ತುಮಕೂರಿನಲ್ಲಿ 5 ರೈಲ್ವೇ ಮೇಲ್ಸೇತುವೆಗೆ ಅನುಮೋದನೆ: ಕೇಂದ್ರ ಸಚಿವ ವಿ.ಸೋಮಣ್ಣ ಮೊದಲ ಕೊಡುಗೆ!

Published : Jul 17, 2024, 11:24 AM ISTUpdated : Jul 17, 2024, 11:28 AM IST
ತುಮಕೂರಿನಲ್ಲಿ 5 ರೈಲ್ವೇ ಮೇಲ್ಸೇತುವೆಗೆ ಅನುಮೋದನೆ: ಕೇಂದ್ರ ಸಚಿವ ವಿ.ಸೋಮಣ್ಣ ಮೊದಲ ಕೊಡುಗೆ!

ಸಾರಾಂಶ

ಜಿಲ್ಲೆಯಲ್ಲಿ  350 ಕೋಟಿ ವೆಚ್ಚದಲ್ಲಿ  5 ಮೇಲ್ಸೇತುವೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಿ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ. ಈ ಮೂಲಕ ವಿ. ಸೋಮಣ್ಣ ರೈಲ್ವೇ ಇಲಾಖೆಯ ರಾಜ್ಯ ಖಾತೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಜಿಲ್ಲೆಗೆ ಮೊದಲ ಕೊಡುಗೆ ನೀಡಿದ್ದಾರೆ‌.

ತುಮಕೂರು (ಜು.17): ಜಿಲ್ಲೆಯಲ್ಲಿ  350 ಕೋಟಿ ವೆಚ್ಚದಲ್ಲಿ  5 ಮೇಲ್ಸೇತುವೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಿ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ. ಈ ಮೂಲಕ ವಿ. ಸೋಮಣ್ಣ ರೈಲ್ವೇ ಇಲಾಖೆಯ ರಾಜ್ಯ ಖಾತೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಜಿಲ್ಲೆಗೆ ಮೊದಲ ಕೊಡುಗೆ ನೀಡಿದ್ದಾರೆ‌.

ತುಮಕೂರು ನಗರದ ಕ್ಯಾತ್ಸಂದ್ರ ಸ್ಟೇಶನ್-ಮೈದಾಳ ಗೇಟ್ ನಡುವೆ 57.3 ಕೋಟಿ ವೆಚ್ಚದಲ್ಲಿ ಮೇಲ್ಸೇತುವೆ ನಿರ್ಮಾಣವಾಗಲಿದೆ. ಅಂತೆಯೇ 89.03 ಕೋಟಿ ವೆಚ್ಚದಲ್ಲಿ  ಬಡ್ಡಿಹಳ್ಳಿ ಗೇಟ್ ಅಗ್ನಿಶಾಮಕ ದಳದ ಬಳಿ, 97.69 ಕೋಟಿ ವೆಚ್ಚದಲ್ಲಿ ಬಟವಾಡಿ ಗೇಟ್ ಸಮೀಪ, 55.99 ಕೋಟಿ ವೆಚ್ಚದಲ್ಲಿ ಅರೆಯೂರು ರಸ್ತೆ(ಮಲ್ಲಸಂದ್ರ ಗೇಟ್) ಬಳಿ ಹಾಗೂ 50.57 ಕೋಟಿ ವೆಚ್ಚದಲ್ಲಿ ತುಮಕೂರು ಮೈಸೂರು ರಸ್ತೆಯ ನಿಟ್ಟೂರು ರೈಲ್ವೆ ಸ್ಟೇಷನ್ ಹತ್ತಿರ ಮೇಲ್ಸೇತುವೆ ನಿರ್ಮಾಣವಾಗಲಿದೆ. 

ಜಿಲ್ಲೆಯ ಐದು ಕಡೆ ಮೇಲ್ಸೇತುವೆ ನಿರ್ಮಾಣದಿಂದಾಗಿ ರಸ್ತೆ ಹಾಗೂ ರೈಲು ಸಾರಿಗೆ ಸುಗಮವಾಗಲಿದೆ ಮತ್ತು  ಸುರಕ್ಷಿತವಾಗಲಿದೆ. ಈ ಕಾಮಗಾರಿಗಾಗಿ ಸಂಬಂಧಿಸಿದ ಪ್ರಕ್ರಿಯೆ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಂಡು ಅತಿ ಶೀಘ್ರದಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ವಿ.ಸೋಮಣ್ಣ ಭರವಸೆ ವ್ಯಕ್ತಪಡಿಸಿದ್ದಾರೆ‌. ಈ ಸೌಲಭ್ಯವನ್ನು  ರಾಜ್ಯದ ಜನತೆಗೆ ಒದಗಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ರೈಲ್ವೆ ಖಾತೆಯ ಸಚಿವ ಅಶ್ವೀನಿ ವೈಷ್ಣವ ಮತ್ತು ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದ್ದಾರೆ.

ಮಂಗಳೂರು- ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಘೋರ ದುರಂತ: ನದಿಯಲ್ಲಿ ತೇಲಿ ಹೋದ ಗ್ಯಾಸ್​​ ಟ್ಯಾಂಕರ್!

ತುಮಕೂರು ಲೋಕಸಭಾ ಕ್ಷೇತ್ರದಿಂದ ಗೆದ್ದು ಸಂಸದರಾಗಿ ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಗೆದ್ದ ಆರಂಭದಲ್ಲೇ ತುಮಕೂರು ಕ್ಷೇತ್ರವನ್ನು ವಾರಣಾಸಿ ಮಾದರಿಯಲ್ಲಿ ಅಭಿವೃದ್ಧಿ ಮಾಡುವತ್ತ ದಾಪುಗಾಲು ಇಟ್ಟಿದ್ದಾರೆ.  ಈಗಾಗಲೇ ಚೆನ್ನೈ ಟು ಶಿವಮೊಗ್ಗ ರೈಲು ಸಂಚಾರವನ್ನು ತುಮಕೂರು ಮೂಲಕ ಆರಂಭಿಸಿದ್ದಾರೆ‌. ಇದರ ಬೆನ್ನಲ್ಲೇ ಜನರ ಕೋರಿಕೆಯಂತೆ ಮೇಲ್ಸೇತುವೆಗಳ ನಿರ್ಮಾಣ ಕಾಮಗಾರಿಗೆ ಅನುಮೋದನೆ ತಂದಿದ್ದಾರೆ. ಜನ ಸೋಮಣ್ಣ ಅವರ ಕಾರ್ಯಕ್ಕೆ ಮೆಚ್ಚುಗೆ ನುಡಿಗಳನ್ನಾಡುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್