ಬೆಂಗಳೂರು: ಏಷ್ಯಾನೆಟ್ ಸುವರ್ಣ ನ್ಯೂಸ್ ಬಿಗ್ ಇಂಪ್ಯಾಕ್ಟ್; ಪಠ್ಯಪುಸ್ತಕ ದರ ಏರಿಕೆ ಪ್ರಸ್ತಾವನೆ ವಾಪಸ್

Published : Mar 22, 2026, 11:19 AM IST
Asianet Suvarna News Impact Government Withdraws Textbook Price Hike Proposal

ಸಾರಾಂಶ

ಖಾಸಗಿ ಶಾಲೆಗಳ ಪಠ್ಯಪುಸ್ತಕಗಳ ದರವನ್ನು ಶೇ.50 ರಷ್ಟು ಹೆಚ್ಚಿಸಲು ಮುಂದಾಗಿದ್ದ ಶಿಕ್ಷಣ ಇಲಾಖೆಯು, ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಮತ್ತು ರುಪ್ಸಾ ಸಂಘಟನೆಯ ವಿರೋಧದ ನಂತರ ತನ್ನ ನಿರ್ಧಾರ ಹಿಂಪಡೆದಿದೆ. ಈ ಮೂಲಕ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಗಳ ಮೇಲಾಗುತ್ತಿದ್ದ ಆರ್ಥಿಕ ಹೊರೆ ತಪ್ಪಿಸಲಾಗಿದೆ.

ಬೆಂಗಳೂರು (ಮಾ.22): ಖಾಸಗಿ ಶಾಲೆಗಳ ಪಠ್ಯಪುಸ್ತಕಗಳ ದರವನ್ನು ಶೇ.50 ರಷ್ಟು ಏರಿಕೆ ಮಾಡಲು ಮುಂದಾಗಿದ್ದ ಶಿಕ್ಷಣ ಇಲಾಖೆಯ ನಿರ್ಧಾರಕ್ಕೆ ಈಗ ಬ್ರೇಕ್ ಬಿದ್ದಿದೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಪ್ರಸಾರ ಮಾಡಿದ ವರದಿಯ ಬೆನ್ನಲ್ಲೇ ಎಚ್ಚೆತ್ತ ಶಾಲಾ ಶಿಕ್ಷಣ ಇಲಾಖೆ, ದರ ಏರಿಕೆಯ ಪ್ರಸ್ತಾವನೆಯನ್ನು ಕೈಬಿಟ್ಟಿದೆ.

ಸದ್ದಿಲ್ಲದೆ ದರ ಏರಿಸಲು ಇಲಾಖೆ ಸಜ್ಜು

ಖಾಸಗಿ ಶಾಲೆಗಳಿಗೆ ನೀಡುವ ಪಠ್ಯಪುಸ್ತಕಗಳ ಬೆಲೆಯನ್ನು ಯಾವುದೇ ಮುನ್ಸೂಚನೆ ಇಲ್ಲದೆ ಶೇ.50 ರಷ್ಟು ಹೆಚ್ಚಿಸಲು ಶಿಕ್ಷಣ ಇಲಾಖೆ ತಯಾರಿ ನಡೆಸಿತ್ತು. ಕಳೆದ ವರ್ಷವಷ್ಟೇ ಶೇ.25ರಷ್ಟು ದರ ಏರಿಕೆಯಾಗಿದ್ದರೂ ಖಾಸಗಿ ಶಾಲಾ ಆಡಳಿತ ಮಂಡಳಿಗಳು ಪುಸ್ತಕಗಳನ್ನು ಖರೀದಿ ಮಾಡಿದ್ದವು. ಆದರೆ ಈ ಬಾರಿ ಮತ್ತೆ ಬಾರೀ ಪ್ರಮಾಣದ ಏರಿಕೆಗೆ ಇಲಾಖೆ ಮುಂದಾಗಿತ್ತು.

ರುಪ್ಸಾ ಸಂಘಟನೆಯ ತೀವ್ರ ಆಕ್ರೋಶ

ಸರ್ಕಾರದ ಈ ದಿಢೀರ್ ನಿರ್ಧಾರದ ವಿರುದ್ಧ ಖಾಸಗಿ ಶಾಲೆಗಳ ಒಕ್ಕೂಟವಾದ 'ರುಪ್ಸಾ' (RUPSA) ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ರುಪ್ಸಾ ಅಧ್ಯಕ್ಷರಾದ ಹಾಲನೂರು ಲೇಪಾಕ್ಷಿ ಅವರು ಈ ದರ ಏರಿಕೆಯ ವಿರುದ್ಧ ಧ್ವನಿ ಎತ್ತಿ, ಇದು ಪೋಷಕರು ಮತ್ತು ಶಾಲೆಗಳ ಮೇಲೆ ಹೊರೆಯಾಗಲಿದೆ ಎಂದು ಎಚ್ಚರಿಸಿದ್ದರು.

ಸುವರ್ಣ ನ್ಯೂಸ್ ವರದಿಗೆ ಮಣಿದ ಸರ್ಕಾರ

ಪಠ್ಯಪುಸ್ತಕ ದರ ಏರಿಕೆಯಿಂದಾಗುವ ಸಮಸ್ಯೆಗಳ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಸರಣಿ ವರದಿಗಳನ್ನು ಪ್ರಸಾರ ಮಾಡಿ ಸರ್ಕಾರದ ಗಮನ ಸೆಳೆದಿತ್ತು. ಈ ವರದಿಯ ಪರಿಣಾಮವಾಗಿ ರಾಜ್ಯಾದ್ಯಂತ ಸಾರ್ವಜನಿಕ ವಲಯದಲ್ಲಿ ದೊಡ್ಡ ಚರ್ಚೆ ಆರಂಭವಾಯಿತು. ಕೊನೆಗೂ ಜನಾಕ್ರೋಶಕ್ಕೆ ಮಣಿದ ಶಾಲಾ ಶಿಕ್ಷಣ ಇಲಾಖೆ, 50% ದರ ಏರಿಕೆಯ ಪ್ರಸ್ತಾವನೆಯನ್ನು ಅಧಿಕೃತವಾಗಿ ಹಿಂಪಡೆದುಕೊಂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೀಲ್ಸ್ ಹುಚ್ಚಿಗೆ ಬಿಜೆಪಿ ಮುಖಂಡನ ಪುತ್ರ ಸಾವು ಕೇಸ್, ಅಪ್ರಾಪ್ತ ಮಗನಿಗೆ ಕಾರು ಕೊಟ್ಟು ಜೈಲು ಸೇರಿದ ಅಪ್ಪ
ನ್ಯಾಯಾಂಗದ ತೀರ್ಪು ಮನುಷ್ಯನ ಬುದ್ಧಿಯೇ ನಿರ್ಧರಿಸಬೇಕು: ಎಐ ಬಳಕೆ ಬಗ್ಗೆ ಸಿಜೆಐ ಎಚ್ಚರಿಕೆ