ಬಗರ್ ಹುಕುಂ ಅರ್ಜಿ ಸಲ್ಲಿಕೆ ಇನ್ನು ಸುಲಭ: ಆ್ಯಪ್ ಬಿಡುಗಡೆ ಮಾಡಿದ ಸಚಿವ ಕೃಷ್ಣ ಬೈರೇಗೌಡ

Published : Dec 19, 2023, 10:28 AM IST
ಬಗರ್ ಹುಕುಂ ಅರ್ಜಿ ಸಲ್ಲಿಕೆ ಇನ್ನು ಸುಲಭ: ಆ್ಯಪ್ ಬಿಡುಗಡೆ ಮಾಡಿದ ಸಚಿವ ಕೃಷ್ಣ ಬೈರೇಗೌಡ

ಸಾರಾಂಶ

ರಾಜ್ಯ ಸರ್ಕಾರ ಭೂಮಿ ಅಕ್ರಮ ಸಾಗುವಳಿದಾರರ ಪಾಲಾಗುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಬಗರ್ ಹುಕುಂ ಆ್ಯಪ್‌ ಬಿಡುಗಡೆ ಮಾಡಿದೆ.  ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇನ್ಯಾವುದೇ ಚಟುವಟಿಕೆ ಬಗ್ಗೆ ಸ್ಯಾಟಲೈಟ್ ಇಮೇಜ್ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದಕ್ಕೆ ಸರ್ಕಾರ ಬಗರ್ ಹುಕುಂ ಆ್ಯಪ್ ರೂಪಿಸಿದೆ.

ಬೆಂಗಳೂರು (ಡಿ.19): ರಾಜ್ಯ ಸರ್ಕಾರ ಭೂಮಿ ಅಕ್ರಮ ಸಾಗುವಳಿದಾರರ ಪಾಲಾಗುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಬಗರ್ ಹುಕುಂ ಆ್ಯಪ್‌ ಬಿಡುಗಡೆ ಮಾಡಿದೆ.  ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇನ್ಯಾವುದೇ ಚಟುವಟಿಕೆ ಬಗ್ಗೆ ಸ್ಯಾಟಲೈಟ್ ಇಮೇಜ್ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದಕ್ಕೆ ಸರ್ಕಾರ ಬಗರ್ ಹುಕುಂ ಆ್ಯಪ್ ರೂಪಿಸಿದೆ.

ಆಪ್ ಬಿಡುಗಡೆ ಮಾಡಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ನಮೂನೆ 50, 53, 57ರ ಅಕ್ರಮ ಸಕ್ರಮ ಯೋಜನೆಯಡಿ ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ ಕೃಷಿಯೇತರ ಚಟುವಟಿಕೆಗಳಲ್ಲಿ ತೊಡಗಿರುವವರಿಗೂ ಸಹ ಸಾಗುವಳಿ ಚೀಟಿ ನೀಡುವುದು ಅಸಾಧ್ಯ. ಅಲ್ಲದೆ, ಸಾವಿರಾರು ಎಕರೆ ಸರ್ಕಾರಿ ಭೂಮಿ ಅಕ್ರಮ ಸಾಗುವಳಿದಾರರ ಪಾಲಾಗಿದ್ದು, ಪ್ರತಿಯೊಂದು ಭಾಗಕ್ಕೂ ಅಧಿಕಾರಿಗಳೇ ನೇರ ಹೋಗಿ ಕೃಷಿ ನಡೆಯುತ್ತಿದೆಯೇ? ಎಂದು ಪರಿಶೀಲಿಸುವುದು ಸಾಧ್ಯವಿಲ್ಲ. ಹೀಗಾಗಿ ಬಗರ್ ಹುಕುಂ ತಂತ್ರಾಶ ಬಳಸಿ ಅರ್ಜಿ ವಿಲೇ ಮಾಡಲಾಗುತ್ತದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಬಿಜೆಪಿ ಸರ್ಕಾರದ ಜಾರಿಗೆ ತಂದಿದ್ದ ಕಾನೂನುಗಳ ವಾಪಸ್? ಭೂ ಕಂದಾಯ ತಿದ್ದುಪಡಿ ವಿಧೇಯಕಕ್ಕೆ ಕೊಕ್!

ಹೀಗಾಗಿ ಬಗರ್ ಹುಕುಂ ತಂತ್ರಾಶದ ಮೂಲಕ ಅಕ್ರಮ ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇನ್ಯಾವುದೇ ಚಟುವಟಿಕೆ ಬಗ್ಗೆ ಸ್ಯಾಟಲೈಟ್ ಇಮೇಜ್ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದಕ್ಕೆ ಹಾಗೂ ಅರ್ಜಿಗಳ ಶೀಘ್ರ ಪ್ರಕ್ರಿಯೆಗೂ ಈ ಆ್ಯಪ್ ಸಹಕಾರಿಯಾಗಲಿದೆ.

100 ಮದರಸಾಗಳಲ್ಲಿ ಕನ್ನಡ, ಇಂಗ್ಲಿಷ್‌, ವಿಜ್ಞಾನ, ಗಣಿತ ಪ್ರಾಯೋಗಿಕ ಬೋಧನೆಗೆ ನಿರ್ಧಾರ : ಸಚಿವ ಕೃಷ್ಣಬೈರೇಗೌಡ

ಗ್ರಾಮ ಲೆಕ್ಕಿಗ ಸ್ಥಳಕ್ಕೆ ತೆರಳಿ ಈ ಆ್ಯಪ್ ಮೂಲಕ ಜಿಯೋ ಫೆನ್ಸ್ ಮಾಡಿ ಆ ಮಾಹಿತಿಯನ್ನು ಕಂದಾಯ ನಿರೀಕ್ಷಕ ಹಾಗೂ ಸರ್ವೇ ಇಲಾಖೆ ಲಾಗಿನ್‌ಗೆ ಕಳುಹಿಸುತ್ತಾರೆ. ಇದರ ಸಹಾಯದಿಂದ ತಹಶೀಲ್ದಾರ್‌ ಸ್ಯಾಟಲೈಟ್ ಇಮೇಜ್ ಪಡೆದು ನಿಜಕ್ಕೂ ಅಲ್ಲಿ ಕೃಷಿ ನಡೆಸುತ್ತಿದ್ದಾರ ಎಂಬ ಮಾಹಿತಿ ಕಲೆಹಾಕುತ್ತಾರೆ. ಅಲ್ಲದೆ ಆ ಇಮೇಜ್ ಜೊತೆಗೆ ಎಲ್ಲಾ ಮಾಹಿತಿಯನ್ನು ಬಗರ್ ಹುಕುಂ ಕಮಿಟಿ ಮುಂದೆ ಸಲ್ಲಿಸಿ ಓಟಿಪಿ ಮೂಲಕ ಕೆವೈಸಿ ಮಾಡುವ ಮೂಲಕ ಋಜುವಾತು ಮಾಡುತ್ತಾರೆ. ಈ ಮೂಲಕ ಅಕ್ರಮ ಸಕ್ರಮ ಆಗುವುದಲ್ಲದೇ ಅಧಿಕಾರಿಗಳ ಕೆಲಸವೂ ಸುಲಭವಾಗಲಿದ್ದು ಭೂ ದಾರರಿಗೂ ಸಹಾಯ ಆಗಲಿದೆ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ
ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!