ಯಾವುದೇ ಕಾರಣಕ್ಕೂ ಎಪಿಎಂಸಿ ಮುಚ್ಚಲ್ಲ: ಎಸ್‌ಟಿಎಸ್‌

Kannadaprabha News   | Asianet News
Published : Dec 26, 2020, 08:31 AM IST
ಯಾವುದೇ ಕಾರಣಕ್ಕೂ ಎಪಿಎಂಸಿ ಮುಚ್ಚಲ್ಲ: ಎಸ್‌ಟಿಎಸ್‌

ಸಾರಾಂಶ

ಯಾವುದೇ ಕಾರಣಕ್ಕೂ ಎಪಿಎಂಸಿ ಮುಚ್ಚಲ್ಲ: ಎಸ್‌ಟಿಎಸ್‌ | ಎಪಿಎಂಸಿ ಕಾಯ್ದೆ ಬಗ್ಗೆ ಅಪಪ್ರಚಾರ ನಡೀತಿದೆ

ಬೆಂಗಳೂರು(ಡಿ.26): ಎಪಿಎಂಸಿ ಕಾಯ್ದೆ ತಿದ್ದುಪಡಿ ಕುರಿತು ಅನಗತ್ಯವಾಗಿ ಅಪಪ್ರಚಾರ ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಎಪಿಎಂಸಿಯನ್ನು ಮುಚ್ಚುವುದಿಲ್ಲ. ಎಪಿಎಂಸಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿಗಾಗಿ 5 ಕೋಟಿ ರು. ಬಿಡುಗಡೆ ಮಾಡಲಾಗಿದೆ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದ್ದಾರೆ.

ಮಾಜಿ ಪ್ರಧಾನಿ ದಿವಂಗತ ಅಟಲ್‌ ಬಿಹಾರಿ ವಾಜಪೇಯಿ ಜನ್ಮದಿನದ ಪ್ರಯುಕ್ತ ಯಶವಂತಪುರದ ಎಪಿಎಂಸಿ ಆವರಣದಲ್ಲಿ ಶುಕ್ರವಾರ ನಡೆದ ಕಿಸಾನ್‌ ಸಮ್ಮಾನ್‌ ಯೋಜನೆ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಸೋಮಶೇಖರ್‌, ರಾಜ್ಯದಲ್ಲಿ 8500 ಎಕರೆ ಪ್ರದೇಶದಲ್ಲಿ ಎಪಿಎಂಸಿ ಇದ್ದು, ಕೋಟ್ಯಂತರ ರೈತರು ವ್ಯಾಪಾರ ಮಾಡುತ್ತಿದ್ದಾರೆ.

ಸಚಿವ ಸುಧಾಕರ್‌ ಮಧ್ಯ ಪ್ರವೇಶ: ಮೃತದೇಹ ಹಸ್ತಾಂತರ

ರೈತರಿಗೆ ಅನಾನೂಕೂಲವಾಗುವಂತಹ ತೀರ್ಮಾನವನ್ನು ಯಾವುದೇ ಕಾರಣಕ್ಕೂ ಕೈಗೊಳ್ಳುವುದಿಲ್ಲ. ಕಾಯ್ದೆಯ ವಾಸ್ತವಾಂಶದ ಕುರಿತು ರಾಜ್ಯದ ಮೂಲೆ ಮೂಲೆಗೆ ತೆರಳಿ ಅರಿವು ಮೂಡಿಸಲಾಗುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರವು ರೈತರ ಪರ ಕೈಗೊಂಡಿರುವ ಕ್ರಮಗಳ ಕುರಿತು ಜಾಗೃತಿ ಮೂಡಿಸಲಾಗುವುದು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇಂದು ಸಿಂಧನೂರು ಪಟ್ಟಣಕ್ಕೆ ಡಿಕೆಶಿ ಭೇಟಿ, ಬೃಹತ್ ಸಮಾರಂಭಕ್ಕೆ ಗಣ್ಯರ ದಂಡು, ಕಾರ್ಯಕ್ರಮಕ್ಕೆ ಬರುವ ಜನರಿಗೆ ಭರ್ಜರಿ ಭೋಜನ!
India's energy security strategy: ವಿದೇಶಿ ಹಿಡಿತ ತಪ್ಪಿಸುತ್ತಿದೆ ಭಾರತದ ಇಂಧನ ಭದ್ರತೆ