LIVE NOW
Published : Feb 21, 2026, 06:34 AM ISTUpdated : Feb 21, 2026, 11:19 AM IST

Karnataka News Live: ಹಣದ ಆಸೆ ಬೇಡ, ಉಗ್ರನ ಮಾಹಿತಿ ಇದ್ದಲ್ಲಿ NIAಗೆ ನೀಡಿ - ಮುಸ್ಲಿಮರಿಗೆ ಸಂದೇಶ ನೀಡಿದ ಇಮಾಮ್‌

ಸಾರಾಂಶ

 

ಚಿಕ್ಕಮಗಳೂರು: ಪರಿಚಯಸ್ಥ ಮುಸ್ಲಿಂ ಯುವತಿ ಜೊತೆ ಮಾತನಾಡುತ್ತಾ ನಿಂತಿದ್ದ ಎನ್ನುವ ಕಾರಣಕ್ಕೆ ವಿನಾಕಾರಣ ಜಗಳ ತೆಗೆದು, ದಲಿತ ಯುವಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಗುರುವಾರ ಚಿಕ್ಕಮಗಳೂರಲ್ಲಿ ನಡೆದಿದೆ. ಈ ಸಂಬಂಧ 3 ಆರೋಪಿಗಳನ್ನು ಬಂಧಿಸಲಾಗಿದೆ. ನಗರದ ನಿವಾಸಿಗಳಾದ ನಯಾಜ್, ತಬ್ರೀಜ್, ಹನೀಫ್ ಬಂಧಿತ ಆರೋಪಿಗಳು. ಹಲ್ಲೆ ನಡೆಸಿದ ಉಳಿದ 5 ಆರೋಪಿಗಳ ಪತ್ತೆಗೆ ಚಿಕ್ಕಮಗಳೂರು ನಗರ ಪೊಲೀಸ್‌ ಠಾಣೆ ಪೊಲೀಸರು ಶೋಧ ನಡೆಸಿದ್ದಾರೆ. ಯುವತಿಯೊಂದಿಗೆ ನೀನು ಏಕೆ ಇದೀಯಾ? ಎಂದು ಮುಸ್ಲಿಂ ಯುವಕರು ದಲಿತ ಯುವಕನ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ ಹಲ್ಲೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹಲ್ಲೆ ನಡೆಸಿದ 8 ಮಂದಿಯ ವಿರುದ್ಧ ದೊಂಬಿ, ಗಲಾಟೆ ಹಾಗೂ ಅಟ್ರಾಸಿಟಿ ಸೆಕ್ಷನ್‌ ಅಡಿ ಚಿಕ್ಕಮಗಳೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

11:19 AM (IST) Feb 21

ಹಣದ ಆಸೆ ಬೇಡ, ಉಗ್ರನ ಮಾಹಿತಿ ಇದ್ದಲ್ಲಿ NIAಗೆ ನೀಡಿ - ಮುಸ್ಲಿಮರಿಗೆ ಸಂದೇಶ ನೀಡಿದ ಇಮಾಮ್‌

ಎನ್‌ಐಎಯಿಂದ 5 ಲಕ್ಷ ಬಹುಮಾನ ಘೋಷಿತ ಲಷ್ಕರ್-ಎ-ತೊಯ್ಬಾ ಉಗ್ರ ಜುನೈದ್ ಅಹ್ಮದ್ ಪತ್ತೆಗೆ, ಬೆಂಗಳೂರಿನ ಇಮಾಮ್ ಮಕ್ಸೂದ್ ಇಮ್ರಾನ್ ರಶಾದಿ ಸಮುದಾಯಕ್ಕೆ ಕರೆ ನೀಡಿದ್ದಾರೆ. ಹಣದಾಸೆಗಾಗಿ ಅಲ್ಲ, ದೇಶಸೇವೆಯಾಗಿ ಉಗ್ರನ ಮಾಹಿತಿ ನೀಡಬೇಕೆಂದು ಅವರು ಮನವಿ ಮಾಡಿದ್ದಾರೆ.

Read Full Story

11:18 AM (IST) Feb 21

Raichur - ಬಾಡೂಟದ ಮರುದಿನವೇ ಮದುಮಗ ನಿಗೂಢ ನಾಪತ್ತೆ! ಮೊಮ್ಮಗನಿಗಾಗಿ ಅಜ್ಜಿಯ ಕಣ್ಣೀರು

ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ಮದುವೆಗೆ  ತಿಂಗಳು ಇರುವಾಗಲೇ ಮುದ್ದುರಂಗಪ್ಪ ಎಂಬ ಯುವಕ ನಾಪತ್ತೆಯಾಗಿದ್ದಾನೆ. ಬಾಲ್ಯದಲ್ಲೇ ಪೋಷಕರನ್ನು ಕಳೆದುಕೊಂಡು ಅಜ್ಜಿಯ ಆಶ್ರಯದಲ್ಲಿ ಬೆಳೆದಿದ್ದ ಈತ, ಮದುವೆ ನಿಮಿತ್ತ ಬಾಡೂಟ ಹಾಕಿಸಿದ ಮರುದಿನವೇ ಕಣ್ಮರೆಯಾಗಿದ್ದು, ಕುಟುಂಬಸ್ಥರು ಆತಂಕದಲ್ಲಿದ್ದಾರೆ.

Read Full Story

11:18 AM (IST) Feb 21

ಕಲಬುರಗಿ - ಶಿವಾಜಿ ಮಹಾರಾಜ ಮೆರವಳಿಗೆ ವೇಳೆ ಹಿಂದೂ ಯುವಕರಿಂದ ಹಲ್ಲೆ ಆರೋಪ; ಮೂವರಿಗೆ ಗಂಭೀರ ಗಾಯ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರು ಗ್ರಾಮದಲ್ಲಿ ಛತ್ರಪತಿ ಶಿವಾಜಿ ಜಯಂತಿ ಮೆರವಣಿಗೆಯ ವೇಳೆ ಎರಡು ಕೋಮುಗಳ ನಡುವೆ ಮಾರಾಮಾರಿ ನಡೆದಿದೆ. ಕಲ್ಲು ತೂರಾಟದ ಆರೋಪದಿಂದ ಆರಂಭವಾದ ಗಲಾಟೆಯಲ್ಲಿ ಹಲವರು ಗಾಯಗೊಂಡಿದ್ದು, ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
Read Full Story

11:07 AM (IST) Feb 21

'ನನ್ನ ಕಣ್ಣೀರು ಕೆಲವರಿಗೆ ಹಣವಾಯ್ತು..' - ವೀವ್ಸ್‌, ಲೈಕ್ಸ್‌ ಕ್ರೂರತೆ ಬಗ್ಗೆ ಮೇಘನಾ ರಾಜ್ ಗಂಭೀರ ಮಾತು!

ನಟಿ ಮೇಘನಾ ರಾಜ್ ಇತ್ತೀಚಿನ ಸಂದರ್ಶನವೊಂದರಲ್ಲಿ, ಪ್ರೀತಿಪಾತ್ರರನ್ನು ಕಳೆದುಕೊಂಡ ದುಃಖವನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದ್ದರ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಕಣ್ಣೀರು ಹಣವಾಗಿ ಬದಲಾಯಿತು ಎಂದಿದ್ದಾರೆ.

Read Full Story

10:42 AM (IST) Feb 21

ತಂಗಿಗೆ ಕೇಳಿದೆಲ್ಲಾ ಕೊಡ್ತೀರಿ, ನನಗೆ ಏನೂ ಇಲ್ಲ - ಬೊಮ್ಮಾಯಿ ಆಪ್ತ ಕಾರ್ಯದರ್ಶಿ ಮಗನ ಸಾವಿಗೆ ಕಾರಣ ಏನು?

ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಆಪ್ತ ಕಾರ್ಯದರ್ಶಿ ಚಂದ್ರು ಅವರ ಪುತ್ರ ಹೇಮಂತ್ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ತಂಗಿಗೆ ಆಭರಣ ಕೊಡಿಸಿದ್ದಕ್ಕೆ ತಾಯಿಯೊಂದಿಗೆ ಜಗಳವಾಡಿದ್ದ ಹೇಮಂತ್, ತಿರುಪತಿಗೆ ತೆರಳುವ ಸಿದ್ಧತೆಯಲ್ಲಿದ್ದಾಗಲೇ ಈ ದುರಂತ ಘಟನೆ ನಡೆದಿದೆ.

Read Full Story

10:26 AM (IST) Feb 21

'ರಣರಂಗದಿಂದ ಓಡಿ ಹೋಗುವ ಹೇಡಿನಾ ನಲ್ಲ' - ಸಿಎಂ ಹಾಕಿದ ಸವಾಲು ವಿಪಕ್ಷಗಳಿಗಾ, ಸ್ವಪಕ್ಷ ರಾಜಕೀಯ ವಿರೋಧಿಗಳಿಗಾ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ 'ರಣರಂಗ ಬಿಟ್ಟು ಓಡುವ ಹೇಡಿ ನಾನಲ್ಲ' ಎಂದು ಗುಡುಗಿದ್ದಾರೆ. ತಮ್ಮ ರಾಜಕೀಯ ಜೀವನವು ಕಲ್ಲು-ಮುಳ್ಳಿನ ಹಾದಿಯಾಗಿದ್ದು, ತನ್ನ ಹಾಗೂ ಜನರ ವಿರುದ್ಧ ನಡೆಯುತ್ತಿರುವ ಷಡ್ಯಂತ್ರಗಳಿಗೆ ಬಗ್ಗುವುದಿಲ್ಲವೆಂದು ವಿರೋಧಿಗಳಿಗೆ ನೇರ ಸವಾಲು 

Read Full Story

10:05 AM (IST) Feb 21

Bengaluru - ಪಂಚಗಂಗಾ ಎಕ್ಸ್‌ಪ್ರೆಸ್‌ ಜೊತೆಯಲ್ಲಿ ಬೆಂಗಳೂರು-ಗೋವಾ ನಡುವೆ ವಂದೇ ಭಾರತ್‌ ಎಕ್ಸ್‌ಪ್ರೆಸ್‌?

ಬೆಂಗಳೂರು ಮತ್ತು ಗೋವಾ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಓಡಿಸಲು ನೈಋತ್ಯ ರೈಲ್ವೆಯು ರೈಲ್ವೆ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಿದೆ. ಈ ಹೊಸ ರೈಲು ಯಶವಂತಪುರದಿಂದ ಮಡಗಾಂವ್‌ಗೆ 12 ಗಂಟೆಗಳಲ್ಲಿ ತಲುಪುವ ನಿರೀಕ್ಷೆಯಿದ್ದರೂ, ಘಟ್ಟ ಪ್ರದೇಶಗಳಲ್ಲಿನ ನಿಧಾನಗತಿಯ ವೇಗವು ಒಂದು ಪ್ರಮುಖ ಸವಾಲಾಗಿದೆ.

Read Full Story

10:01 AM (IST) Feb 21

ವಾಡಿಕೆಗಿಂತ ಶೇ. 32 ಹೆಚ್ಚು ಮಳೆ, ಆದರೂ ಜಲಕ್ಷಾಮದ ಭೀತಿ; ಬರಿದಾಗುತ್ತಿರುವ ಗಂಗಾವಳಿ

ಈ ಬಾರಿ ಮುಂಗಾರಿನಲ್ಲಿ ವಾಡಿಕೆಗಿಂತ ಶೇ. 32ರಷ್ಟು ಅಧಿಕ ಮಳೆಯಾದರೂ, ಅಂಕೋಲಾ ತಾಲೂಕಿನಲ್ಲಿ ಬೇಸಿಗೆ ಆರಂಭದಲ್ಲೇ ಜಲಕ್ಷಾಮದ ಆತಂಕ ಎದುರಾಗಿದೆ. ಹೆಚ್ಚುತ್ತಿರುವ ಉಷ್ಣಾಂಶದಿಂದಾಗಿ ಜೀವನದಿ ಗಂಗಾವಳಿಯ ನೀರಿನ ಮಟ್ಟ ಗಣನೀಯವಾಗಿ ಕುಸಿದಿದ್ದು, ಕೃಷಿ ಹಾಗೂ ವನ್ಯಜೀವಿಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.
Read Full Story

09:55 AM (IST) Feb 21

ಮೋದಿ ವಿರೋಧಿಸುವ ಭರದಲ್ಲಿ ಕಾಂಗ್ರೆಸ್ ದೇಶ ವಿರೋಧಿ ನಡೆ - ಪ್ರಲ್ಹಾದ್ ಜೋಶಿ ಕಿಡಿ

ರಾಯಚೂರಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಪ್ರಧಾನಿ ಮೋದಿಯವರನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್ ದೇಶದ ಹಿತಾಸಕ್ತಿಯನ್ನೇ ಬಲಿಕೊಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಎಐ ತಂತ್ರಜ್ಞಾನದಿಂದ ಉದ್ಯೋಗ ನಷ್ಟ ಎಂಬುದು ಅಪಪ್ರಚಾರ ಎಂದ ಅವರು, ರಾಹುಲ್ ಗಾಂಧಿ 'ಅಪ್ರಬುದ್ಧ ರಾಜಕಾರಣಿ' ಎಂದು ಟೀಕಿಸಿದರು.

Read Full Story

09:45 AM (IST) Feb 21

Bengaluru - ಇಸ್ರೋ ಮಾಜಿ ನೌಕರನಿಂದ ಪತ್ನಿಯ ಹ*ತ್ಯೆ, ತಾಯಿ ಚಿತೆಗೆ ಬೆಂಕಿಯಿಡಲೂ ಅಮೆರಿಕದಿಂದ ಬರದ ಒಬ್ಬಳೇ ಮಗಳು!

ಬೆಂಗಳೂರಿನಲ್ಲಿ ಇಸ್ರೋ ನಿವೃತ್ತ ಉದ್ಯೋಗಿಯೊಬ್ಬರು ತಮ್ಮ ಪತ್ನಿಯ ಭವಿಷ್ಯದ ಚಿಂತೆಯಿಂದ ಆಕೆಯನ್ನು ಹತ್ಯೆ ಮಾಡಿದ್ದಾರೆ. ಈ ದುರಂತದ ಬಳಿಕ, ಅಮೆರಿಕದಲ್ಲಿರುವ ಅವರ ಏಕೈಕ ಪುತ್ರಿ ತಾಯಿಯ ಅಂತ್ಯಕ್ರಿಯೆಗೆ ಬರಲು ನಿರಾಕರಿಸಿದ್ದಾರೆ.

Read Full Story

09:30 AM (IST) Feb 21

Bengaluru - ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಪ್ತ ಕಾರ್ಯದರ್ಶಿ ಚಂದ್ರು ಮಗ ಆತ್ಮ*ಹತ್ಯೆ

ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ಅವರ ಆಪ್ತ ಕಾರ್ಯದರ್ಶಿ ಚಂದ್ರು ಅವರ ಪುತ್ರ ನೇಣು ಬಿಗದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾನೆ. 20 ವರ್ಷದ ಹೇಮಂತ್ ಆತ್ಮ*ಹತ್ಯೆಗೆ ಶರಣಾದ ಯುವಕ.

Read Full Story

09:15 AM (IST) Feb 21

ಗೋಲ್‌ಗುಂಬಜ್ ಎಕ್ಸಪ್ರೆಸ್ ರೈಲಿಗೆ ತಲೆಕೊಟ್ಟು ಪ್ರಾಣ ಕಳೆದುಕೊಂಡ ಮನ್‌ಮುಲ್‌ ಉಪವ್ಯವಸ್ಥಾಪಕ

ಮದ್ದೂರು ತಾಲೂಕಿನ ಗೆಜ್ಜಲಗೆರೆ ಮನ್‌ಮುಲ್‌ನ ಉಪ ವ್ಯವಸ್ಥಾಪಕ ಭರತರಾಜ್, ಮಂಡ್ಯದಲ್ಲಿ ರೈಲಿಗೆ ತಲೆ ಕೊಟ್ಟು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಆನ್‌ಲೈನ್‌ ಅಥವಾ ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದೇ ಈ ದುರಂತಕ್ಕೆ ಕಾರಣ ಎಂದು ಶಂಕಿಸಲಾಗಿದೆ.

Read Full Story

08:46 AM (IST) Feb 21

ಜಮಖಂಡಿ ಬಳಿ ಭೀಕರ ದುರಂತ - ಟ್ರ್ಯಾಕ್ಟರ್ ಪಲ್ಟಿಯಾಗಿ 2 ವರ್ಷದ ಮಗು ಸೇರಿದಂತೆ ನಾಲ್ವರ ಸಾವು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ಬಳಿ ಇಳಿಜಾರಿನಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ, ಎರಡು ವರ್ಷದ ಮಗು ಸೇರಿದಂತೆ ನಾಲ್ವರು ಮಹಾರಾಷ್ಟ್ರ ಮೂಲದ ಕಬ್ಬು ಕಟಾವು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

Read Full Story

08:34 AM (IST) Feb 21

ಸರ್ಕಾರಿ ಜಿಲ್ಲಾಸ್ಪತ್ರೆಗಳಲ್ಲಿ ಸಿ.ಟಿ.ಸ್ಕ್ಯಾನಿಂಗ್‌ ಸ್ಥಗಿತ

‘ಕೃಷ್ಣ ಡಯಾಗ್ನೋಸ್ಟಿಕ್ ಲಿಮಿಟೆಡ್‌’ಗೆ ಸರ್ಕಾರ ₹140 ಕೋಟಿ ಬಾಕಿ ಉಳಿಸಿಕೊಂಡ ಕಾರಣ ಯಾದಗಿರಿ, ಚಿತ್ರದುರ್ಗ, ಯಾದಗಿರಿ, ಕೋಲಾರ, ಕಾರವಾರ, ಹಾವೇರಿ ಸೇರಿ ರಾಜ್ಯದ 12 ಜಿಲ್ಲಾಸ್ಪತ್ರೆಗಳಲ್ಲಿ ಉಚಿತ ಸಿಟಿ ಮತ್ತು ಎಂಆರ್‌ಐ ಸ್ಕ್ಯಾನಿಂಗ್ ಸೇವೆಗಳು ಸ್ಥಗಿತಗೊಂಡಿದ್ದು, ರೋಗಿಗಳು ಪರದಾಡುವಂತಾಗಿದೆ.

Read Full Story

08:21 AM (IST) Feb 21

ಹೈಕಮಾಂಡ್‌ ಸಿಕ್ಕರೆ ಮಾತುಕತೆ - ಸತೀಶ್‌ ದಿಢೀರ್‌ ಆಗಿ ದೆಹಲಿಗೆ ಭೇಟಿ

ಕರ್ನಾಟಕ ಕಾಂಗ್ರೆಸ್‌ನಲ್ಲಿನ ನಾಯಕತ್ವದ ಗೊಂದಲ ಮತ್ತು ಅಧಿಕಾರ ಹಂಚಿಕೆ ಕುರಿತ ಗೊಂದಲದ ನಡುವೆಯೇ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರು ದಿಢೀರ್‌ ಆಗಿ ದೆಹಲಿಗೆ ಭೇಟಿ ನೀಡಿದ್ದಾರೆ.

Read Full Story

08:08 AM (IST) Feb 21

Bengaluru - ಗಂಡನ ಗೆಳೆಯನಿಂದಲೇ ಮೂರು ಮಕ್ಕಳ ತಾಯಿ ಮೇಲೆ ಅತ್ಯಾ*ಚಾರ; 5 ಲಕ್ಷ ಹಣಕ್ಕೆ ಡಿಮ್ಯಾಂಡ್

ಗಂಡನ ಸ್ನೇಹಿತನೇ ಮಹಿಳೆಯ ಮೇಲೆ ಅತ್ಯಾ*ಚಾರ ಎಸಗಿದ್ದಾನೆ. ಆರೋಪಿ ಮೊಹಮ್ಮದ್ ಜಹಾಂಗೀರ್, ಕೃತ್ಯದ ವಿಡಿಯೋ ಮಾಡಿ, ಅದನ್ನು ವೈರಲ್ ಮಾಡುವುದಾಗಿ ಬೆದರಿಸಿ ಮತ್ತೆ ಲೈಂಗಿಕ ಕ್ರಿಯೆಗೆ ಮತ್ತು 5 ಲಕ್ಷ ರೂಪಾಯಿಗೆ ಬೇಡಿಕೆಯಿಟ್ಟಿದ್ದಾನೆ. ಸಂತ್ರಸ್ತೆ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Read Full Story

08:01 AM (IST) Feb 21

Snehamayi Krishna - ನಟೇಶ್ ಆಡಿಯೋ ಸಾಕ್ಷಿ ಕೋರ್ಟ್ ಕೈಗೆ ತಲುಪದಂತೆ ತಡೆಯಲು ನಡೆಯಿತಾ ಸ್ನೇಹಮಯಿ ಕೃಷ್ಣ ಬಂಧನ?

ಮುಡಾ ಮಾಜಿ ಆಯುಕ್ತ ಡಿಬಿ ನಟೇಶ್ ವಿರುದ್ಧ ಅಪಪ್ರಚಾರ ನಡೆಸಿದ ಆರೋಪದ ಮೇಲೆ  ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಮಹತ್ವದ ಆಡಿಯೋ ಸಾಕ್ಷ್ಯವನ್ನು ಸಲ್ಲಿಸುವ ಮುನ್ನವೇ ಈ ಬಂಧನವಾಗಿರುವುದು ಅನುಮಾನಕ್ಕೆ ಕಾರಣವಾಗಿದೆ.

Read Full Story

07:42 AM (IST) Feb 21

ಈಜೀಪುರ ಮೇಲ್ಸೇತುವೆ ಕಾಮಗಾರಿಗೆ ಜುಲೈ ಗಡುವು

ಹಲವು ವರ್ಷಗಳಿಂದ ನಡೆಯುತ್ತಿರುವ ಈಜೀಪುರ ಮೇಲ್ಸೇತುವೆ ಕಾಮಗಾರಿಯನ್ನು ಜುಲೈ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಅವರು ಗುತ್ತಿಗೆದಾರರಿಗೆ ಸೂಚಿಸಿದ್ದಾರೆ.

Read Full Story

07:29 AM (IST) Feb 21

ಸಿಎಂ ನೇತೃತ್ವದ ಸಮಿತಿಗೆ ಚಿಕ್ಕಬಳ್ಳಾಪುರ ಸಂಸದ ಸುಧಾಕರ್‌ ಸೇರ್ಪಡೆ

ಮುಖ್ಯಮಂತ್ರಿಯವರ ನೇತೃತ್ವದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ)ದ ಸಮಿತಿಯನ್ನು ಪುನರ್‌ ರಚನೆ ಮಾಡಿ ಸರ್ಕಾರ ರಾಜ್ಯಪತ್ರವನ್ನು ಹೊರಡಿಸಿದ್ದು 84 ಮಂದಿ ಪದನಿಮಿತ್ತ ಸದಸ್ಯರು ಇರಲಿದ್ದಾರೆ. ಇದರಲ್ಲಿ ಇದಕ್ಕೂ ಮುನ್ನ ಒಟ್ಟು 75 ಮಂದಿ ಸದಸ್ಯರಿದ್ದರು.

Read Full Story

07:23 AM (IST) Feb 21

ದಾವಣಗೆರೆ, ಬಾಗಲಕೋಟೆ ಕ್ಷೇತ್ರದ 'ಕೈ; ಟಿಕೆಟ್ ಕದನ - ಕುಟುಂಬದೊಳಗೆ ಪೈಪೋಟಿ, ಹೊರಗೆ ಸಮರ

ಮಾಜಿ ಸಚಿವರಾದ ಎಚ್‌.ವೈ. ಮೇಟಿ ಮತ್ತು ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿರುವ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಬಾಗಲಕೋಟೆಯಲ್ಲಿ ಮೇಟಿ ಕುಟುಂಬದೊಳಗೆ ಟಿಕೆಟ್‌ಗಾಗಿ ಪೈಪೋಟಿ ನಡೆಯುತ್ತಿದೆ.

Read Full Story

07:13 AM (IST) Feb 21

ಮುಡಾ ಹಗರಣದ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್ ಬೆನ್ನಲ್ಲೇ, ಮನೆ, ಕಚೇರಿ ಮೇಲೆ ಸತತ 4 ಗಂಟೆ ದಾಳಿ, ಸಿಸಿಬಿ ಪೊಲೀಸರಿಗೆ ಸಿಕ್ಕಿದ್ದೇನು?

ಮುಡಾ ಮಾಜಿ ಆಯುಕ್ತ ಡಿಬಿ ನಟೇಶ್ ಅವರ ಫೋಟೋ ಮತ್ತು ಆಡಿಯೋ ಎಡಿಟ್ ಮಾಡಿ ಅಪಪ್ರಚಾರ ನಡೆಸಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತೆ ಸ್ನೇಹಮಯಿ ಕೃಷ್ಣ ಸಿಸಿಬಿ ಸೈಬರ್ ಕ್ರೈಂ ಪೊಲೀಸರು ವಶಕ್ಕೆ. ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿ, ಮಹತ್ವದ ಡಿಜಿಟಲ್ ಪುರಾವೆಗಳನ್ನು ಜಪ್ತಿ ಮಾಡೀದ್ದಾರೆ.

Read Full Story

More Trending News