
ಬೆಂಗಳೂರು(ಆ.27): ಕರ್ನಾಟಕ ರಾಜ್ಯ ಸರ್ಕಾರಿ ರೇಡಿಯಾಲಜಿ ಇಮೇಜಿಂಗ್ ಅಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಅಶೋಕ ವಾಲ್ಮೀಕಿ ಆಯ್ಕೆಯಾಗಿದ್ದಾರೆ.
ಹುಬ್ಬಳ್ಳಿಯಲ್ಲಿ ಭಾನುವಾರ ನಡೆದ ಸಂಘದ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಹೊಸ ಪದಾಧಿಕಾರಿಗಳ ಚುನಾವಣೆ ನಡೆಯಿತು. ಖಜಾಂಚಿಯಾಗಿ ಪ್ರಮೋದ್ ಹಿರೇಮಠ ಆಯ್ಕೆಯಾಗಿದ್ದಾರೆ.
ಗೃಹ ಲಕ್ಷ್ಮಿ ಹಣ ಕೂಡಿಟ್ಟು ಸೊಸೆಗೆ ಫ್ಯಾನ್ಸಿ ಸ್ಟೋರ್ ಹಾಕಿಸಿಕೊಟ್ಟ ಅತ್ತೆ!
ಚುನಾವಣಾಧಿಕಾರಿಗಳಾಗಿ ಸೊಸೈಟಿ ಆಫ್ ಇಂಡಿಯನ್ ರೇಡಿಯೋಗ್ರಾಫರ್ಸ್ ಅಸೋಸಿಯೇಶನ್ಸ್ ಸಂಸ್ಥಾಪಕರಾದ ಎಸ್.ಎ. ವಾಜಿದ್ ಕಾರ್ಯನಿರ್ವಹಿಸಿದರು. ಸಂಘದ ಇತರ ಪದಾಧಿಕಾರಿಗಳಾದ ವೆಂಕಟರಮಣಪ್ಪ, ಕಿಶೋರ ಕೋಟೂರ, ನಂಜುಂಡಸ್ವಾಮಿ, ಅಶ್ವಥನಾರಾಯಣ ಮುಂತಾದವರು ಉಪಸ್ಥಿತರಿದ್ದರು. ಅಶೋಕ ವಾಲ್ಮೀಕಿ ಅವರು ಹುಬ್ಬಳ್ಳಿಯ ಕರ್ನಾಟಕ ಮೆಡಿಕಲ್ ಕಾಲೇಜ್ ಮತ್ತು ರೀಸರ್ಚ್ ಇನ್ಸ್ಟಿಟ್ಯೂಟ್(ಕೆಎಂಸಿಆರ್ಐ)ನಲ್ಲಿ ರೇಡಿಯಾಲಜಿ ಇಮೇಜಿಂಗ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ