ಏಷ್ಯಾ ಮಾಲ್‌ಗೆ ನುಗ್ಗಿ ಗಲಾಟೆ ಆರೋಪ; ಪುನೀತ್ ಕೆರೆಹಳ್ಳಿ ವಿರುದ್ಧ ಮತ್ತೊಂದು ಎಫ್‌ಐಆರ್!

Published : Dec 24, 2023, 01:55 PM ISTUpdated : Dec 24, 2023, 02:07 PM IST
ಏಷ್ಯಾ ಮಾಲ್‌ಗೆ ನುಗ್ಗಿ ಗಲಾಟೆ ಆರೋಪ; ಪುನೀತ್ ಕೆರೆಹಳ್ಳಿ ವಿರುದ್ಧ ಮತ್ತೊಂದು ಎಫ್‌ಐಆರ್!

ಸಾರಾಂಶ

ಕ್ರಿಸ್‌ಮಸ್ ಹಬ್ಬದ ಅಲಂಕಾರದ ವಿಚಾರಕ್ಕೆ ಮಾಲ್‌ಗೆ ನುಗ್ಗಿ ಗಲಾಟೆ ಮಾಡಿರೋ ಆರೋಪ ಹಿನ್ನೆಲೆ ರಾಷ್ಟ್ರ ರಕ್ಷಣಾ ಪಡೆ ಸಂಘಟನೆ ಮುಖಂಡ ಪುನೀತ್‌ಕುಮಾರ್‌ ಅಲಿಯಾಸ್‌ ಪುನೀತ್‌ ಕೆರೆಹಳ್ಳಿ ಮೇಲೆ ಮತ್ತೊಂದು ಎಫ್‌ಐಆರ್ ದಾಖಲು ಮಾಡಲಾಗಿದೆ.

ಬೆಂಗಳೂರು (ಡಿ.24) : ಕ್ರಿಸ್‌ಮಸ್ ಹಬ್ಬದ ಅಲಂಕಾರದ ವಿಚಾರಕ್ಕೆ ಮಾಲ್‌ಗೆ ನುಗ್ಗಿ ಗಲಾಟೆ ಮಾಡಿರೋ ಆರೋಪ ಹಿನ್ನೆಲೆ ರಾಷ್ಟ್ರ ರಕ್ಷಣಾ ಪಡೆ ಸಂಘಟನೆ ಮುಖಂಡ ಪುನೀತ್‌ಕುಮಾರ್‌ ಅಲಿಯಾಸ್‌ ಪುನೀತ್‌ ಕೆರೆಹಳ್ಳಿ ಮೇಲೆ ಮತ್ತೊಂದು ಎಫ್‌ಐಆರ್ ದಾಖಲು ಮಾಡಲಾಗಿದೆ.

ನಿನ್ನೆ ಏಷ್ಯಾ ಮಾಲ್‌ ಬಳಿ ಹೋಗಿದ್ದ ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರು. ಈ ವೇಳೆ ಯಾಕೆ ಕ್ರಿಸ್ಮಸ್ ಟ್ರೀ ಗಳ ಅಲಂಕಾರ ಮಾಡಿದ್ದೀರ ಅಂತಾ ಮಾಲ್‌ ಸಿಬ್ಬಂದಿಯೊಂದಿಗೆ ಗಲಾಟೆ ಮಾಡಿರುವ ಪುನೀತ್ ಕೆರೆಹಳ್ಳಿ, ಸಹಚರರು. ಕ್ರಿಸ್‌ಮಸ್‌ ಟ್ರೀ ಅಲಂಕಾರ ಮಾಡಿದ್ದಲ್ಲದೇ 200 ರೂ ಎಂಟ್ರಿ ಫೀಸ್ ಬೇರೆ ಇಟ್ಟಿದ್ದೀರಾ? ಇದಕ್ಕೆ ಕಾನೂನು ಇದ್ಯಾ? ಹಿಂದೂ ಹಬ್ಬಗಳಿಗೆ ನೀವು ಇದೇ ರೀತಿಯ ಅಲಂಕಾರ ಮಾಡ್ತೀರ? 22-01-24 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಇದೆ. ಅವತ್ತೂ ಹೀಗೆ ಅಲಂಕಾರ ಮಾಡಬೇಕು. ಮಾಡದಿದ್ರೆ ಮಾಲ್ ಮುಂದೆ ಪ್ರತಿಭಟನೆ ನಡೆಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಹಿನ್ನೆಲೆ ಎಫ್‌ಐಆರ್ ದಾಖಲು.

ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧದ ಗೂಂಡಾ ಕಾಯ್ದೆ ರದ್ದು! ಜೈಲಿನಿಂದ ಬಿಡುಗಡೆ

ನಿನ್ನೆ ಸಹಚರರೊಂದಿಗೆ ಮಾಲ್‌ಗೆ ಬಂದಿರುವ ಪುನೀತ್ ಕೆರೆಹಳ್ಳಿ. ಕ್ರಿಸ್‌ಮಸ್ ಟ್ರೀ ಅಲಂಕಾರದ ವಿಚಾರಕ್ಕೆ ಸಿಬ್ಬಂದಿಯೊಂದಿಗೆ ಕಿರಿಕ್ಕು ಮಾಡಿದ್ದಾರೆ. ಈ ವೇಳೆ ಸೆಕ್ಯುರಿಟಿ ಗಾರ್ಡ್ ಗಳು ಹೊರಗೆ ಹೋಗಿ ಅಂತಾ ಬಲವಂತವಾಗಿ ಪುನೀತ್ ಕೆರೆಹಳ್ಳಿ ಸಹಚರರನ್ನ ಹೊರಗೆ ಕಳಿಸಿದ್ದಾರೆ. ಹೊರಗೆ ಬಂದ ಬಳಿಕ ಮಾಲ್ ಬಳಿ ಜೈ ಶ್ರೀರಾಮ ಘೋಷಣೆ ಕೂಗಿದ್ದಾರೆ ಜೊತೆಗೆ  ಯಾರೂ ಈ ಮಾಲ್ ಗೆ ಹೋಗಬೇಡಿ ಅಂತಾ ಕೂಗ್ತಿದ್ರಂತೆ. ಅಲ್ಲದೆ ಕ್ರಿಸ್ಮಸ್ ಹಾಗು ನ್ಯೂ ಇಯರ್ ದಿನ ಸಹ ಬಂದು ಗಲಾಟೆ ಮಾಡೋದಾಗಿ ಬೆದರಿಕೆ ಹಾಕಿದ್ದಾರೆ. ಮಾಲ್ ನ ಸಿಬ್ಬಂದಿ ಹಾಗು ಗ್ರಾಹಕರಿಗೆ ತೊಂದರೆ ನೀಡಿದ್ದಾರೆ ಎಂದು ಮಾಲ್ ಆಫ್ ಏಶಿಯಾ ಸೆಕ್ಯೂರಿಟಿ ಅಸಿಸ್ಟೆಂಟ್ ಮ್ಯಾನೇಜರ್ ಸ್ಟೀಫನ್ ವಿಕ್ಟರ್ ಎಂಬುವವರಿಂದ ಪುನೀತ್ ಕೆರೆಹಳ್ಳಿ ವಿರುದ್ಧ ದೂರು. ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪುನೀತ್ ಕೆರೆಹಳ್ಳಿ ಹಾಗು ಸಂಗಡಿಗರ ವಿರುದ್ಧ ಎಫ್ ಐ ಆರ್ ದಾಖಲು ಮಾಡಲಾಗಿದೆ.

10 ವರ್ಷಗಳಲ್ಲಿ ಲೆಕ್ಕವಿಲ್ಲದಷ್ಟು ಅಪರಾಧ, ಗೂಂಡಾ ಕಾಯ್ದೆಯಡಿ ಹಿಂದೂ ಕಾರ್ಯಕರ್ತ ಪುನಿತ್‌ ಕೆರೆಹಳ್ಳಿ ಬಂಧನ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ನೋಟೀಸ್: ವರುಣಾ ಕ್ಷೇತ್ರದ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ
ಉಡುಪಿ: 2 ಗಂಟೆ ಕಾದರೂ ಬರಲಿಲ್ಲ 108 ಆಂಬುಲೆನ್ಸ್‌, ಗೂಡ್ಸ್ ಟೆಂಪೋದಲ್ಲಿ ಸಾಗಿಸಿ ವೃದ್ಧನ ರಕ್ಷಣೆ!