ಗಡಿ ಶಾಲೆಗಳಿಗೆ ಕನ್ನಡ ಶಿಕ್ಷಕರನ್ನೇ ನೇಮಿಸಿ: ಕೇರಳ ಸರ್ಕಾರಕ್ಕೆ ಪತ್ರ

Published : Oct 13, 2019, 08:28 AM ISTUpdated : Oct 13, 2019, 08:56 AM IST
ಗಡಿ ಶಾಲೆಗಳಿಗೆ ಕನ್ನಡ ಶಿಕ್ಷಕರನ್ನೇ ನೇಮಿಸಿ: ಕೇರಳ ಸರ್ಕಾರಕ್ಕೆ ಪತ್ರ

ಸಾರಾಂಶ

ಗಡಿ ಶಾಲೆಗಳಿಗೆ ಕನ್ನಡ ಶಿಕ್ಷಕರನ್ನೇ ನೇಮಿಸಿ: ಕೇರಳ ಸರ್ಕಾರಕ್ಕೆ ಪತ್ರ| ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ರಿಂದ ಮನವಿ

ಬೆಂಗಳೂರು[ಅ.13]: ಕಾಸರಗೋಡು ಬಳಿಯ ಬೇಕಲ್‌, ಉದುಮ ಗಡಿನಾಡು ಕನ್ನಡ ಮಾಧ್ಯಮ ಶಾಲೆಗಳಲ್ಲಿ ಕನ್ನಡ ಭಾಷೆ ಬರುವ ಶಿಕ್ಷಕರನ್ನೇ ನೇಮಿಸುವಂತೆ ಆಗ್ರಹಿಸಿ ಕೇರಳ ಶಿಕ್ಷಣ ಸಚಿವರಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ಪತ್ರ ಬರೆದಿದ್ದಾರೆ.

ಈ ಕುರಿತು ಶನಿವಾರ ಕೇರಳ ಶಿಕ್ಷಣ ಸಚಿವ ಪ್ರೊ.ಸಿ. ರವೀಂದ್ರನಾಥ್‌ ಅವರಿಗೆ ಪತ್ರ ಬರೆದು ಒತ್ತಾಯಿಸಿರುವ ಅವರು, ಕೇರಳ ಗಡಿಭಾಗದ ಕಾಸರಗೋಡಿನ ಕನ್ನಡ ಪ್ರದೇಶಗಳಾದ ಬೇಕಲ್‌, ಉದುಮ ಮತ್ತಿತರ ಕಡೆಗಳ ಕನ್ನಡ ಮಾಧ್ಯಮ ಶಾಲೆಗಳಿಗೆ ಕನ್ನಡ ಭಾಷೆ ಗೊತ್ತಿಲ್ಲದ ಮಲೆಯಾಳಿ ಶಿಕ್ಷಕರನ್ನು ನೇಮಿಸಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕನ್ನಡ ಮಾಧ್ಯಮ ಶಾಲೆಗಳಿಗೆ ಕನ್ನಡ ಬರುವ ಶಿಕ್ಷಕರನ್ನೇ ನೇಮಿಸಬೇಕೆಂದು ಪತ್ರದಲ್ಲಿ ತಿಳಿಸಿದ್ದಾರೆ.

ಬೇಕಲ ಆಯ್ತು, ಈಗ ಉದುಮ ಕನ್ನಡ ಶಾಲೆಗೆ ಮಲಯಾಳಿ ಶಿಕ್ಷಕ!

ಕನ್ನಡ ಮಾಧ್ಯಮ ಶಾಲೆಗಳಿಗೆ ಮಲಯಾಳಿ ಶಿಕ್ಷಕರನ್ನು ನೇಮಿಸಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ಶಾಲೆಗಳನ್ನು ಬಹಿಷ್ಕರಿಸಿ ಹೋರಾಟಕ್ಕಿಳಿದಿರುವ ಕುರಿತು ಶನಿವಾರ ‘ಬೇಕಲ ಆಯ್ತು, ಈಗ ಉದುಮ ಕನ್ನಡ ಶಾಲೆಗೆ ಮಲಯಾಳಿ ಶಿಕ್ಷಕ’ ಎಂಬ ವರದಿ ಪ್ರಕಟಿಸಲಾಗಿತ್ತು. ವರದಿಗೆ ಸ್ಪಂದಿಸಿರುವ ಶಿಕ್ಷಣ ಸಚಿವರು ಕೇರಳ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಿ ಶಿಕ್ಷಕರನ್ನು ಬೋಧನೆ ಮಾಡುತ್ತಿರುವುದು ಮಕ್ಕಳಲ್ಲಿ ನಿರಾಸೆ ಮೂಡಿಸುವಂತಿದೆ. ಅಲ್ಲದೆ, ಕನ್ನಡ ಮಾಧ್ಯಮ ವಿದ್ಯಾರ್ಥಿಗಳು ಮಲಯಾಳಂನಲ್ಲಿ ಪಾಠವನ್ನು ಅರ್ಥ ಮಾಡಿಕೊಳ್ಳಲು ಸಾಕಷ್ಟುಕಷ್ಟಪಡುತ್ತಿದ್ದಾರೆ. ವಿವಿಧ ಕಾರಣಗಳಿಗೆ ಶಾಲೆಗಳಲ್ಲಿ ಮಕ್ಕಳು ಹತಾಶೆಗೊಳಗಾಗಿದ್ದಾರೆ. ಇದನ್ನು ಖಂಡಿಸಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಇಂತಹ ಸಮಯದಲ್ಲಿ ವಿದ್ಯಾರ್ಥಿಗಳ ನೋವಿಗೆ ಸ್ಪಂದಿಸಬೇಕಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿ ಮಲಯಾಳಂ ಶಿಕ್ಷಕರನ್ನು ವಾಪಸ್‌ ಕರೆಯಿಸಿಕೊಂಡು ಕನ್ನಡ ಬರುವ ಶಿಕ್ಷಕರನ್ನು ನೇಮಿಸಬೇಕು ಎಂದು ತಿಳಿಸಿದ್ದಾರೆ.

ಕಾಸರಗೋಡಿನಲ್ಲಿ ಕನ್ನಡ ಶಾಲೆಗಳಿಗೆ ಮತ್ತೆ ಮಲಯಾಳಂ ಶಿಕ್ಷಕರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
ದ್ವೇಷ ಭಾಷಣ ತಡೆಗೆ ಕಾನೂನು ಯತ್ನ: ಕಾಂಗ್ರೆಸ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ