Published : Feb 21, 2026, 06:34 AM ISTUpdated : Feb 21, 2026, 09:42 PM IST

Karnataka News Live: ನಮ್ಮಿಂದನೆ ಬೆಂಗಳೂರು ಉದ್ಧಾರ ಎಂದವರಿಗೆ ಖಡಕ್ ಉತ್ತರ, ನಾಲ್ವಡಿ ಮಹರಾಜರ ಕೊಡುಗೆ ಇಲ್ನೋಡಿ

ಸಾರಾಂಶ

 

ಚಿಕ್ಕಮಗಳೂರು: ಪರಿಚಯಸ್ಥ ಮುಸ್ಲಿಂ ಯುವತಿ ಜೊತೆ ಮಾತನಾಡುತ್ತಾ ನಿಂತಿದ್ದ ಎನ್ನುವ ಕಾರಣಕ್ಕೆ ವಿನಾಕಾರಣ ಜಗಳ ತೆಗೆದು, ದಲಿತ ಯುವಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಗುರುವಾರ ಚಿಕ್ಕಮಗಳೂರಲ್ಲಿ ನಡೆದಿದೆ. ಈ ಸಂಬಂಧ 3 ಆರೋಪಿಗಳನ್ನು ಬಂಧಿಸಲಾಗಿದೆ. ನಗರದ ನಿವಾಸಿಗಳಾದ ನಯಾಜ್, ತಬ್ರೀಜ್, ಹನೀಫ್ ಬಂಧಿತ ಆರೋಪಿಗಳು. ಹಲ್ಲೆ ನಡೆಸಿದ ಉಳಿದ 5 ಆರೋಪಿಗಳ ಪತ್ತೆಗೆ ಚಿಕ್ಕಮಗಳೂರು ನಗರ ಪೊಲೀಸ್‌ ಠಾಣೆ ಪೊಲೀಸರು ಶೋಧ ನಡೆಸಿದ್ದಾರೆ. ಯುವತಿಯೊಂದಿಗೆ ನೀನು ಏಕೆ ಇದೀಯಾ? ಎಂದು ಮುಸ್ಲಿಂ ಯುವಕರು ದಲಿತ ಯುವಕನ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ ಹಲ್ಲೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹಲ್ಲೆ ನಡೆಸಿದ 8 ಮಂದಿಯ ವಿರುದ್ಧ ದೊಂಬಿ, ಗಲಾಟೆ ಹಾಗೂ ಅಟ್ರಾಸಿಟಿ ಸೆಕ್ಷನ್‌ ಅಡಿ ಚಿಕ್ಕಮಗಳೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

09:42 PM (IST) Feb 21

ನಮ್ಮಿಂದನೆ ಬೆಂಗಳೂರು ಉದ್ಧಾರ ಎಂದವರಿಗೆ ಖಡಕ್ ಉತ್ತರ, ನಾಲ್ವಡಿ ಮಹರಾಜರ ಕೊಡುಗೆ ಇಲ್ನೋಡಿ

ನಮ್ಮಿಂದನೆ ಬೆಂಗಳೂರು ಉದ್ಧಾರ ಎಂದವರಿಗೆ ಖಡಕ್ ಉತ್ತರ, ಬಿಜೆಪಿ ರಾಜ್ಯಸಭಾ ಎಂಪಿ ಸುಧಾಂಶು ತ್ರಿವೇದಿ ನೀಡಿದ ಉತ್ತರ ಹಲವರಿಗೆ ಮನಮುಟ್ಟುವಂತೆ ಹೇಳಿದಂತಿದೆ. ಹೊರಗಿನಿಂದ ಬಂದು ಬೆಂಗಳೂರು ನಾವೆ ಬೆಳೆಸಿದ್ದು ಎಂದವರಿಗೆ ಈ ಉತ್ತರ.

 

Read Full Story

09:38 PM (IST) Feb 21

Naa Ninna Bidalaare ಇದೇನಿದು ಟ್ವಿಸ್ಟ್​? ಎಲ್ಲರೂ ಸತ್ತು ದೆವ್ವ ಆಗ್ತಾರಾ? ತಲೆಗೆ ಹುಳುಬಿಟ್ಟ ದುರ್ಗಾ!

'ನಾ ನಿನ್ನ ಬಿಡಲಾರೆ' ಧಾರಾವಾಹಿಯ ದುರ್ಗಾ ಪಾತ್ರಧಾರಿ ರಿಷಿಕಾ ಹಂಚಿಕೊಂಡ ವಿಡಿಯೋವೊಂದು ಸಂಚಲನ ಸೃಷ್ಟಿಸಿದೆ. ಇದರಲ್ಲಿ ದುರ್ಗಾ, ಶರತ್ ಸೇರಿದಂತೆ ಎಲ್ಲಾ ಪಾತ್ರಧಾರಿಗಳು ಬಿಳಿ ಹೊದಿಕೆ ಹೊದ್ದು ಮಲಗಿದ್ದು, ಎಲ್ಲರೂ ಸತ್ತು ಹೋಗುತ್ತಾರಾ ಎಂಬ ಕುತೂಹಲವನ್ನು ಹುಟ್ಟುಹಾಕಿದೆ.  

Read Full Story

09:16 PM (IST) Feb 21

ಕಾವ್ಯಾ ಜೊತೆ ತನ್ನದೇ ಮದ್ವೆ, ಮಗು ವಿಡಿಯೋ ನೋಡಿ ಗಿಲ್ಲಿ ನಟ ಫುಲ್​ ಶಾಕ್​ - ಏನ್​ ಹೇಳಿದ್ರು ನೋಡಿ!

ಬಿಗ್​ಬಾಸ್ ಖ್ಯಾತಿಯ ಗಿಲ್ಲಿ ನಟ ಮತ್ತು ಕಾವ್ಯಾ ಶೈವ ಅವರ ಎಐ ನಿರ್ಮಿತ ಮದುವೆ ವಿಡಿಯೋ ವೈರಲ್ ಆಗಿದೆ. ಈ ಬಗ್ಗೆ ಸಂದರ್ಶನವೊಂದರಲ್ಲಿ ಪ್ರತಿಕ್ರಿಯಿಸಿದ ಗಿಲ್ಲಿ ನಟ, ಅಚ್ಚರಿ ವ್ಯಕ್ತಪಡಿಸುವುದರ ಜೊತೆಗೆ ವಿಡಿಯೋ ಮಾಡಿದವರ ಶ್ರಮವನ್ನು ಶ್ಲಾಘಿಸಿದ್ದಾರೆ. 

Read Full Story

09:00 PM (IST) Feb 21

ಶಿವಾಜಿ ಮೆರವಣಿಗೆಗೆ ಎಸೆದರು ಸ್ಟೋನ್; ಬಾಗಲಕೋಟೆಗೆ ಪ್ರಮೋದ್ ಮುತಾಲಿಕ್ ಎಂಟ್ರಿ ಬ್ಯಾನ್; ಜಿಲ್ಲಾಧಿಕಾರಿ ಆದೇಶ!

ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ, ಜಿಲ್ಲಾಡಳಿತವು ಶ್ರೀರಾಮ ಸೇನೆ ಪ್ರಮೋದ್ ಮುತಾಲಿಕ್‌ಗೆ ಒಂದು ತಿಂಗಳ ಕಾಲ ಜಿಲ್ಲಾ ಪ್ರವೇಶವನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

Read Full Story

08:35 PM (IST) Feb 21

ಬೆಳ್ಳಂದೂರು ಮೆಟ್ರೋ ಇನ್ಮುಂದೆ ‘ಪ್ರೆಸ್ಟೀಜ್ ಬೆಳ್ಳಂದೂರು ಸ್ಟೇಷನ್’ - BMRCL ಜೊತೆಗೆ ₹90 ಕೋಟಿ ಒಪ್ಪಂದ!

ಬೆಂಗಳೂರು ಮೆಟ್ರೋ ರೈಲು ನಿಗಮವು (BMRCL) ಬೆಳ್ಳಂದೂರು ಮೆಟ್ರೋ ನಿಲ್ದಾಣದ ನಾಮಕರಣ ಹಕ್ಕುಗಳಿಗಾಗಿ ಪ್ರೆಸ್ಟೀಜ್ ಗ್ರೂಪ್‌ನೊಂದಿಗೆ ₹90 ಕೋಟಿ ಮೌಲ್ಯದ ಒಪ್ಪಂದ ಮಾಡಿಕೊಂಡಿದೆ. ಈ 30 ವರ್ಷಗಳ ಒಪ್ಪಂದದ ನಂತರ, ನಿಲ್ದಾಣವನ್ನು ‘ಪ್ರೆಸ್ಟೀಜ್ ಬೆಳ್ಳಂದೂರು ಮೆಟ್ರೋ ನಿಲ್ದಾಣ’ಎಂದು ಮರುನಾಮಕರಣ ಮಾಡಲಾಗುವುದು.

Read Full Story

07:38 PM (IST) Feb 21

ಶಾಲೆಗೆ ಬರುತ್ತಿದ್ದ ಅಪ್ರಾಪ್ತ ಹೆಣ್ಣುಮಕ್ಕಳಿಗೆ ಲೈ0ಗಿಕ ಕಿರುಕುಳ, 64ರ ಕಾಮುಕ ವೃದ್ಧ ಅರೆಸ್ಟ್

ಶಾಲೆಗೆ ಬರುತ್ತಿದ್ದ ಅಪ್ರಾಪ್ತ ಹೆಣ್ಣುಮಕ್ಕಳಿಗೆ ಲೈ0ಗಿಕ ಕಿರುಕುಳ, ಮಕ್ಕಳನ್ನು ಪೋಷಕರು ಶಾಲೆಗೆ ಬಿಟ್ಟು ಕೂಲಿ ಕೆಲಸಕ್ಕೆ ತೆರಳುತ್ತಿದ್ದರು. ಇದನ್ನೇ ಬಳಸಿಕೊಂಡ 64ರ ಹರೆಯದ ವೃದ್ಧಿ ಮಕ್ಕಳಿಗೆ ಚಾಕೋಲೇಟ್ ಆಸೆ ತೂರಿಸಿ ಲೈ0ಗಿಕ ಕಿರುಕುಳ ನೀಡಿದ್ದಾನೆ.

 

Read Full Story

06:28 PM (IST) Feb 21

ಶಕ್ತಿ ಯೋಜನೆ - ಬಿಎಂಟಿಸಿ ಕಂಡಕ್ಟರ್ ಅಮಾನತು, ಮತ್ತೊಮ್ಮೆ ಆಯ್ತು ಹೆಣ್ಮಕ್ಕಳೇ ಸ್ಟ್ರಾಂಗು ಅನ್ನೋದು ಸಾಬೀತು!

ಚನ್ನಪಟ್ಟಣದಿಂದ ಬೆಂಗಳೂರಿಗೆ ಬರುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರಿಗೆ ಅಶ್ಲೀಲ ಪದಗಳಿಂದ ನಿಂದಿಸಿ, ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ನಿರ್ವಾಹಕ ಕಾಂತರಾಜು ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

Read Full Story

05:56 PM (IST) Feb 21

ಕನಕ್ಲೂಷನ್‌ಗೆ ಬಂದಿದ್ದೇವೆ, ಕರ್ನಾಟಕ ಅಧಿಕಾರ ಗೊಂದಲ ಕುರಿತು ಮಲ್ಲಿಕಾರ್ಜುನ ಖರ್ಗೆ ಬಿಗ್ ಅಪ್‌ಡೇಟ್

ಕನಕ್ಲೂಷನ್‌ಗೆ ಬಂದಿದ್ದೇವೆ, ಕರ್ನಾಟಕ ಅಧಿಕಾರ ಗೊಂದಲ ಕುರಿತು ಮಲ್ಲಿಕಾರ್ಜುನ ಖರ್ಗೆ ಬಿಗ್ ಅಪ್‌ಡೇಟ್, ದೆಹಲಿಯಲ್ಲಿ ಸತೀಶ್ ಜಾರಕಿಹೊಳಿ ಹಾಗೂ ಖರ್ಗೆ ಭೇಟಿ ಬೆನ್ನಲ್ಲೇ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. 

Read Full Story

05:37 PM (IST) Feb 21

ಗಿಲ್ಲಿ ನಟ ನಟಿಸಿದ ಎಲ್ಲಾ ಸಿನಿಮಾ ಫ್ಲಾಫ್; ಮುಂದೇನು ಎಂದು ಕೈಹೊತ್ತು ಕುಳಿತ ಬಿಗ್‌ ಬಾಸ್ ಚಾಂಪಿಯನ್!

ಬಿಗ್ ಬಾಸ್‌ನಲ್ಲಿ ದಾಖಲೆಯ ಮತಗಳನ್ನು ಪಡೆದು ಗೆದ್ದ ಗಿಲ್ಲಿ ನಟ, ಆ ನಂತರ ಹಲವು ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗಿದ್ದರು. ಆದರೆ, ಅವರು ನಟಿಸಿದ ಸಿನಿಮಾಗಳು ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡಲಿಲ್ಲ. ಈ ಹಿನ್ನಡೆಯಿಂದಾಗಿ, ಗಿಲ್ಲಿ ನಟ ಈಗ ಮುಂದೇನು ಮಾಡಬೇಕೆಂಬ ಗಂಭೀರ ಚಿಂತನೆಯಲ್ಲಿದ್ದಾರೆ.
Read Full Story

05:20 PM (IST) Feb 21

ಡಿಕೆ ಪಟ್ಟದ ಸುತ್ತ ಇಂದ್ರಪ್ರಸ್ಥದಲ್ಲಿ ಸಾಹುಕಾರನ ವ್ಯೂಹ! ಸೈಲೆಂಟ್​ ಆಗಿಯೇ ಕೆಪಿಸಿಸಿ ಪಟ್ಟಕ್ಕೆ ಸ್ಕೆಚ್ ಹಾಕಿದ್ರಾ ಸತೀಶ್..?

ಮುಖ್ಯಮಂತ್ರಿ ಪಟ್ಟಕ್ಕಾಗಿ ಡಿ.ಕೆ.ಶಿವಕುಮಾರ್ ತಮ್ಮ ಪ್ರಯತ್ನವನ್ನು ಮುಂದುವರೆಸಿದ್ದು, ಅಸ್ಸಾಂನ ಕಾಮಾಕ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದೇ ವೇಳೆ, ಸತೀಶ್ ಜಾರಕಿಹೊಳಿಯವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪಟ್ಟು ಹಿಡಿದಿರುವುದು ಅಧಿಕಾರ ಸಮರಕ್ಕೆ ಹೊಸ ತಿರುವು ನೀಡಿದ್ದಾರೆ.

Read Full Story

03:32 PM (IST) Feb 21

ದೃಶ್ಯ ಸಿನಿಮಾ ಮೀರಿಸುವಂತೆ ಕಥೆ ಕಟ್ಟಿದ್ದ ಕಿರಾತಕ! ಹೆಂಡತಿಯನ್ನು ಬಡಿದು ಕೊಂ*ದ ಆಸಾಮಿ ಸಿಕ್ಕಿಬಿದ್ದಿದ್ದೇ ಇಂಟ್ರೆಸ್ಟಿಂಗ್ ಕಹಾನಿ!

ಪತ್ನಿ ಕಾಣೆಯಾಗಿದ್ದಾಳೆಂದು ಗಂಡನೇ ದೂರು ನೀಡಿದ್ದ. ಆದರೆ ಒಂದು ತಿಂಗಳ ನಂತರ, ಆ ನಾಪತ್ತೆ ಪ್ರಕರಣವು ಕೊಲೆ ರಹಸ್ಯವಾಗಿ ಬದಲಾಗಿದೆ. ದೃಶ್ಯ ಸಿನಿಮಾ ಮಾದರಿಯಲ್ಲಿ ಪತಿಯೇ ಪತ್ನಿಯನ್ನು ಕೊಂದು ಹೂತಿಟ್ಟಿದ್ದ ಆಘಾತಕಾರಿ ಸತ್ಯ ತನಿಖೆಯಲ್ಲಿ ಬಯಲಾಗಿದೆ.
Read Full Story

03:24 PM (IST) Feb 21

ಸ್ನೇಹಮಯಿ ಕೃಷ್ಣ ಸಿಸಿಬಿಯಿಂದ ರಿಲೀಸ್; ಸಿಎಸ್ ಶಾಲಿನಿ ರಜನೀಶ್‌ಗೆ ಕ್ಷಮೆ, ದಾರಿ ತಪ್ಪಿಸಿದ ವಿನೋದ್ ಹೆಸರು ರಿವೀಲ್!

ಮುಡಾ ಹಗರಣದ ಹೋರಾಟಗಾರ್ತಿ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿನೋದ್ ಎಂಬ ವ್ಯಕ್ತಿಯಿಂದ ದಾರಿ ತಪ್ಪಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ತಪ್ಪು ಮಾಹಿತಿ ನೀಡಿದ್ದಕ್ಕೆ ಅವರು ಕ್ಷಮೆಯಾಚಿಸಿದ್ದಾರೆ. 

Read Full Story

02:43 PM (IST) Feb 21

ಪ್ರೇಮಕಾವ್ಯ ಸೀರಿಯಲ್‌ 'ಸ್ನೇಹ' ಬೋಲ್ಡ್‌ ಲುಕ್‌; ಸಂಸಾರ ಹಾಳು ಮಾಡೋ ವಿಲನ್ ಅಂತಾ ಬೈದವ್ರೇ ಈ ಫೋಟೋ ನೋಡಿ ಫಿದಾ!

Prema kavya Actress Shweta Koglur 'ಪ್ರೇಮಕಾವ್ಯ' ಧಾರಾವಾಹಿಯಲ್ಲಿ ಖಳನಾಯಕಿ ಸ್ನೇಹಾ ಪಾತ್ರಧಾರಿ ಶ್ವೇತಾ ಕೊಗ್ಲೂರ್, ತಮ್ಮ ಬೋಲ್ಡ್ ಬೀಚ್ ಫೋಟೋಶೂಟ್‌ನಿಂದಾಗಿ ಸುದ್ದಿಯಲ್ಲಿದ್ದಾರೆ. ತಮ್ಮ ಇನ್ಸ್‌ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ಫೋಟೋಗಳಿಂದ ನೆಟ್ಟಿಗರನ್ನು ಅಚ್ಚರಿಗೊಳಿಸಿದ್ದಾರೆ.

Read Full Story

02:40 PM (IST) Feb 21

ಬೆಂಗಳೂರು ಟೆಕ್ಕಿ ರಂಜಿತಾ ಹೋಮ್ ಸ್ಟೇಗೆ ಬಂದು ಹೆಣವಾದ ಕೇಸಿಗೆ ಟ್ವಿಸ್ಟ್; ಮಾಲೀಕರನ ಮೇಲೆ ಎಫ್‌ಐಆರ್!

ಚಿಕ್ಕಮಗಳೂರಿನ ಹೋಂಸ್ಟೇಯೊಂದರಲ್ಲಿ ಬೆಂಗಳೂರಿನ ಐಟಿ ಉದ್ಯೋಗಿ ರಂಜಿತಾ ಅವರ ನಿಗೂಢ ಸಾವು ಪ್ರಕರಣಕ್ಕೆ ತಿರುವು ಸಿಕ್ಕಿದೆ. ಮರಣೋತ್ತರ ಪರೀಕ್ಷೆಯ ವರದಿಯ ಬೆನ್ನಲ್ಲಿಯೇ ಹೋಂಸ್ಟೇ ಮಾಲೀಕರ ವಿರುದ್ಧ 4 ತಿಂಗಳ ಬಳಿಕ ಎಫ್‌ಐಆರ್ ದಾಖಲಿಸಲಾಗಿದೆ.

Read Full Story

01:53 PM (IST) Feb 21

ಬಾಗಲಕೋಟೆಯಲ್ಲಿ ಎರಡನೇ ಶಾಂತಿ ಸಭೆಯೂ ವಿಫಲ - ಹಿಂದೂ ಮುಖಂಡರ ಗೈರು; ಮುಸ್ಲಿಂ ಮುಖಂಡರಷ್ಟೇ ಹಾಜರ್!

ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣದ ನಂತರ ಬಾಗಲಕೋಟೆಯಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಶಾಂತಿ ಸಭೆಯು ಹಿಂದೂ ಮುಖಂಡರ ಗೈರುಹಾಜರಿಯಿಂದ ವಿಫಲ.. ಸಭೆಗೆ ಹಾಜರಾದ ಮುಸ್ಲಿಂ ಮುಖಂಡರು, ನೈಜ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಸಭೆಯಿಂದ ನಿರ್ಗಮಿಸಿದರು.

Read Full Story

01:45 PM (IST) Feb 21

ಎಲ್ಲಾ ವಯಸ್ಸಿನವರಲ್ಲೂ ಹೆಚ್ಚುತ್ತಿದೆ ವಿಟಮಿನ್​ B 12 ಸಮಸ್ಯೆ - ಆಯುರ್ವೇದ ವೈದ್ಯೆಯಿಂದ ಸಿಂಪಲ್​ ಮನೆಮದ್ದು

ವಿಟಮಿನ್ ಬಿ12 ಕೊರತೆಯು ಆಯಾಸ, ನೆನಪಿನ ಶಕ್ತಿ ನಷ್ಟದಂತಹ ಹಲವು ಸಮಸ್ಯೆಗಳನ್ನು ಉಂಟುಮಾಡುತ್ತದೆ. ಮಾತ್ರೆಗಳ ಬದಲು, ಅಡ್ಡಪರಿಣಾಮಗಳಿಲ್ಲದ ಮನೆಮದ್ದನ್ನು ಬಳಸುವುದು ಉತ್ತಮ. ಕಲ್ಲಂಗಡಿ ಬೀಜ, ಜೀರಿಗೆ, ಪುದೀನಾ ಬಳಸಿ ಮಾಡುವ ಪಾನೀಯವು ಈ ಕೊರತೆಯನ್ನು ನೀಗಿಸಲು ಸಹಕಾರಿ.
Read Full Story

01:38 PM (IST) Feb 21

ಗಗನಕ್ಕೇರಿದ ಬೆಲೆ - KGFನಲ್ಲಿರೋ ಚಿನ್ನ ಮಿಶ್ರಿತ ಮಣ್ಣನ್ನು ಮೂಟೆಗಳಲ್ಲಿ ತುಂಬಿಕೊಂಡು ಹೋದ ಮಹಿಳೆಯರು

ಕೆಜಿಎಫ್ ಚಿನ್ನದ ಗಣಿ ಪ್ರದೇಶದಲ್ಲಿ, ಚಿನ್ನ ಮಿಶ್ರಿತ ಮಣ್ಣನ್ನು ಕಳವು ಮಾಡುತ್ತಿದ್ದ ಮಹಿಳೆಯರು ಸೇರಿದಂತೆ ಹಲವರನ್ನು ಉರಿಗಾಂ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಗಣಿ ಪ್ರದೇಶದಲ್ಲಿ ಭದ್ರತೆ ಹೆಚ್ಚಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.

Read Full Story

01:34 PM (IST) Feb 21

ರೋಹಿಣಿ ಸಿಂಧೂರಿಗೆ ಬಿಗ್ ಶಾಕ್ - ಮಾನನಷ್ಟ ಕೇಸ್ ರದ್ದು ಕೋರಿದ್ದ ಅರ್ಜಿ ವಜಾ ಮಾಡಿದ ಹೈಕೋರ್ಟ್!

ಐಪಿಎಸ್ ಅಧಿಕಾರಿ ಡಿ. ರೂಪಾ ಅವರು ತಮ್ಮ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಈ ನಿರ್ಧಾರದಿಂದಾಗಿ, ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಮುಂದುವರಿಯಲಿದೆ.
Read Full Story

01:25 PM (IST) Feb 21

Nagendran - 200 ಸೀಟು ಗೆಲ್ಲೋದು ಯಾರು ಅಂತ ಜನರೇ ಹೇಳ್ತಾರೆ - ಡಿಎಂಕೆ ವಿರುದ್ಧ ಗುಡುಗು

200 ಸೀಟುಗಳನ್ನು ಯಾರು ಗೆಲ್ಲುತ್ತಾರೆ ಎಂಬುದನ್ನು ಜನರೇ ನಿರ್ಧರಿಸುತ್ತಾರೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್ ಹೇಳಿದ್ದಾರೆ. ಇಪಿಎಸ್ ಮುಂದಿನ ಸಿಎಂ ಆಗಲಿದ್ದಾರೆ ಎಂದು ಭವಿಷ್ಯ ನುಡಿದ ಅವರು, ಡಿಎಂಕೆ ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿಲ್ಲ, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ..

Read Full Story

01:22 PM (IST) Feb 21

ಶಾಸಕ ಬೈರತಿ ಬಸವರಾಜ್‌ಗೆ ಡಬಲ್ ಶಾಕ್; ಒಂದ್ಕಡೆ ಜೈಲುಪಾಲು, ಮತ್ತೊಂದ್ಕಡೆ ಮನೆ ಊಟದ ಆಸೆಯೂ ಮಣ್ಣುಪಾಲು!

ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರ ಶಾಸಕ ಬೈರತಿ ಬಸವರಾಜು ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಫೆಬ್ರವರಿ 26ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಮನೆ ಊಟದ ಮನವಿ ತಿರಸ್ಕರಿಸಿದ ನ್ಯಾಯಾಲಯ, ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಿದೆ.

Read Full Story

01:15 PM (IST) Feb 21

ಲಕ್ಕುಂಡಿ ಹಳೇ ಹಂಡೆಯಲ್ಲಿ ಗೋಲ್ಡನ್ ಕವರ್ ಚಾಕ್ಲೆಟ್ ಹಾಕಿ 22 ಲಕ್ಷ ದೋಚಿದ್ದ ಮೌಲ್ವಿ ಅರೆಸ್ಟ್

ನಿಧಿ ಹುಡುಕಿಕೊಡುವುದಾಗಿ ನಂಬಿಸಿ ಜನರಿಗೆ ವಂಚಿಸುತ್ತಿದ್ದ ಹಜರತ್‌ ಮೌಲ್ವಿ ಎಂಬಾತನನ್ನು ಉತ್ತರಖಂಡದಲ್ಲಿ ಬಂಧಿಸಲಾಗಿದೆ. ಧಾರವಾಡದ ಮಹಿಳೆಯೊಬ್ಬರಿಗೆ ₹22 ಲಕ್ಷ ವಂಚಿಸಿದ್ದ ಈತ, ಚಾಕೊಲೇಟ್ ನಾಣ್ಯಗಳನ್ನು ಬಳಸಿ ನಿಧಿ ನಾಟಕವಾಡಿದ್ದು ತನಿಖೆಯಿಂದ ಬಯಲಾಗಿದೆ.
Read Full Story

01:00 PM (IST) Feb 21

Bigg Bossಗೆ ಎಂಟ್ರಿ ಆದಾಗ್ಲೇ ಎಲಿಮಿನೇಷನ್​ಗೂ ಸಹಿ! ಜನರ ವೋಟ್​ ಅನ್ನೋದೇ ಸುಳ್ಳು- ಕಹಿ ಅನುಭವ ತೆರೆದಿಟ್ಟ ನಟಿ ಚಿತ್ರಾಲ್​

ಬಿಗ್​ಬಾಸ್​ ಸೀಸನ್​ 10ರ ಸ್ಪರ್ಧಿ ಚಿತ್ರಾಲ್​ ರಂಗಸ್ವಾಮಿ ಅವರು ಷೋ ಬಗ್ಗೆ ಕೆಲವು ಆಘಾತಕಾರಿ ಸತ್ಯಗಳನ್ನು ಬಹಿರಂಗಪಡಿಸಿದ್ದಾರೆ. ಎಲಿಮಿನೇಷನ್‌ಗಳನ್ನು ಮೊದಲೇ ಒಪ್ಪಂದದ ಮೂಲಕ ನಿರ್ಧರಿಸಲಾಗುತ್ತದೆ ಮತ್ತು ಸಾರ್ವಜನಿಕ ವೋಟಿಂಗ್ ಪ್ರಕ್ರಿಯೆಯು ಕೇವಲ ನಾಟಕ ಎಂದು ಅವರು ಆರೋಪಿಸಿದ್ದಾರೆ. 

Read Full Story

12:42 PM (IST) Feb 21

Breaking News - ಬೆಂಗಳೂರಿ‌ನಲ್ಲಿ ಶಂಕಿತ ಉಗ್ರನ ಬಂಧನ!

ಗ್ರೆನೇಡ್ ಪ್ರಕರಣದಲ್ಲಿ ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರ ಅರ್ಷಾದ್ ಖಾನ್‌ನನ್ನು ಎನ್‌ಐಎ ಅಧಿಕಾರಿಗಳು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ನ್ಯಾಯಾಲಯದ ವಾರೆಂಟ್ ಮೇರೆಗೆ ಕಾರ್ಯಾಚರಣೆ ನಡೆಸಿದ ಎನ್‌ಐಎ, ಆರೋಪಿಯನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
Read Full Story

12:23 PM (IST) Feb 21

ಕಪ್ಪಾಗುತ್ತಿದೆ ಜಪಾವತಿ; ಸಾಯುತ್ತಿದೆ ಜಲಚರ - ಕಾಫಿ ತೋಟಗಳ ಮಾಲೀಕರ ಬೇಜವಾಬ್ದಾರಿಗೆ ಜನರ ಆಕ್ರೋಶ

ಹೇಮಾವತಿ ಉಪನದಿಯಾದ ಜಪಾವತಿಗೆ ಕಾಫಿ ಸಂಸ್ಕರಿಸಿದ ಪಲ್ಫರ್ ನೀರು ಸೇರುತ್ತಿರುವುದರಿಂದ ನೀರು ವಿಷಯುಕ್ತವಾಗಿದೆ. ಇದರಿಂದ ಜಲಚರಗಳು ಸಾವನ್ನಪ್ಪುತ್ತಿದ್ದು, ಸುತ್ತಮುತ್ತಲಿನ ಹಳ್ಳಿಗಳಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗಿದೆ. 

Read Full Story

12:16 PM (IST) Feb 21

ರೋಹಿಣಿ ಸಿಂಧೂರಿ Vs ರೂಪಾ ಮೌದ್ಗಿಲ್ - ಐಎಎಸ್-ಐಪಿಎಸ್ ಅಧಿಕಾರಿಗಳ ಹೈವೋಲ್ಟೇಜ್ ಸಮರದ ಅಂತಿಮ ತೀರ್ಪು ಇಂದು!

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ನಡುವಿನ ಕಾನೂನು ಸಮರವು ಮಹತ್ವದ ಘಟ್ಟ ತಲುಪಿದೆ. ತಮ್ಮ ವಿರುದ್ಧ ರೂಪಾ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯ ಅಂತಿಮ ತೀರ್ಪನ್ನು ಹೈಕೋರ್ಟ್ ಇಂದು ಪ್ರಕಟಿಸಲಿದೆ.
Read Full Story

12:13 PM (IST) Feb 21

ರಶ್ಮಿಕಾ-ವಿಜಯ್ ಪ್ರೇಮಕಥೆ ಹಿಂದಿದೆ ಒಂದು ದೊಡ್ಡ ರಹಸ್ಯ; ಏನೇ ಷಡ್ಯಂತ್ರ ಮಾಡಿದ್ರೂ ಈ ಜೋಡಿನ ಕಾಪಾಡ್ತಿರೋದು ಯಾವುದು?

ರಶ್ಮಿಕಾ ಮಂದಣ್ಣ ಬಗ್ಗೆ ವಿಜಯ್, "ರಶ್ಮಿಕಾ ಪ್ರತಿದಿನ ಟೀಕೆ ಮತ್ತು ಅವಹೇಳನಗಳನ್ನು ಎದುರಿಸುತ್ತಾಳೆ. ನಾನಾಗಿದ್ದರೆ ತಕ್ಷಣವೇ ಪ್ರತಿಕ್ರಿಯಿಸುತ್ತಿದ್ದೆ, ಆದರೆ ರಶ್ಮಿಕಾ ಎಲ್ಲವನ್ನೂ ಪ್ರೀತಿ ಮತ್ತು ತಾಳ್ಮೆಯಿಂದಲೇ ಎದುರಿಸುತ್ತಾಳೆ. ಅವಳು ನಿಜಕ್ಕೂ ಒಬ್ಬ ಅದ್ಭುತ ಮಹಿಳೆ" ಎಂದಿದ್ದಾರೆ ವಿಜಯ್ ದೇವರಕೊಂಡ.

Read Full Story

11:58 AM (IST) Feb 21

'ಅಮ್ಮ, ಅಪ್ಪ ಎಲ್ಲಿ..?' ಮಗ ರಾಯಾನ್‌ಗೆ ನೀಡುವ ಪ್ರತಿ ತುತ್ತಿನಲ್ಲೂ ಚಿರು ನೆನಪು ಜೀವಂತವಾಗಿಟ್ಟ ಮೇಘನಾ!

ನಟಿ ಮೇಘನಾ ರಾಜ್, ತಮ್ಮ ಮಗ ರಾಯಾನ್ ರಾಜ್ ಸರ್ಜಾ 'ಅಪ್ಪ ಎಲ್ಲಿ?' ಎಂದು ಕೇಳಿದ ಕ್ಷಣದ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ. ಆ ಪ್ರಶ್ನೆಗೆ ತಾನು ಉತ್ತರಿಸಲಿಲ್ಲ ಎಂದಿರುವ ಅವರು, ಮಗನ ಮನಸ್ಸಿನಲ್ಲಿ ತಂದೆ ಚಿರಂಜೀವಿ ಸರ್ಜಾ ಅವರ ಕಲ್ಪನೆ ಹೇಗೆ ಜೀವಂತವಾಗಿದೆ ಎಂಬುದನ್ನು ವಿವರಿಸಿದ್ದಾರೆ.
Read Full Story

11:54 AM (IST) Feb 21

Koppal - ದರ್ಗಾಕ್ಕೆ ರಸ್ತೆ ನಿರ್ಮಿಸಲು ಕೆರೆ ಒತ್ತುವರಿ, ರಾತ್ರೋರಾತ್ರಿ ನೀರು ಹೊರಕ್ಕೆ, ಅಧಿಕಾರಿಗಳ ಮೌನಕ್ಕೆ ಬಿಜೆಪಿ ಆಕ್ರೋಶ

ಕೊಪ್ಪಳದ ಐತಿಹಾಸಿಕ ಹುಲಿಕೆರೆಯನ್ನು ಒತ್ತುವರಿ ಮಾಡಿ ದರ್ಗಾಕ್ಕೆ ಅಕ್ರಮವಾಗಿ ರಸ್ತೆ ನಿರ್ಮಿಸುತ್ತಿರುವುದು ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿದೆ. ರಾತ್ರೋರಾತ್ರಿ ಕೆರೆ ಏರಿ ಒಡೆದು ನೀರು ಹೊರಬಿಟ್ಟಿದ್ದು, ಅಧಿಕಾರಿಗಳ ಮೌನದ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.
Read Full Story

11:45 AM (IST) Feb 21

ಪತಿ ಸಾವಿನ 6 ದಿನಕ್ಕೆ ಪತ್ನಿ ಆತ್ಮ*ಹತ್ಯೆ - ಮತ್ತೊಬ್ಬ ಪೇದೆಯ ಕರಾಳ ಮುಖ ಬಿಚ್ಚಿಟ್ಟ ಸಂದೇಶ

ಶಿವಮೊಗ್ಗದ ಭದ್ರಾವತಿಯಲ್ಲಿ ಕೆಎಸ್‌ಆರ್‌ಪಿ ಪೇದೆ ಆತ್ಮಹತ್ಯೆ ಮಾಡಿಕೊಂಡ ಆರು ದಿನಗಳ ಬಳಿಕ, ಅವರ ಪತ್ನಿ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮತ್ತೊಬ್ಬ ಪೊಲೀಸ್ ಪೇದೆಯ ಕಿರುಕುಳ ಮತ್ತು ಬ್ಲಾಕ್‌ಮೇಲ್‌ನಿಂದ ನೊಂದು ಈ ನಿರ್ಧಾರ ತೆಗೆದುಕೊಂಡಿದ್ದು, ದಂಪತಿಯ ಇಬ್ಬರು ಮಕ್ಕಳು ತಬ್ಬಲಿಯಾಗಿದ್ದಾರೆ.
Read Full Story

11:19 AM (IST) Feb 21

ಹಣದ ಆಸೆ ಬೇಡ, ಉಗ್ರನ ಮಾಹಿತಿ ಇದ್ದಲ್ಲಿ NIAಗೆ ನೀಡಿ - ಮುಸ್ಲಿಮರಿಗೆ ಸಂದೇಶ ನೀಡಿದ ಇಮಾಮ್‌

ಎನ್‌ಐಎಯಿಂದ 5 ಲಕ್ಷ ಬಹುಮಾನ ಘೋಷಿತ ಲಷ್ಕರ್-ಎ-ತೊಯ್ಬಾ ಉಗ್ರ ಜುನೈದ್ ಅಹ್ಮದ್ ಪತ್ತೆಗೆ, ಬೆಂಗಳೂರಿನ ಇಮಾಮ್ ಮಕ್ಸೂದ್ ಇಮ್ರಾನ್ ರಶಾದಿ ಸಮುದಾಯಕ್ಕೆ ಕರೆ ನೀಡಿದ್ದಾರೆ. ಹಣದಾಸೆಗಾಗಿ ಅಲ್ಲ, ದೇಶಸೇವೆಯಾಗಿ ಉಗ್ರನ ಮಾಹಿತಿ ನೀಡಬೇಕೆಂದು ಅವರು ಮನವಿ ಮಾಡಿದ್ದಾರೆ.

Read Full Story

11:18 AM (IST) Feb 21

Raichur - ಬಾಡೂಟದ ಮರುದಿನವೇ ಮದುಮಗ ನಿಗೂಢ ನಾಪತ್ತೆ! ಮೊಮ್ಮಗನಿಗಾಗಿ ಅಜ್ಜಿಯ ಕಣ್ಣೀರು

ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ಮದುವೆಗೆ  ತಿಂಗಳು ಇರುವಾಗಲೇ ಮುದ್ದುರಂಗಪ್ಪ ಎಂಬ ಯುವಕ ನಾಪತ್ತೆಯಾಗಿದ್ದಾನೆ. ಬಾಲ್ಯದಲ್ಲೇ ಪೋಷಕರನ್ನು ಕಳೆದುಕೊಂಡು ಅಜ್ಜಿಯ ಆಶ್ರಯದಲ್ಲಿ ಬೆಳೆದಿದ್ದ ಈತ, ಮದುವೆ ನಿಮಿತ್ತ ಬಾಡೂಟ ಹಾಕಿಸಿದ ಮರುದಿನವೇ ಕಣ್ಮರೆಯಾಗಿದ್ದು, ಕುಟುಂಬಸ್ಥರು ಆತಂಕದಲ್ಲಿದ್ದಾರೆ.

Read Full Story

11:18 AM (IST) Feb 21

ಕಲಬುರಗಿ - ಶಿವಾಜಿ ಮಹಾರಾಜ ಮೆರವಳಿಗೆ ವೇಳೆ ಹಿಂದೂ ಯುವಕರಿಂದ ಹಲ್ಲೆ ಆರೋಪ; ಮೂವರಿಗೆ ಗಂಭೀರ ಗಾಯ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರು ಗ್ರಾಮದಲ್ಲಿ ಛತ್ರಪತಿ ಶಿವಾಜಿ ಜಯಂತಿ ಮೆರವಣಿಗೆಯ ವೇಳೆ ಎರಡು ಕೋಮುಗಳ ನಡುವೆ ಮಾರಾಮಾರಿ ನಡೆದಿದೆ. ಕಲ್ಲು ತೂರಾಟದ ಆರೋಪದಿಂದ ಆರಂಭವಾದ ಗಲಾಟೆಯಲ್ಲಿ ಹಲವರು ಗಾಯಗೊಂಡಿದ್ದು, ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
Read Full Story

11:07 AM (IST) Feb 21

'ನನ್ನ ಕಣ್ಣೀರು ಕೆಲವರಿಗೆ ಹಣವಾಯ್ತು..' - ವೀವ್ಸ್‌, ಲೈಕ್ಸ್‌ ಕ್ರೂರತೆ ಬಗ್ಗೆ ಮೇಘನಾ ರಾಜ್ ಗಂಭೀರ ಮಾತು!

ನಟಿ ಮೇಘನಾ ರಾಜ್ ಇತ್ತೀಚಿನ ಸಂದರ್ಶನವೊಂದರಲ್ಲಿ, ಪ್ರೀತಿಪಾತ್ರರನ್ನು ಕಳೆದುಕೊಂಡ ದುಃಖವನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದ್ದರ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಕಣ್ಣೀರು ಹಣವಾಗಿ ಬದಲಾಯಿತು ಎಂದಿದ್ದಾರೆ.

Read Full Story

10:42 AM (IST) Feb 21

ತಂಗಿಗೆ ಕೇಳಿದೆಲ್ಲಾ ಕೊಡ್ತೀರಿ, ನನಗೆ ಏನೂ ಇಲ್ಲ - ಬೊಮ್ಮಾಯಿ ಆಪ್ತ ಕಾರ್ಯದರ್ಶಿ ಮಗನ ಸಾವಿಗೆ ಕಾರಣ ಏನು?

ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಆಪ್ತ ಕಾರ್ಯದರ್ಶಿ ಚಂದ್ರು ಅವರ ಪುತ್ರ ಹೇಮಂತ್ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ತಂಗಿಗೆ ಆಭರಣ ಕೊಡಿಸಿದ್ದಕ್ಕೆ ತಾಯಿಯೊಂದಿಗೆ ಜಗಳವಾಡಿದ್ದ ಹೇಮಂತ್, ತಿರುಪತಿಗೆ ತೆರಳುವ ಸಿದ್ಧತೆಯಲ್ಲಿದ್ದಾಗಲೇ ಈ ದುರಂತ ಘಟನೆ ನಡೆದಿದೆ.

Read Full Story

10:26 AM (IST) Feb 21

'ರಣರಂಗದಿಂದ ಓಡಿ ಹೋಗುವ ಹೇಡಿನಾ ನಲ್ಲ' - ಸಿಎಂ ಹಾಕಿದ ಸವಾಲು ವಿಪಕ್ಷಗಳಿಗಾ, ಸ್ವಪಕ್ಷ ರಾಜಕೀಯ ವಿರೋಧಿಗಳಿಗಾ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ 'ರಣರಂಗ ಬಿಟ್ಟು ಓಡುವ ಹೇಡಿ ನಾನಲ್ಲ' ಎಂದು ಗುಡುಗಿದ್ದಾರೆ. ತಮ್ಮ ರಾಜಕೀಯ ಜೀವನವು ಕಲ್ಲು-ಮುಳ್ಳಿನ ಹಾದಿಯಾಗಿದ್ದು, ತನ್ನ ಹಾಗೂ ಜನರ ವಿರುದ್ಧ ನಡೆಯುತ್ತಿರುವ ಷಡ್ಯಂತ್ರಗಳಿಗೆ ಬಗ್ಗುವುದಿಲ್ಲವೆಂದು ವಿರೋಧಿಗಳಿಗೆ ನೇರ ಸವಾಲು 

Read Full Story

10:05 AM (IST) Feb 21

Bengaluru - ಪಂಚಗಂಗಾ ಎಕ್ಸ್‌ಪ್ರೆಸ್‌ ಜೊತೆಯಲ್ಲಿ ಬೆಂಗಳೂರು-ಗೋವಾ ನಡುವೆ ವಂದೇ ಭಾರತ್‌ ಎಕ್ಸ್‌ಪ್ರೆಸ್‌?

ಬೆಂಗಳೂರು ಮತ್ತು ಗೋವಾ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಓಡಿಸಲು ನೈಋತ್ಯ ರೈಲ್ವೆಯು ರೈಲ್ವೆ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಿದೆ. ಈ ಹೊಸ ರೈಲು ಯಶವಂತಪುರದಿಂದ ಮಡಗಾಂವ್‌ಗೆ 12 ಗಂಟೆಗಳಲ್ಲಿ ತಲುಪುವ ನಿರೀಕ್ಷೆಯಿದ್ದರೂ, ಘಟ್ಟ ಪ್ರದೇಶಗಳಲ್ಲಿನ ನಿಧಾನಗತಿಯ ವೇಗವು ಒಂದು ಪ್ರಮುಖ ಸವಾಲಾಗಿದೆ.

Read Full Story

10:01 AM (IST) Feb 21

ವಾಡಿಕೆಗಿಂತ ಶೇ. 32 ಹೆಚ್ಚು ಮಳೆ, ಆದರೂ ಜಲಕ್ಷಾಮದ ಭೀತಿ; ಬರಿದಾಗುತ್ತಿರುವ ಗಂಗಾವಳಿ

ಈ ಬಾರಿ ಮುಂಗಾರಿನಲ್ಲಿ ವಾಡಿಕೆಗಿಂತ ಶೇ. 32ರಷ್ಟು ಅಧಿಕ ಮಳೆಯಾದರೂ, ಅಂಕೋಲಾ ತಾಲೂಕಿನಲ್ಲಿ ಬೇಸಿಗೆ ಆರಂಭದಲ್ಲೇ ಜಲಕ್ಷಾಮದ ಆತಂಕ ಎದುರಾಗಿದೆ. ಹೆಚ್ಚುತ್ತಿರುವ ಉಷ್ಣಾಂಶದಿಂದಾಗಿ ಜೀವನದಿ ಗಂಗಾವಳಿಯ ನೀರಿನ ಮಟ್ಟ ಗಣನೀಯವಾಗಿ ಕುಸಿದಿದ್ದು, ಕೃಷಿ ಹಾಗೂ ವನ್ಯಜೀವಿಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.
Read Full Story

09:55 AM (IST) Feb 21

ಮೋದಿ ವಿರೋಧಿಸುವ ಭರದಲ್ಲಿ ಕಾಂಗ್ರೆಸ್ ದೇಶ ವಿರೋಧಿ ನಡೆ - ಪ್ರಲ್ಹಾದ್ ಜೋಶಿ ಕಿಡಿ

ರಾಯಚೂರಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಪ್ರಧಾನಿ ಮೋದಿಯವರನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್ ದೇಶದ ಹಿತಾಸಕ್ತಿಯನ್ನೇ ಬಲಿಕೊಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಎಐ ತಂತ್ರಜ್ಞಾನದಿಂದ ಉದ್ಯೋಗ ನಷ್ಟ ಎಂಬುದು ಅಪಪ್ರಚಾರ ಎಂದ ಅವರು, ರಾಹುಲ್ ಗಾಂಧಿ 'ಅಪ್ರಬುದ್ಧ ರಾಜಕಾರಣಿ' ಎಂದು ಟೀಕಿಸಿದರು.

Read Full Story

09:45 AM (IST) Feb 21

Bengaluru - ಇಸ್ರೋ ಮಾಜಿ ನೌಕರನಿಂದ ಪತ್ನಿಯ ಹ*ತ್ಯೆ, ತಾಯಿ ಚಿತೆಗೆ ಬೆಂಕಿಯಿಡಲೂ ಅಮೆರಿಕದಿಂದ ಬರದ ಒಬ್ಬಳೇ ಮಗಳು!

ಬೆಂಗಳೂರಿನಲ್ಲಿ ಇಸ್ರೋ ನಿವೃತ್ತ ಉದ್ಯೋಗಿಯೊಬ್ಬರು ತಮ್ಮ ಪತ್ನಿಯ ಭವಿಷ್ಯದ ಚಿಂತೆಯಿಂದ ಆಕೆಯನ್ನು ಹತ್ಯೆ ಮಾಡಿದ್ದಾರೆ. ಈ ದುರಂತದ ಬಳಿಕ, ಅಮೆರಿಕದಲ್ಲಿರುವ ಅವರ ಏಕೈಕ ಪುತ್ರಿ ತಾಯಿಯ ಅಂತ್ಯಕ್ರಿಯೆಗೆ ಬರಲು ನಿರಾಕರಿಸಿದ್ದಾರೆ.

Read Full Story

09:30 AM (IST) Feb 21

Bengaluru - ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಪ್ತ ಕಾರ್ಯದರ್ಶಿ ಚಂದ್ರು ಮಗ ಆತ್ಮ*ಹತ್ಯೆ

ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ಅವರ ಆಪ್ತ ಕಾರ್ಯದರ್ಶಿ ಚಂದ್ರು ಅವರ ಪುತ್ರ ನೇಣು ಬಿಗದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾನೆ. 20 ವರ್ಷದ ಹೇಮಂತ್ ಆತ್ಮ*ಹತ್ಯೆಗೆ ಶರಣಾದ ಯುವಕ.

Read Full Story

More Trending News