆಪಿ ಸದಸ್ಯರು ಯತ್ನಾಳ್‌ ಬೆಂಬಲಕ್ಕೆ ನಿಂತ ಕಾರಣ ಸದನದಲ್ಲಿ ಗದ್ದಲ, ಕೋಲಾಹಲ ಸೃಷ್ಟಿಯಾಯಿತು.

ಮಾತು ಮುಂದುವರಿಸಿದ ರಿಜ್ವಾನ್‌ ಅರ್ಷದ್‌, ಹಿರಿಯರು ಎಂದು ಮರ್ಯಾದೆ ಕೊಟ್ಟರೆ ನಿಮಗೆ ಮಾನ ಮರ್ಯಾದೆ ಇಲ್ವಾ? ಯಾವ ಮದಸರಾದಲ್ಲಿ ಭಾರತ ವಿರೋಧಿ ಚಟುವಟಿಕೆ ಕಲಿಸುತ್ತಾರೆ. ಸಮಾಜಕ್ಕೆ ಬೆಂಕಿ ಹಚ್ಚುತ್ತೀರಾ, ನೀವು ಭಾರತದ ವಿರೋಧಿಗಳು. ಯತ್ನಾಳ್ ದೇಶದ್ರೋಹಿ. ಅವರನ್ನು ಅಮಾನತುಗೊಳಿಸಬೇಕು. ಅಲ್ಲದೇ, ಸೂಕ್ತ ಕ್ರಮ ಕೈಗೊಳ್ಳುವುದರ ಜತೆಗೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ಅಲ್ಲದೇ, ಕಡತದಿಂದ ಆ ಪದಗಳನ್ನು ತೆಗೆದು ಹಾಕಬೇಕು ಎಂದು ಒತ್ತಾಯಿಸಿದರು.

ಇದನ್ನೂ  ಓದಿ:  ನಾಳೆ ಕರ್ನಾಟಕ ಬಂದ್, ಚಿತ್ರೋದ್ಯಮದಿಂದ ಬೆಂಬಲ, ಥಿಯೇಟರ್‌ ಕ್ಲೋಸ್? ಸಿನಿಮಾ ಟಿಕೆಟ್ ಬುಕ್ ಮಾಡಬೇಕಾ? ಬೇಡ್ವಾ?

ಇದಕ್ಕೆ ಪ್ರತಿಕ್ರಿಯಿಸಿದ ಸಭಾಧ್ಯಕ್ಷ ಯು.ಟಿ.ಖಾದರ್‌, ಈ ಬಗ್ಗೆ ಪರಿಶೀಲಿಸಿ ಅಸಂವಿಧಾನಿಕ ಪದಗಳಿದ್ದರೆ ಕಡತದಿಂದ ತೆಗೆದುಹಾಕಲಾಗುವುದು ಎಂದರು.

ಮಾತು ಮುಂದುವರಿಸಿದ ಯತ್ನಾಳ್‌, ರಾಜ್ಯದಲ್ಲಿ ತಾಲಿಬಾನ್‌ ಬಜೆಟ್‌ ಮಂಡನೆ ಆಗಿದ್ದು, ರೈತರು, ದೀನದಲಿತರ ಪರವಾಗಿಲ್ಲ. ಈ ಬಜೆಟ್‌ ಪಾಕಿಸ್ತಾನ ಬಜೆಟ್‌, ಹಲಾಲ್‌ ಬಜೆಟ್‌ ಆಗಿದೆ ಎಂದು ಟೀಕಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!
ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!