ಕಲಾವಿದರ ಪಿಂಚಣಿ 2000 ರು.ಗೆ ಏರಿಕೆ; ಸಚಿವ ಸುನಿಲ್ ಕುಮಾರ್

Published : Nov 02, 2022, 03:18 AM IST
ಕಲಾವಿದರ ಪಿಂಚಣಿ  2000 ರು.ಗೆ ಏರಿಕೆ; ಸಚಿವ ಸುನಿಲ್ ಕುಮಾರ್

ಸಾರಾಂಶ

ಕಲಾವಿದರ ಪಿಂಚಣಿ 2000 ರು.ಗೆ ಏರಿಕೆ ಪಿಂಚಣಿದಾರರ ಸಂಖ್ಯೆ 15000ಕ್ಕೇರಿಕೆ:  ಸಚಿವ ಸುನಿಲ್‌ ಕುಮಾರ್

ಬೆಂಗಳೂರು (ನ.2) : ರಾಜ್ಯ ಸರ್ಕಾರವು ಕಲಾವಿದರ ಪಿಂಚಣಿಯನ್ನು 1,500ರಿಂದ 2,000 ರು.ಗೆ ಏರಿಸಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್‌ ಕುಮಾರ್‌ ಹೇಳಿದ್ದಾರೆ. ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಸಚಿವರು, ‘ರಾಜ್ಯ ಸರ್ಕಾರವು ಕಲೆ ಮತ್ತು ಕಲಾವಿದರಿಗೆ ಪ್ರೋತ್ಸಾಹ ನೀಡಲು ಸದಾ ಸಿದ್ಧವಿದೆ. ಈ ಹಿನ್ನೆಲೆಯಲ್ಲಿ 12,000 ಕಲಾವಿದರಿಗೆ ನೀಡುತ್ತಿದ್ದ ಪಿಂಚಣಿಯನ್ನು 15,000 ಮಂದಿಗೆ ಹೆಚ್ಚಿಸಲಾಗಿದೆ’ ಎಂದರು.

‘ಈ ಬಾರಿ ನಾವು ನೈಜ ಸಾಧನೆಯನ್ನು ಮಾತ್ರ ಪರಿಗಣಿಸಿ ಪ್ರಶಸ್ತಿ ನೀಡಿದ್ದೇವೆ. ಅಶೋಕ ಬಾಬು ನೀಲಗಾರ ಅವರು ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಅವರ ಬಯೋಡಾಟವನ್ನು ಗಮನಿಸಿದಾಗ ಅವರ ಸಾಧನೆ ನಮ್ಮ ಅರಿವಿಗೆ ಬಂತು. ಪಿಂಚಣಿಗಾಗಿ ಸಲ್ಲಿಸಿದ್ದ ಅರ್ಜಿಯೇ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಪಡೆಯಲು ಕಾರಣವಾಯಿತು’ ಎಂದು ಹೇಳಿದರು.

‘ರಾಜ್ಯೋತ್ಸವ ಪ್ರಶಸ್ತಿಗಾಗಿ ಈ ಬಾರಿ ಸೇವಾ ಸಿಂಧು ಆ್ಯಪ್‌ನಲ್ಲಿ 9,000 ಅರ್ಜಿಗಳು ಬಂದಿದ್ದವು. ಆದರೆ ಅರ್ಜಿ ಹಾಕಿದವರಿಗಿಂತ, ಆಯ್ಕೆ ಸಮಿತಿ ಗುರುತಿಸಿದವರಿಗೆ ಪ್ರಶಸ್ತಿ ನೀಡಲಾಗಿದೆ. ಎಲ್ಲ ಕ್ಷೇತ್ರಗಳ ಸಾಧಕರನ್ನು ಗುರುತಿಸಿದ್ದೇವೆ. ಬಾನಯಾನದ ಮಹಾನ್‌ ವಿಜ್ಞಾನಿ, ಇಸ್ರೋದ ಮಾಜಿ ಮುಖ್ಯಸ್ಥ ಕೆ. ಶಿವನ್‌ ನಿಂದ ಹಿಡಿದು ಪೌರ ಕಾರ್ಮಿಕೆ ಮಲ್ಲಮ್ಮರ ತನಕ ವೈವಿಧ್ಯಮಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ಸಂದಿದೆ’ ಎಂದರು.

‘ಗ್ರಾಮೀಣ ಭಾಗದಲ್ಲಿ ಪ್ರಚಾರ ಪಡೆಯದೇ ಸಾಧನೆ, ಸೇವಾ ಕಾರ್ಯ ಮಾಡುತ್ತಿದ್ದವರನ್ನು ಗುರುತಿಸಲಾಗಿದೆ. ಕೆಲವು ಸಾಧಕರಲ್ಲಿ ನಿಮಗೆ ಪ್ರಶಸ್ತಿ ಬಂದಿದೆ. ನಿಮ್ಮ ಭಾವಚಿತ್ರವೊಂದನ್ನು ಪತ್ರಿಕೆಗಳಿಗೆ ಬಿಡುಗಡೆ ಮಾಡಲು ನೀಡಬೇಕು ಎಂದು ಕೇಳಿಕೊಂಡಾಗ, ಅವರಲ್ಲಿ ಭಾವಚಿತ್ರವೂ ಇರಲಿಲ್ಲ. ಇಂತಹ ಎಲೆಮರೆಯ ಕಾಯಿಗಳಿಗೆ ಪ್ರಶಸ್ತಿ ನೀಡಲಾಗಿದೆ’ ಎಂದರು.

ಎಸ್ಸಿ,ಎಸ್ಟಿಗೆ ಫ್ರೀ ಕರೆಂಟ್ ಗೊಂದಲ: ಸಿದ್ದು ಆರೋಪಕ್ಕೆ ಸುನಿಲ್ ಕುಮಾರ್ ಗುದ್ದು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ
ಸಿಸೇರಿಯನ್‌ ಹೆರಿಗೆ ಹೆಚ್ಚಳ ಏಕೆ ಎಂದು ತಿಳಿಯಲು ಆಡಿಟ್‌: ಸಚಿವ ದಿನೇಶ್‌ ಗುಂಡೂರಾವ್