
ಬೆಂಗಳೂರು (ಮಾ.31): ನಗರದಲ್ಲಿ ಕಸ ವಿಂಗಡಣೆ ಮಾಡದವರ ವಿರುದ್ಧ ದಂಡ ಪ್ರಯೋಗಕ್ಕೆ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆ ಮುಂದಾಗಿದ್ದು, ಏ.1ರಿಂದ ಹಸಿ ಮತ್ತು ಒಣ ತ್ಯಾಜ್ಯ ವಿಂಗಡಿಸಿ ನೀಡದವರಿಗೆ ದಂಡ ವಿಧಿಸಲಿದೆ.
ಘನತ್ಯಾಜ್ಯ ನಿರ್ವಹಣಾ ನಿಯಮ 2026 ಏ. 1ರಿಂದ ಜಾರಿಗೊಳಿಸಲಾಗುತ್ತಿದೆ. ಈ ನಿಯಮದ ಅನ್ವಯ ಪ್ರತಿಯೊಬ್ಬರೂ ಹಸಿ ಮತ್ತು ಒಣ ತ್ಯಾಜ್ಯವನ್ನು ವಿಂಗಡಿಸಿ ನೀಡಬೇಕು. ತ್ಯಾಜ್ಯ ಸಂಗ್ರಹ ಮತ್ತು ವಿಲೇವಾರಿ ಮಾಡುವವರು ಕೂಡ ಕಸ ವಿಂಗಡಿಸಿದ ನಂತರವೇ ಅದನ್ನು ಸಾಗಿಸಬೇಕು. ಈ ಕುರಿತಂತೆ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆ ಏ. 1ರಿಂದ ವಿಶೇಷ ಕಾರ್ಯಾಚರಣೆ ಆರಂಭಿಸುತ್ತಿದೆ. ಲಿಂಕ್ವರ್ಕರ್ಸ್ ಮತ್ತು ಘನತ್ಯಾಜ್ಯ ನಿರ್ವಹಣಾ ತಂಡದ ಮೂಲಕ ಈ ಕಾರ್ಯ ನಡೆಸಲಾಗುತ್ತದೆ.
ಕಾರ್ಯಾಚರಣೆ ವೇಳೆ ಕಸ ವಿಂಗಡಿಸಿ ನೀಡದವರ ವಿರುದ್ಧ ದಂಡ ವಿಧಿಸಲು ಸಂಸ್ಥೆ ನಿರ್ಧರಿಸಿದೆ. ಮೊದಲ ಬಾರಿ ತಪ್ಪು ಮಾಡಿದರೆ ಅವರಿಗೆ 500 ರು. ಹಾಗೂ ಮತ್ತೆ ಅದನ್ನು ಮುಂದುವರಿಸಿದರೆ 1 ಸಾವಿರ ರು. ದಂಡ ವಿಧಿಸಲಾಗುತ್ತದೆ. ಸಾರ್ವಜನಿಕರು ನಾಲ್ಕು ವಿಭಾಗದಲ್ಲಿ ಕಸವನ್ನು ವಿಂಗಡಿಸಬೇಕಾಗುತ್ತದೆ. ಹಸಿ, ಒಣ, ಸ್ಯಾನಿಟರಿ ವೇಸ್ಟ್ ಹಾಗೂ ಸ್ಪೆಷಲ್ ಕೇರ್ ವೇಸ್ಟ್ಗಳನ್ನು ವಿಂಗಡಿಸಿ ನೀಡಬೇಕು ಎಂದು ಸೂಚಿಸಲಾಗಿದೆ.
ಅಲ್ಲದೆ, ಕಸ ಸಂಗ್ರಹಿಸುವ ಆಟೋ ಟಿಪ್ಪರ್ ಚಾಲಕ ಮತ್ತು ಸಹಾಯಕರು ಕೂಡ ವಿಂಗಡಿಸಿದ ಕಸವನ್ನು ಮಾತ್ರ ಪಡೆಯಬೇಕು. ಜತೆಗೆ ತ್ಯಾಜ್ಯ ಪಡೆಯುವವರು ಸಮವಸ್ತ್ರ, ಕೈಗವಸು, ಮುಖಗವಸು, ಗಮ್ಬೂಟ್ ಸೇರಿದಂತೆ ಇನ್ನಿತರ ಸುರಕ್ಷತಾ ಪರಿಕರಗಳನ್ನು ಧರಿಸಬೇಕು ಎಂದು ಹೇಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ