ತಿಂಗಳ ಬಳಿಕ 100 ದಾಟಿದ ಪ್ರಕರಣ, 4 ವಾರದಲ್ಲಿ ರಾಜ್ಯದಲ್ಲಿ ನಾಲ್ಕನೇ ಕೊರೋನಾ ಅಲೆ!

Published : Apr 24, 2022, 04:29 AM ISTUpdated : Apr 24, 2022, 09:21 AM IST
ತಿಂಗಳ ಬಳಿಕ 100 ದಾಟಿದ ಪ್ರಕರಣ, 4 ವಾರದಲ್ಲಿ ರಾಜ್ಯದಲ್ಲಿ ನಾಲ್ಕನೇ ಕೊರೋನಾ ಅಲೆ!

ಸಾರಾಂಶ

* ರಾಜ್ಯದಲ್ಲಿ ಹೊಸ ತಳಿ ಪತ್ತೆ ಆಗಿಲ್ಲ: ಆರೋಗ್ಯ ಇಲಾಖೆ * ಕೇಂದ್ರೀಯ ಲ್ಯಾಬ್‌ ಈ ಮಾಹಿತಿ ಖಚಿತಪಡಿಸಿಲ್ಲ * 2 ಉಪತಳಿ ಪತ್ತೆ ಎಂಬ ವರದಿಗಳ ಬಗ್ಗೆ ಸರ್ಕಾರ ಸ್ಪಷ್ಟನೆ

ಬೆಂಗಳೂರು(ಏ.24): ದೆಹಲಿಯಲ್ಲಿ ಸೋಂಕು ಉಲ್ಬಣಕ್ಕೆ ಕಾರಣವಾದ ಒಮಿಕ್ರೋನ್‌ನ 2 ಹೊಸ ಉಪತಳಿಗಳು ಬೆಂಗಳೂರಿನಲ್ಲೂ ಪತ್ತೆಯಾಗಿರುವುದು ಖಚಿತವಾಗಿಲ್ಲ ಎಂದು ರಾಜ್ಯ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.

‘ಒಮಿಕ್ರೋನ್‌ನ ಹೊಸ ರೂಪಾಂತರಿ ಬಿಎ 2.10 ಮತ್ತು ಬಿಎ 2.12 ರಾಜ್ಯದಲ್ಲಿ ಪತ್ತೆ ಆಗಿವೆ. ಇಬ್ಬರು ಬೆಂಗಳೂರಿಗರಲ್ಲಿ ಸೋಂಕು ಕಂಡುಬಂದಿದೆ ಎಂದು ಖಾಸಗಿ ಪ್ರಯೋಗಾಲಯಗಳು ಪತ್ತೆ ಮಾಡಿವೆ’ ಎಂದು ಶನಿವಾರ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿತ್ತು.

ಈ ಬಗ್ಗೆ ಸ್ಪಷ್ಟನೆ ನೀಡಿರುವ ರಾಜ್ಯಆರೋಗ್ಯ ಇಲಾಖೆಯ ಆಯುಕ್ತ ಡಿ. ರಂದೀಪ್‌ ‘ಕೆಲವು ಮಾಧ್ಯಮಗಳು ಹೊಸ ರೂಪಾಂತರಿ ಪತ್ತೆ ಆಗಿದೆ ಎಂದು ವರದಿ ಮಾಡುತ್ತಿವೆ. ಆದರೆ ಇನ್ಸಾಕಾಗ್‌ (ಪ್ರಯೋಗಾಲಗಳ ಒಕ್ಕೂಟ) ಈ ಮಾಹಿತಿಯನ್ನು ಆರೋಗ್ಯ ಇಲಾಖೆಗೆ ಖಚಿತ ಪಡಿಸಿಲ್ಲ. ಹಾಗೆಯೇ ಸೋಂಕಿತರ ಆಸ್ಪತ್ರೆಯ ದಾಖಲಾತಿ ಹೆಚ್ಚಾಗಿಲ್ಲ ಮತ್ತು ಕಳೆದ ಎರಡು ವಾರಗಳಿಂದ ಕೋವಿಡ್‌ ಸಾವು ಘಟಿಸಿಲ್ಲ. ವೈರಾಣುವಿನ ರೂಪಾಂತರಿ ಪತ್ತೆ ಪರೀಕ್ಷೆಗಳು ನಿರಂತರವಾಗಿ ನಡೆಯುತ್ತಿದೆ’ ಎಂದು ತಿಳಿಸಿದ್ದಾರೆ.

"

4 ವಾರದಲ್ಲಿ 4ನೇ ಅಲೆ- ಮಂಜುನಾಥ್‌:

ಈ ನಡುವೆ ರಾಜ್ಯದಲ್ಲಿ 1 ತಿಂಗಳ ನಂತರ ಸೋಂಕು 100 ಪ್ರಕರಣ ದಾಟಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಯದೇವ ಹೃದ್ರೋಗ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್‌. ಮಂಜುನಾಥ್‌, ‘ಮುಂದಿನ 4-5 ವಾರದಲ್ಲೇ ರಾಜ್ಯದಲ್ಲಿ ಕೊರೋನಾ ನಾಲ್ಕನೇ ಅಲೆ ಕಾಣಿಸಿಕೊಳ್ಳಲಿದೆ’ ಎಂದಿದ್ದಾರೆ.

‘ವೇಗವಾಗಿ ಹರಡಿದರೂ ಒಮಿಕ್ರೋನ್‌ ಉಪತಳಿಯ ಸೋಂಕು ಇದಾಗಿದೆ. ಹೀಗಾಗಿ ಸೋಂಕಿನ ತೀವ್ರತೆ ಕಡಿಮೆ ಇರುತ್ತದೆ. ಆಸ್ಪತ್ರೆ ದಾಖಲೀಕರಣ ಹೆಚ್ಚಿರದು. ಮೂರನೇ ಅಲೆ ಮಾದರಿಯಲ್ಲೇ ಒಂದೂವರೆ ತಿಂಗಳಲ್ಲಿ ಕಡಿಮೆಯಾಗಲಿದೆ’ ಎಂದು ಹೇಳಿದ್ದಾರೆ.

‘ಕೊರೋನಾ ಸೋಂಕಿನ ಈ ಹಿಂದಿನ ಮೂರು ಅಲೆಗಳು ಕೂಡಾ ದೆಹಲಿಯಿಂದ ಆರಂಭವಾಗಿ ಮಹಾರಾಷ್ಟ್ರ, ಕೇರಳ ಅನಂತರ ಕರ್ನಾಟಕಕ್ಕೆ ಹರಡಿದ್ದವು. ಸದ್ಯ ದೆಹಲಿಯಲ್ಲಿ ನಾಲ್ಕನೇ ಅಲೆ ಆರಂಭಿಕ ಲಕ್ಷಣಗಳಿದ್ದು, ಅನಂತರ ಮಹಾರಾಷ್ಟ್ರ, ಕೇರಳದಲ್ಲಿ ಆರಂಭವಾಗಲಿದೆ. ಮುಂದಿನ ನಾಲ್ಕು ವಾರಗಳಲ್ಲಿ ಕರ್ನಾಟಕದಲ್ಲಿಯೂ ನಾಲ್ಕನೇ ಅಲೆ ಅಲೆ ಕಾಣಿಸಿಕೊಳ್ಳಲಿದೆ’ ಎಂದು ಡಾ| ಮಂಜುನಾಥ್‌ ಹೇಳಿದ್ದಾರೆ.

ಹೆಚ್ಚೆಚ್ಚು ಪರೀಕ್ಷೆ ನಡೆಸಿ: ಡಾ| ಮಂಜುನಾಥ್‌ ಕೋರಿಕೆ

ಬೆಂಗಳೂರು: ‘ರಾಜ್ಯದಲ್ಲೂ ಒಮಿಕ್ರೋನ್‌ ಉಪತಳಿಗಳು ಹರಡುವ ಭೀತಿ ಇದೆ. ಹೀಗಾಗಿ ಸೋಂಕು ಪರೀಕ್ಷೆ ಮತ್ತು ವಂಶವಾಹಿ ಪರೀಕ್ಷೆಗಳನ್ನು ಹೆಚ್ಚಿಸಬೇಕು. ಪ್ರಸ್ತುತ ಕಡಿಮೆ ಸಂಖ್ಯೆಯ ಪರೀಕ್ಷೆ ನಡೆಯುತ್ತಿದ್ದು, ಹೆಚ್ಚಿನ ಪರೀಕ್ಷೆ ಹಾಗೂ ವಂಶವಾಹಿ ಪರೀಕ್ಷೆ ನಡೆಸಿದರೆ ಸೋಂಕಿನ ಪ್ರಮಾಣ ಅಂದಾಜಿಸಲು ನೆರವಾಗುತ್ತದೆ. ತನ್ಮೂಲಕ ಸಿದ್ಧತೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಳ್ಳಲೂ ಅನುವಾಗುತ್ತದೆ’ ಎಂದು ತಜ್ಞ ಡಾ

ಮಂಜುನಾಥ್‌ ಅವರು ರಾಜ್ಯ ಸರ್ಕಾರಕ್ಕೆ ಕೋರಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಯಕ್ಷಗಾನ ಕಲಾವಿದರ ಅಪಮಾನ: 'ಬಿಳಿಮಲೆಗೆ ಒಂದು ನೋಟಿಸ್ ಕೊಡೋಕೂ ಕಷ್ಟವೇ? ಸುನೀಲ್ ಕುಮಾರ್ ಪ್ರಶ್ನೆ, ಈ ವಿಷಯ ದೊಡ್ಡದು ಮಾಡೋದು ಬೇಡ ಎಂದ ತಂಗಡಗಿ
ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!