ಎಪಿಎಂಸಿ ಕಾಯ್ದೆ - ರೈತರ ದಾರಿ ತಪ್ಪಿಸಲು ಯತ್ನ: ಸಚಿವ ಸೋಮಶೇಖರ್

Kannadaprabha News   | Asianet News
Published : Sep 24, 2020, 10:42 AM IST
ಎಪಿಎಂಸಿ ಕಾಯ್ದೆ - ರೈತರ ದಾರಿ ತಪ್ಪಿಸಲು ಯತ್ನ: ಸಚಿವ ಸೋಮಶೇಖರ್

ಸಾರಾಂಶ

ರಾಜ್ಯದಲ್ಲಿ ಜಾರಿಗೆ ತಂದಿರುವ  ಎಪಿಎಂಸಿ ತಿದ್ದು ಪಡಿ ಕಾಯ್ದೆಯ ಬಗ್ಗೆ ರೈತರ ದಾರಿ ತಪ್ಪಿಸುವ ಯತ್ನವಾಗುತ್ತಿದೆ ಎಂದು ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.

 ಬೆಂಗಳೂರು (ಸೆ.24): ಕೃಷಿ ಉತ್ಪನ್ನ ಮಾರುಕಟ್ಟೆಸಮಿತಿ (ಎಪಿಎಂಸಿ) ಕಾಯ್ದೆ ಬಗ್ಗೆ ರೈತರ ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದ್ದಾರೆ.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಿದ್ದುಪಡಿಯಲ್ಲಿ ರೈತರಿಗೆ ಮಾರಕವಾಗುವ ಯಾವುದೇ ಅಂಶಗಳಿಲ್ಲ. ಬದಲಿಗೆ ರೈತರಿಗೆ ಅನುಕೂಲಕರವಾಗಿರುವ ಅಂಶಗಳಿವೆ. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿರುವ ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ರೈತರು ತಿದ್ದುಪಡಿ ಕಾಯ್ದೆಯಲ್ಲಿನ ಅಂಶಗಳ ಬಗ್ಗೆ ಅರಿತುಕೊಳ್ಳಬೇಕು. ಎಪಿಎಂಸಿ ಒಳಗೆ ವ್ಯಾಪಾರಕ್ಕೆ ಏನೆಲ್ಲ ಸೌಲಭ್ಯ ಅಗತ್ಯವಿದೆಯೋ ಅದನ್ನೆಲ್ಲಾ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ತಿಳಿಸಿದರು.

ರಾಜ್ಯ ವಿಧಾನಮಂಡಲ ಸದನದಲ್ಲಿ ಎಲ್ಲರ ಗಮನಸೆಳೆದ ಕಾಂಗ್ರೆಸ್ ಶಾಸಕನ ಮಾಸ್ಕ್..! ..

ಸುಮಾರು 50ಕ್ಕೂ ಹೆಚ್ಚು ಬಹು ರಾಷ್ಟ್ರೀಯ ಕಂಪನಿಗಳಿಗೆ ಕೃಷಿ ಉತ್ಪನ್ನ ಮಾರಾಟಕ್ಕೆ ಹಿಂದಿನ ಸರ್ಕಾರವೇ ಅನುಮತಿ ನೀಡಿತ್ತು. ಅದರಿಂದ ರೈತರಿಗೆ ಯಾವುದೇ ಸಮಸ್ಯೆಯಾಗಿಲ್ಲ. ಹೊಸ ಕಾಯ್ದೆಯಿಂದ ಪೈಪೋಟಿ ತೀವ್ರವಾದರೆ ಬೆಲೆ ಹೆಚ್ಚಳವಾಗಿ ರೈತರಿಗೆ ಅನುಕೂಲವಾಗಲಿದೆ. ಸ್ಥಳೀಯ ಎಪಿಎಂಸಿಗೆ ಅಧಿಕಾರವಿಲ್ಲದಿದ್ದರೂ ರಾಜ್ಯ ಮಟ್ಟದ ಎಪಿಎಂಸಿ ಮಂಡಳಿಗೆ ಅಧಿಕಾರವಿದೆ. ಬಹುರಾಷ್ಟ್ರೀಯ ಕಂಪನಿಗಳು ರೈತರಿಗೆ ಸರಿಯಾಗಿ ಹಣ ನೀಡದಿರುವ ಬಗ್ಗೆ ದೂರು ನೀಡಿದರೆ ಎಪಿಎಂಸಿ ರಾಜ್ಯ ಮಟ್ಟದ ಮಂಡಳಿಯು ಪರವಾನಗಿ ರದ್ದುಪಡಿಸಲಿದೆ. ನಾನು ಈವರೆಗೆ 17 ಎಪಿಎಂಸಿ ಮಾರುಕಟ್ಟೆಗಳಿಗೆ ಭೇಟಿ ನೀಡಿ ಚರ್ಚಿಸಿದ್ದೇನೆ. ಎಲ್ಲಿಯೂ ಈ ಕಾಯ್ದೆ ಸರಿಯಿಲ್ಲ ಎಂದು ಯಾರೂ ದೂರಿಲ್ಲ. ಕಾಯ್ದೆಯಲ್ಲಿ ರೈತರಿಗೆ ಅನುಕೂಲವಾಗುವ ಸಾಕಷ್ಟುಅಂಶಗಳಿವೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳ ಸೂಚನೆಯಂತೆ ಕಾರ್ಮಿಕ ಸಚಿವರು, ಕಾರ್ಮಿಕ ಇಲಾಖೆ ಆಯುಕ್ತರು ಪ್ರತಿಭಟನಾನಿರತರೊಂದಿಗೆ ಮಾತುಕತೆ ನಡೆಸಿದ್ದಾರೆ. ಸರ್ಕಾರಕ್ಕಾಗಲಿ, ನನಗಾಗಲಿ ಯಾವುದೇ ಹಟ ಪ್ರತಿಷ್ಠೆ ಇಲ್ಲ. ಸಹಕಾರ ಸಚಿವನಾಗಿ ಸಹಕಾರ ನೀಡುತ್ತೇನೆಯೇ ಹೊರತು ಅಸಹಕಾರ ಇಲ್ಲ. ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದರು.

ಸುಗ್ರಿವಾಜ್ಞೆ ಹಿಂಪಡೆಯಿರಿ, ಇಲ್ಲ ಉಗ್ರ ಹೋರಾಟ ಎದುರಿಸಿ: ಸರ್ಕಾರಕ್ಕೆ ರೈತರ ವಾರ್ನಿಂಗ್ ...

ಈ ವೇಳೆ ವಿಧಾನ ಪರಿಷತ್‌ ಸದಸ್ಯರಾದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌. ರವಿಕುಮಾರ್‌ ಉಪಸ್ಥಿತರಿದ್ದರು.

ಏನೇನು ಪ್ರಯೋಜನ? :  ರೈತರು ತಮ್ಮ ಉತ್ಪನ್ನಗಳನ್ನು ಎಲ್ಲಿಗೆ ಬೇಕಾದರೂ, ಯಾರಿಗಾದರೂ ಮಾರಲು ಅವಕಾಶ ಕಲ್ಪಿಸಲಾಗಿದೆ. ಬೆಳೆ ಹೊಲದಲ್ಲಿದ್ದಾಗಲೇ ರೈತ ಮಾರಲು ಅವಕಾಶವಿರುವುದರಿಂದ ಸಾಗಣೆ, ದಾಸ್ತಾನು ವೆಚ್ಚ ಕಳೆದು ಉತ್ತಮ ಬೆಲೆ ಸಿಗಲಿದೆ. ರಾಜ್ಯದಲ್ಲಿ 167 ಎಪಿಎಂಸಿ ಮಾರುಕಟ್ಟೆಪೈಕಿ 162 ಕಾರ್ಯ ನಿರ್ವಹಿಸುತ್ತಿದ್ದು, ರೈತರು ಎಲ್ಲಿ ಬೇಕಾದರೂ ಮಾರಾಟ ಮಾಡಬಹುದು. ಆಯಾ ದಿನದ ಅತಿ ಹೆಚ್ಚು ಬೆಲೆಯನ್ನು ಗೊತ್ತುಪಡಿಸಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಸಚಿವ ಸೋಮಶೇಖರ್‌ ಹೇಳಿದರು.

ಹಿಂದೆ ರೈತರು ಎಪಿಎಂಸಿ ವ್ಯಾಪ್ತಿಯ ಹೊರಗೆ ಕೃಷಿ ಉತ್ಪನ್ನ ಮಾರಾಟ ಮಾಡಲು ಅವಕಾಶವಿರಲಿಲ್ಲ. ಎಪಿಎಂಸಿ ಹೊರಗೆ ಮಾರಾಟ ಮಾಡಿದರೆ ನೋಟಿಸ್‌ ನೀಡುವುದು, ದಂಡ ಹಾಕುವುದು ಸೇರಿದಂತೆ ಹಲವು ನಿರ್ಬಂಧವಿತ್ತು. ಈಗ ಅದನ್ನೆಲ್ಲಾ ತೆಗೆದು ಹಾಕಲಾಗಿದೆ. ಯಾವುದೇ ಕಾರಣಕ್ಕೂ ಎಪಿಎಂಸಿಯನ್ನು ಮುಚ್ಚುವುದಿಲ್ಲ. ಎಪಿಎಂಸಿಯ ಯಾವುದೇ ಅಧಿಕಾರವನ್ನೂ ಮೊಟಕುಗೊಳಿಸುವುದಿಲ್ಲ ಎಂದು ವಿವರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!