ಪ್ರಯಾಣಿಕರ ಗಮನಕ್ಕೆ: ಬಸ್ ಸಂಚಾರದಲ್ಲಿ ಕೊಂಚ ಬದಲಾವಣೆ....!

By Suvarna NewsFirst Published May 19, 2020, 9:55 PM IST
Highlights

ರಾಜ್ಯದಲ್ಲಿ ಇಂದಿನಿಂದ ಲಾಕ್‌ಡೌನ್ 4.0 ಹೊಸ ರೀತಿಯಲ್ಲಿ ಆರಂಭವಾಗಿದ್ದು, ಬಸ್ ಸಂಚಾರ ಸಮಯದಲ್ಲಿ ಕೊಂಚ ಬದಲಾಣೆಯಾಗಿದೆ.

ಬೆಂಗಳೂರು, (ಮೇ.19): ರಾಜ್ಯದಲ್ಲಿ ಇಂದಿನಿಂದ (ಮಂಗಳವಾರ) ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭವಾಗಿದೆ. ಮೊದಲನೇ ದಿನ ನಿಗಮದ ವ್ಯಾಪ್ತಿಯ ವಿಭಾಗಗಳಿಂದ ಒಟ್ಟು 1606 ಬಸ್‌ಗಳು ಸಂಚರಿಸಿದ್ದು, 53506 ಪ್ರಯಾಣಿಕರು ಪ್ರಯಾಣಿಸಿದ್ದಾರೆ.

ಇದೀಗ ಈ ಕೆಎಸ್ಆರ್‌ಟಿಸಿ ಬಸ್ ಸಂಚಾರದ ವೇಳಾಪಟ್ಟಿಯಲ್ಲಿ ಕೊಂಚ ಬದಲಾವಣೆ ಮಾಡಲಾದೆ. ನಾಳೆ ಅಂದ್ರೆ ಬುಧವಾರದಿಂದ ಬಸ್ಸುಗಳ ಕಾರ್ಯಚರಣೆಯ ಸಮಯವನ್ನು ಸಂಜೆ 7 ಗಂಟೆಯವರೆಗೆ ವಿಸ್ತರಿಸಲಾಗಿದೆ. 

KSRTC ಬಸ್ ಸಂಚಾರ ಆರಂಭ: ಆನ್‌ಲೈನ್ ಬುಕ್ಕಿಂಗ್ ಶುರು...! 

ಅಂದರೆ ಕೊನೆಯ ಬಸ್ಸು ಸಂಜೆ 7 ಗಂಟೆಗೆ ಬೆಂಗಳೂರು‌ ಬಿಡಲಿದೆ. ಉದಾಹರಣೆಗೆ ಕಲುಬುರುಗಿ , ಬೀದರ್ ಸಂಜೆ 7 ಕ್ಕೆ ಬೆಂಗಳೂರಿನಿಂದ ಹೊರಟು ಮಾರನೇ ದಿನ ಬೆಳಗ್ಗೆ ಕಲುಬುರಗಿ , ಬೀದರ್ ಗೆ ತಲುಪುತ್ತದೆ.

ಇದು ಎಲ್ಲಾ ಸ್ಥಳಗಳಿಗೆ ಕಾರ್ಯಾಚರಣೆಯಾಗುವ ಬಸ್ಸುಗಳಿಗೆ ಅನ್ವಯಿಸುತ್ತದೆ. ಬೆಂಗಳೂರು ಹಾಗೂ ಇತರೆ ಜಿಲ್ಲೆಗಳಿಂದ ಕಾರ್ಯಚರಣೆಯಾಗುವ ಬಸ್ಸುಗಳು ಸೇರಿದಂತೆ. 

ಇದೇ ಮಾದರಿಯ ಬಸ್ಸುಗಳ ಕಾರ್ಯಚರಣೆಯನ್ನು ಮುಂದಿನ‌ ಆದೇಶದವರೆಗೂ ಮುಂದುವರೆಸಲಾಗುವುದು ಎಂದು ಕೆಎಸ್‌ಆರ್‌ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಆದ್ಯ ಗಮನಕ್ಕೆ :

ಕೆ ಎಸ್ ಆರ್ ಟಿ ಸಿ‌ ಯು ಪ್ರಯಾಣಿಕರಲ್ಲಿ ಮನವಿ‌ ಮಾಡುವುದೇನೆಂದರೆ, ಮುಂಗಡ ಟಿಕೇಟು ಕಾಯ್ದಿರಿಸುವ (online ticketing) ಮೂಲಕ ಪ್ರಯಾಣಿಸಲು ಕೋರುತ್ತದೆ. ಇದರಿಂದ ವೃಥಾ ಬಸ್ ನಿಲ್ದಾಣದಲ್ಲಿ ಜನ ಸಂದಣಿ‌ ಮತ್ತು ಸರತಿ ಸಾಲುಗಳಲ್ಲಿ ಕಾಯುವುದನ್ನು ತಪ್ಪಿಸಬಹುದಾಗಿರುತ್ತದೆ.

...1

— KSRTC (@KSRTC_Journeys)

ಈ ಮೊದಲು ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಆದರೆ ಉತ್ತರ ಕರ್ನಾಟಕ ಭಾಗದ ದೂರದ ಊರುಗಳಿಗೆ ಹೋಗಲು ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ  ಕೆಎಸ್‌ಆರ್‌ಟಿಸಿ ಈ ನಿರ್ಧಾರ ಕೈಗೊಂಡಿದೆ.

click me!