#MeToo ಕೇಸ್ : ಸರ್ಜಾಗೆ ನ್ಯಾಯಾಲಯ ತಿಳಿಸಿದ್ದೇನು..?

Published : Nov 10, 2018, 09:33 AM IST
#MeToo ಕೇಸ್ : ಸರ್ಜಾಗೆ ನ್ಯಾಯಾಲಯ ತಿಳಿಸಿದ್ದೇನು..?

ಸಾರಾಂಶ

ನಟಿ ಶ್ರುತಿ ಹರಿಹರನ್‌ ಅಪಮಾನಕರ ಹೇಳಿಕೆಗಳನ್ನು ನೀಡಿ ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿ ನಟ ಅರ್ಜುನ್‌ ಸರ್ಜಾ ಸಲ್ಲಿಸಿದ್ದ ಐದು ಕೋಟಿ ರು.ಗಳ ಮಾನನಷ್ಟ ಪ್ರಕರಣದ ವಿಚಾರಣೆಯನ್ನು ಮುಂದೂಡಲಾಗಿದೆ. 

ಬೆಂಗಳೂರು :  ತಮ್ಮ ವಿರುದ್ಧ ನಟಿ ಶ್ರುತಿ ಹರಿಹರನ್‌ ಅಪಮಾನಕರ ಹೇಳಿಕೆಗಳನ್ನು ನೀಡಿ ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿ ನಟ ಅರ್ಜುನ್‌ ಸರ್ಜಾ ಸಲ್ಲಿಸಿದ್ದ ಐದು ಕೋಟಿ ರು.ಗಳ ಮಾನನಷ್ಟ ಪ್ರಕರಣದ ವಿಚಾರಣೆಯನ್ನು ನಗರದ 22ನೇ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ನ.19ಕ್ಕೆ ಮುಂದೂಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಶ್ರುತಿ ಹರಿಹರನ್‌ ಅವರು ಸಲ್ಲಿಸಿರುವ ಆಕ್ಷೇಪಣೆಗೆ ಪ್ರತಿ ಆಕ್ಷೇಪಣೆ ಸಲ್ಲಿಸಲು ನ್ಯಾಯಾಲಯದಲ್ಲಿ ಅರ್ಜುನ್‌ ಸರ್ಜಾ ಪರ ವಕೀಲರು ಮತ್ತೆ ಕಾಲಾವಕಾಶ ಕೋರಿದರು. ಮನವಿಯನ್ನು ಪುರಸ್ಕರಿಸಿದ ನ್ಯಾಯಾಧೀಶರು ವಿಚಾರಣೆಯನ್ನು ನ.19ಕ್ಕೆ ಮುಂದೂಡಿ ಆದೇಶಿಸಿದರು.

ಅರ್ಜುನ್‌ ಸರ್ಜಾ ಅವರಿಗೆ ಮಾನಹಾನಿಯಾಗುವಂತಹ ಹೇಳಿಕೆಯನ್ನು ನಾನು ನೀಡಿಲ್ಲ. ನನ್ನ ಹೇಳಿಕೆಗೆ ಬದ್ಧವಾಗಿದ್ದೇನೆ. ಅರ್ಜುನ್‌ ಸರ್ಜಾ ಪರವಾಗಿ ನ್ಯಾಯಾಲಯದಲ್ಲಿ ಕಾನೂನು ಹೋರಾಟ ನಡೆಸಲು ಅವರ ಸಂಬಂಧಿ ಧ್ರುವ ಸರ್ಜಾ ಜನರಲ್‌ ಪವರ್‌ ಆಫ್‌ ಅಟಾರ್ನಿ (ಜಿಪಿಎ) ಪಡೆದಿದ್ದಾರೆ. ಆದರೆ, ಜಿಪಿಎಗೆ ಅರ್ಜುನ್‌ ಸರ್ಜಾ ಸಹಿ ಹಾಕಿಲ್ಲ. ಹೀಗಿರುವಾಗ ಜಿಪಿಎಗೆ ಕಾನೂನು ಸಮ್ಮತಿ ದೊರೆಯುವುದಿಲ್ಲ, ಆದ್ದರಿಂದ ಅರ್ಜಿ ವಜಾಗೊಳಿಸಬೇಕು ಎಂದು ಶ್ರುತಿ ಆಕ್ಷೇಪಣೆ ಸಲ್ಲಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಮಳವಳ್ಳಿಗೆ ಆಗಮನ ನಿರೀಕ್ಷೆ
ಧಾರವಾಡ: ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಭೇಟಿ ಮಾಡಿಸಲು ಹೈಕೋರ್ಟ್ ಸೂಚನೆ