ಬೆಂಗ್ಳೂರಿನಲ್ಲಿ 7ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ತಯಾರಿ

Published : Jun 15, 2021, 08:06 PM IST
ಬೆಂಗ್ಳೂರಿನಲ್ಲಿ 7ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ತಯಾರಿ

ಸಾರಾಂಶ

* 7ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಭರ್ಜರಿ ತಯಾರಿ * 7ನೇ ಅಂತಾರಾಷ್ಟ್ರೀಯ ದಿನದಂದು 1 ಲಕ್ಷ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಂದ ಯೋಗ * ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣ  ನೇತೃತ್ವದಲ್ಲಿ ಪೂರ್ವಭಾವಿ ಸಭೆ

ಬೆಂಗಳೂರು, (ಜೂನ್.15): ಇದೇ  ಜೂನ್. 21ರಂದು ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಕ್ರೀಡಾ ಮತ್ತು ಯುವಜನ ಸಬಲೀಕರಣ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವತಿಯಿಂದ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ವರ್ಚುಯಲ್‌ ವೇದಿಕೆ ಮೂಲಕ ಯೋಗಾಭ್ಯಾಸ ನಡೆಸಲಿದ್ದಾರೆಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ತಿಳಿಸಿದರು. 

ಬೆಂಗಳೂರಿನಲ್ಲಿ ಇಂದು (ಮಂಗಳವಾರ) 7ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಂಬಂಧ ನಡೆದ ಪೂರ್ವಭಾವಿ ಸಭೆಯ ನಂತರ ಮಾಧ್ಯಮಗಳ ಜತೆ ಅವರು ಮಾತನಾಡಿದರು. 

#Yoga ಬೆಳೆಯೋ ಮಕ್ಕಳ ಎತ್ತರ ಹೆಚ್ಚಿಸೋ ಯೋಗ ತಾಡಾಸನ

ಕೋವಿಡ್‌ ಕಾರಣದಿಂದ ಈ ವರ್ಷದ 7ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ರಾಜ್ಯದಲ್ಲಿ ಅತ್ಯಂತ ಸರಳವಾಗಿ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು, ಕೇವಲ 100 ಜನರು ಮಾತ್ರ ಭಾಗಿಯಾಗಲಿದ್ದಾರೆ. ಅಂದು ಬೆಳಗ್ಗೆ 7ರಿಂದ 8 ಗಂಟೆವರೆಗೆ ಕಾರ್ಯಕ್ರಮ ನಡೆಯುತ್ತದೆ ಎಂದು ತಿಳಿಸಿದರು. 

ಈ ವರ್ಷದ ಯೋಗ ದಿನಾಚರಣೆ ಕ್ರೀಡಾ ಮತ್ತು ಯುವಜನ ಸಬಲೀಕರಣ, ನಿಮ್ಹಾನ್ಸ್‌, ಪರಿವರ್ತನಾ ಯೋಗಾ ಪ್ರತಿಷ್ಠಾನ ಹಾಗೂ ಆರ್ಟ್‌ ಆಫ್‌ ಲಿವಿಂಗ್‌ ಸಹಯೋಗದಲ್ಲಿ ನಡೆಯಲಿದೆ. ಸೋಂಕಿನ ಕಾಯಿಲೆ ಇರುವ ಕಾರಣಕ್ಕೆ ಈ ಕಾರ್ಯಕ್ರಮಕ್ಕೆ ʼಕೋವಿಡ್-‌19, ಯುವಜನರು, ಯೋಗ, ಧ್ಯಾನʼ ಎಂಬ ಶೀರ್ಷಿಕೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು. 

ಸಚಿವ ನಾರಾಯಣಗೌಡ ಅವರು ವರ್ಚುವಲ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಶಾಸಕ ಗೋವಿಂದರಾಜು, ಉನ್ನತ ಶಿಕ್ಷಣ ಪರಿಷತ್‌ ಉಪಾಧ್ಯಕ್ಷ ಪ್ರೊ.ತಿಮ್ಮೇಗೌಡ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ, ಯುವಜನ ಸೇವೆ ಇಲಾಖೆ ಆಯುಕ್ತ ಗೋಪಾಲಕೃಷ್ಣ ಸಭೆಯಲ್ಲಿ ಹಾಜರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಜ್ಯದಲ್ಲಿ 9.67 ಲಕ್ಷ ಟನ್‌ ತೊಗರಿ ಖರೀದಿಗೆ ಕೇಂದ್ರ ಅಸ್ತು
ಉತ್ತರ ಕರ್ನಾಟಕಕ್ಕೆ ಕೊಟ್ಟ ಭರವಸೆ ಈಡೇರಿಕೆ ಬಗ್ಗೆ ಶ್ವೇತಪತ್ರ ಹೊರಡಿಸಿ: ಆರ್‌.ಅಶೋಕ್‌