ಡಿನೋಟಿಫಿಕೇಷನ್‌ ಕೇಸಲ್ಲಿ ಎಚ್.ಡಿ.ಕುಮಾರಸ್ವಾಮಿ ಕೋರ್ಟ್‌ಗೆ ಹಾಜರು

Published : May 09, 2024, 06:38 AM IST
ಡಿನೋಟಿಫಿಕೇಷನ್‌ ಕೇಸಲ್ಲಿ ಎಚ್.ಡಿ.ಕುಮಾರಸ್ವಾಮಿ ಕೋರ್ಟ್‌ಗೆ ಹಾಜರು

ಸಾರಾಂಶ

ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಂದೆ ಹಾಜರಾದರು. 

ಬೆಂಗಳೂರು (ಮೇ.09): ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಂದೆ ಹಾಜರಾದರು. ಬುಧವಾರ ನ್ಯಾಯಾಲಯದ ಮುಂದೆ ಹಾಜರಾಗಿ ಪ್ರಕರಣ ಸಂಬಂಧ ವಿಚಾರಣೆ ಎದುರಿಸಿದರು. ಈ ವೇಳೆ ತಮ್ಮ ಹೇಳಿಕೆಯನ್ನು ದಾಖಲಿಸಿದರು. ಮುಂದಿನ ವಿಚಾರಣೆಯನ್ನು ನ್ಯಾಯಾಲಯವು ಮೇ 29ಕ್ಕೆ ಮುಂದೂಡಿದೆ. 

ನ್ಯಾಯಾಲಯವು ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಕುಮಾರಸ್ವಾಮಿಖುದ್ದು ಹಾಜರಾದರು.ಹಲಗೆವಡೇರಹಳ್ಳಿಡಿನೋಟಿಫಿಕೇಷನ್ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಅದನ್ನು ದೂರುದಾರ ಮಹಾದೇವಸ್ವಾಮಿ ಪ್ರಶ್ನಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ, ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್‌ ತಿರಸ್ಕರಿಸಿ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ.

ದೇವೇಗೌಡರ ಬಗ್ಗೆ ಲಘುವಾಗಿ ಮಾತಾಡಬೇಡಿ: ‘ತಂದೆ-ತಾಯಿ ಬಾಂಧವ್ಯ ನಿಮಗೆ ಗೊತ್ತಿಲ್ಲದೇ ಇರಬಹುದು. ಆದರೆ ನಮಗೆ ಆ ಬಾಂಧವ್ಯ ಇದೆ. ಅವರಿಗೆ ಧೈರ್ಯ ತುಂಬಲು ಅವರ ಮನೆಗೆ ಹೋಗುತ್ತೇನೆ. ದೇವೇಗೌಡರ ಬಗ್ಗೆ ಲಘುವಾಗಿ ಮಾತನಾಡಬೇಡಿ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಕೀತು ಮಾಡಿದ್ದಾರೆ. ನಮ್ಮ ತಂದೆ-ತಾಯಿ ನೋವಿನಲ್ಲಿದ್ದಾರೆ. ಅವರನ್ನು ನೋಡಲು ಹೋದರೆ ಮುಖ್ಯಮಂತ್ರಿಯಾದವರು, ಪ್ರಜ್ವಲ್ ಮತ್ತು ರೇವಣ್ಣ ಅವರನ್ನು ರಕ್ಷಣೆ ಮಾಡಲು ದೇವೇಗೌಡರು ವಕೀಲರ ಜತೆ ಸಮಾಲೋಚನೆ ಮಾಡುತ್ತಿದ್ದಾರೆ ಎಂದು ಸುಳ್ಳು ಹೇಳುತ್ತಾರೆ. 

ಕೇಂದ್ರ ಸರ್ಕಾರ ಪ್ರಜ್ವಲ್‌ ರೇವಣ್ಣಗೆ ರಕ್ಷಣೆ ನೀಡುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ

ಮನುಷ್ಯರೇನ್ರಿ ನೀವು? ಎಂದು ಟೀಕಾಪ್ರಹಾರ ನಡೆಸಿದರು. ಕುಮಾರಸ್ವಾಮಿ -ರೇವಣ್ಣ ಕುಟುಂಬದ ಸಂಘಟಿತ ಪಾಪ ಎಂದು ಹೇಳಿದ್ದಾರೆ. ನಮ್ಮ ಮನೆಗಳ ಮುಂದೆ ಇದ್ದ ಕ್ಯಾಮೆರಾಗಳ ವಿಡಿಯೋಗಳನ್ನು ತರಿಸಿ ನೋಡಿ. ಯಾವ ವಕೀಲರು ಬಂದಿದ್ದರು ಎನ್ನುವುದು ಗೊತ್ತಾಗುತ್ತದೆ. ತಂದೆ-ತಾಯಿ ಬಾಂಧವ್ಯ ನಿಮಗೆ ಗೊತ್ತಿಲ್ಲದೇ ಇಲ್ಲರಬಹುದು. ಆದರೆ ನಮಗೆ ಆ ಬಾಂಧವ್ಯ ಇದೆ. ಮಾತೆತ್ತಿದರೆ ದೇವೆಗೌಡರ ನಿವಾಸ ಎನ್ನುತ್ತೀರಿ. ಅದು ದೇವೆಗೌಡರ ನಿವಾಸ ಅಲ್ಲ. ಅದು ಅವರ ಮಗಳ ಮನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

16 ಬಾರಿ ಬಜೆಟ್ ಮಂಡಿಸಿದ ವಿಶ್ವದ ಕುಖ್ಯಾತ ಅರ್ಥಶಾಸ್ತ್ರಜ್ಞ ಸಿದ್ದರಾಮಯ್ಯ, ಸತ್ತ ಸರ್ಕಾರದ ಮುಖ್ಯಮಂತ್ರಿ: ಪ್ರತಾಪ್ ಸಿಂಹ ವಾಗ್ದಾಳಿ
ನಮಗೆ ಭಿಕ್ಷುಕರಂತೆ ಭಿಕ್ಷೆ ಹಾಕ್ತಾರೆ; ₹10,000 ಕೋಟಿ ಅನುದಾನ ಕೊಡಿ, ಇಲ್ಲ ಪ್ರತ್ಯೇಕ ರಾಜ್ಯ ಮಾಡಿ-ರಾಜು ಕಾಗೆ