
ಚಾಮರಾಜನಗರ (ಸೆ. 12): ಬಿಳಿಗಿರಿರಂಗನಬೆಟ್ಟದ ಬಿಳಿಗಿರಿರಂಗನ ನಾಥಸ್ವಾಮಿ ದೇವಾಲಯದಲ್ಲಿ ಹಾಕಲಾಗಿದ್ದ ಮೈಸೂರು ಮಹಾರಾಜರ ಫೋಟೋಗಳನ್ನು ತೆರವುಗೊಳಿಸಿ ಚಾಮರಾಜನಗರ ಜಿಲ್ಲಾಡಳಿತ ಎಡವಟ್ಟು ಮಾಡಿತ್ತು.
ಫೋಟೋ ತೆರವುಗೊಳಿಸಿ ಮೈಸೂರು ಒಡೆಯರ ಬಗೆಗಿನ ಜನರ ಭಾವನೆಗಳಿಗೆ ಧಕ್ಕೆ ಉಂಟು ಮಾಡಿರುವ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಪ್ರಸಾರ ಮಾಡಿತ್ತು. ಜೊತೆಗೆ ಭಕ್ತರು ಕೂಡಾ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಫಲಶೃತಿ ಎಂಬಂತೆ ತೆರವುಗೊಳಿಸಿದ್ದ ಮೈಸೂರು ಮಹಾರಾಜರ ಫೋಟೋಗಳನ್ನು ಜಿಲ್ಲಾಡಳಿತ ಮತ್ತೆ ಅಳವಡಿಸಿದೆ.
ದೇವಾಲಯದಿಂದ ಮೈಸೂರು ಒಡೆಯರ್ ಫೋಟೋ ತೆರವು.. ಜಿಲ್ಲಾಡಳಿತ ಎಡವಟ್ಟು
ರಾಜ್ಯದ ಏಳಿಗೆಗೆ ಮಹಾರಾಜರ ಕೊಡುಗೆಯ ನೆನಪಿಗಾಗಿ ಮೈಸೂರು ಮಹಾರಾಜರ ಫೋಟೋಗಳನ್ನು ಹಾಕಲಾಗಿತ್ತು. ಅಷ್ಟೇ ಅಲ್ಲ, ಮಹಾರಾಜರು ಬಿಳಿಗಿರಿರಂಗಾನಾಥಸ್ವಾಮಿಗೆ ಚಿನ್ನ ಬೆಳ್ಳಿ ಆಭರಣಗಳನ್ನು ಕೊಡುಗೆಯಾಗಿ ನೀಡಿದ್ದರು. ಜೀರ್ಣೋದ್ಧಾರ ನಂತರ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಹಿರಿಯ ಅಧಿಕಾರಿ, ಸತ್ತವರ ಫೋಟೋ ಏಕೆ ಹಾಕಿದ್ದೀರಿ ? ತೆಗೆದು ಹಾಕಿ ಎಂದು ಸೂಚಿಸಿದ್ದರು. ಹಿರಿಯ ಅಧಿಕಾರಿ ಸೂಚನೆ ಮೇರೆಗೆ ಮಹಾರಾಜರ ಫೋಟೋಗಳನ್ನು ಅಧಿಕಾರಿಗಳು ತೆರವುಗೊಳಿಸಿದ್ದರು. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿಯ ಪರಿಣಾಮ ಮತ್ತೆ ಮಹಾರಾಜರ ಫೋಟೋಗಳು ರಾರಾಜಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ