ಅಪಾರ್ಟ್ಮೆಂಟ್ ನಿವಾಸಿಯ ಮೇಲೆ ಪೊಲೀಸರಿಬ್ಬರಿಂದ ಗೂಂಡಾಗಿರಿ? ಹಲ್ಲೆ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Ravi Janekal   | Kannada Prabha
Published : Sep 18, 2025, 01:10 AM IST
Bengaluru crie

ಸಾರಾಂಶ

ಬೆಂಗಳೂರಿನ ಬ್ಯಾಟರಾಯನಪುರದ ಅಪಾರ್ಟ್ಮೆಂಟ್‌ ಒಂದರಲ್ಲಿ, ಸಿವಿಲ್ ಡ್ರೆಸ್‌ನಲ್ಲಿದ್ದ ಇಬ್ಬರು ಪೊಲೀಸರು ಅಧ್ಯಕ್ಷ ಕೆ.ಸಿ.ರಾಜಪ್ಪ ಅವರ ಮೇಲೆ ದಬ್ಬಾಳಿಕೆ ನಡೆಸಿ ಹಲ್ಲೆಗೆ ಯತ್ನಿಸಿದ್ದಾರೆ. ಈ ಸಂಪೂರ್ಣ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಂಗಳೂರು(ಸೆ.18): ಅಪಾರ್ಟ್ಮೆಂಟ್ ನಿವಾಸಿಯ ಮೇಲೆ ಪೊಲೀಸರಿಬ್ಬರು ದಬ್ಬಾಳಿಕೆ ಮಾಡಿರುವ ಘಟನೆ ಬ್ಯಾಟರಾಯನ ಪುರದ ವಿ೨ ಸ್ನೇಹ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಅಪಾರ್ಟ್ಮೆಂಟ್ ಅಧ್ಯಕ್ಷ ಕೆ.ಸಿ.ರಾಜಪ್ಪ ಎಂಬುವರ ಮೇಲೆ ಹಲ್ಲೆ ಯತ್ನ ನಡೆಸಿದ್ದಾರೆ.

ಗಿರಿನಗರ ಪೊಲೀಸರೆಂದು ಕೆಸಿ ರಾಜಪ್ಪ ಮೇಲೆ ಹಲ್ಲೆ:

ಅಪರಿಚಿತ ಇಬ್ಬರು ವ್ಯಕ್ತಿಗಳು ಸಿವಿಲ್ ಡ್ರೆಸ್ ನಲ್ಲಿ ಬಂದು ಸಿಸಿಟಿವಿ ಪರೀಶಿಲನೆ ಮಾಡುತ್ತಿರುತ್ತಾರೆ. ಅಪಾರ್ಟ್ಮೆಂಟ್ ಅಧ್ಯಕ್ಷ ಕೆ.ಸಿ ರಾಜಪ್ಪ ಹೋಗಿ ಸಿವಿಲ್ ಡ್ರೆಸ್ ನಲ್ಲಿದ್ದ ಕಾರಣ ಇಬ್ಬರಿಗೆ ವಿಚಾರಿಸಿದ್ದಾರೆ. ಗಿರಿನಗರ ಪೊಲೀಸರೆಂದು ಏರುಧ್ವನಿಯಲ್ಲಿ ಮಾತನಾಡಿದ್ದಾರೆ. ಪ್ರತಿಯಾಗಿ ಅಪಾರ್ಟ್ಮೆಂಟ್ ನಿವಾಸಿ ರಾಜಪ್ಪ ಮಾತನಾಡಿದಾಗ ಹೆಚ್ಚಿಗೆ ಮಾತನಾಡಿದ್ರೆ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಕೇಸ್ ದಾಖಲು ಮಾಡಿ ಅರೆಸ್ಟ್ ಮಾಡಿಕೊಂಡು ಹೋಗೊದಾಗಿ ಬೆದರಿಸಿದ್ದಾರೆ. ಮಾತಿಗೆ ಮಾತು ಬೆಳೆಯುತ್ತಿದ್ದಂತೆ ಪೊಲೀಸರಿಬ್ಬರು ಅಪಾರ್ಟ್ಮೆಂಟ್ ನಿವಾಸಿ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.

ಸಿಸಿಟಿವಿಯಲ್ಲಿ ದಾಖಲಾಯ್ತು ಹಲ್ಲೆ ದೃಶ್ಯ:

ಪೇದೆಗಳಿಬ್ಬರು ಹಲ್ಲೆಗೆ ಯತ್ನಿಸಿರುವ ದೃಶ್ಯ ಅಪಾರ್ಟ್ಮೆಂಟ್ ನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅನುಮತಿ ಇಲ್ಲದೆ ಅಪಾರ್ಟ್ಮೆಂಟ್ ಗೆ ಬಂದು ಗಲಾಟೆ ಮಾಡಿದ್ದ ಇಬ್ಬರು ಪೊಲೀಸ್ ಕಾನ್ಸ್ಟೆಬಲ್ ಗಳ ವಿರುದ್ಧ ದೂರು ಕೊಡಲು ಅಪಾರ್ಟ್ಮೆಂಟ್ ನಿವಾಸಿಗಳು ಮುಂದಾಗಿದ್ದಾರೆ. ಅಪಾರ್ಟ್ಮೆಂಟ್ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಕಾರಣ ಇಬ್ಬರು ಪೊಲೀಸರ ಮೇಲೆ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲು ಮುಂದಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!