'ಆಟೋ, ಟ್ಯಾಕ್ಸಿ ಚಾಲಕರಿಗೆ 5000 ಅಲ್ಲ 40 ರೂಪಾಯಿ ಸಿಗಲ್ಲ'

Published : May 18, 2020, 05:42 PM ISTUpdated : May 18, 2020, 05:49 PM IST
'ಆಟೋ, ಟ್ಯಾಕ್ಸಿ ಚಾಲಕರಿಗೆ 5000 ಅಲ್ಲ 40 ರೂಪಾಯಿ ಸಿಗಲ್ಲ'

ಸಾರಾಂಶ

ಸಿಎಂ ಬಿಎಸ್‌ವೈ ಘೋಷಿಸಿರುವ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ 5000 ಪರಿಹಾರ ಧನಕ್ಕೆ ಸಂಬಂಧಿಸಿಂತೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.

ಬೆಂಗಳೂರು, (ಮೇ.18):  ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ 5000 ಪರಿಹಾರ ಧನ ಫಲಾನುಭವಿಗಳಿಗೆ ಸಿಗದಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಕೊರೋನಾ ವೈರಸ್ ಸೋಂಕನ್ನು ತಡೆಗಟ್ಟಲು ದೇಶದಾದ್ಯಂತ ಲಾಕ್ ಡೌನ್ ಘೋಷಣೆ ಆದ್ಮೇಲೆ ಸಂಕಷ್ಟಕ್ಕೆ ಸಿಲುಕಿದ್ದ ಕರ್ನಾಟಕ ರಾಜ್ಯದ ಆಟೋ ಮತ್ತು ಟ್ಯಾಕ್ಸಿ, ಕ್ಯಾಬ್ ಚಾಲಕರಿಗೆ 5 ಸಾವಿರ ರೂಪಾಯಿಯ ಪರಿಹಾರ ಕೊಡುತ್ತೇವೆ ಸಿಎಂ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದರು.

ಆದ್ರೆ, 11 ದಿನವಾಗಿದ್ದರೂ ಇದುವರೆಗೂ ಅದು ಟ್ಯಾಕ್ಸಿ ಮತ್ತು ಆಟೋ ಚಾಲಕರ ಕೈ ಸೇರಿಲ್ಲ. ಇದರಿಂದ 11ನೇ ದಿನದ ತಿಥಿ ಕಾರ್ಯ ಮಾಡಿ, ಎಳ್ಳು ನೀರು ಬಿಟ್ಟು, ಆಟೋ, ಟ್ಯಾಕ್ಸಿ ಚಾಲಕ ಆಸೋಸಿಯೇಷನ್ ವಿನೂತನವಾಗಿ ಪ್ರತಿಭಟನೆ ಮಾಡಿದೆ.

ಲಾಕ್‌ಡೌನ್ 4.0: ಬಸ್, ಆಟೋ, ಟ್ಯಾಕ್ಸಿ ರಸ್ತೆಗಿಳಿಯೋದು ಪಕ್ಕಾ!

ಬೆಂಗಳೂರಿನ ಶಾಂತಿನಗರದ ಸಾರಿಗೆ ಆಯುಕ್ತರ ಕಚೇರಿಯ ಮುಂದೆ ಚಾಲಕರು ಪ್ರತಿಭಟನೆ ಮಾಡಿದ್ದು, ಅಧಿಕಾರಿಗಳ ಬೇಜವಾಬ್ದಾರಿ ವಿರುದ್ಧ ಅಸಮಾಧಾನ ಹೊರಹಾಕಿದರು.

ಈ ವೇಳೆ ಮಾತನಾಡಿದ ಓಲಾ, ಊಬರ್ ಚಾಲಕರ ಸಂಘದ ಅಧ್ಯಕ್ಷ ತನ್ವೀರ್, ಪ್ರತಿ ಚಾಲಕನಿಗೂ 5 ಸಾವಿರ ರುಪಾಯಿ ಹಣ ಘೋಷಣೆ ಮಾಡಿದ್ದಾರೆ. ಬೆಂಗಳೂರಲ್ಲಿ ಏಳು ಲಕ್ಷದ ಎಪ್ಪತ್ತೈದು ಸಾವಿರ ಚಾಲಕರಿದ್ದಾರೆ. ಅವರೆಲ್ಲರಿಗೂ ಪರಿಹಾರ ನೀಡುವುದಾಗಿ ಸ್ವತಃ ಸಿಎಂ ಘೋಷಣೆ ಮಾಡಿದ್ರು. ಆದ್ರೆ ಸದ್ಯ 20 ಕೋಟಿ ಅನುದಾನ ಬಿಡುಗಡೆ ಮಾಡಿದ್ದೇವೆ ಅಂತಾ ಕಳಿಸಿದ್ದಾರೆ. 20 ಕೋಟಿಯಲ್ಲಿ 7 ಲಕ್ಷ ಚಾಲಕರಿಗೂ ಹಂಚಿದ್ರೆ 40 ರೂಪಾಯಿ ಬರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಚಾಲಕರ ಮೇಲೆ ಪ್ರತಿ ದಿನ ಮಾನದಂಡಗಳನ್ನಾ ಏರುತ್ತಲೇ ಹೋಗುತ್ತಿದ್ದಾರೆ. ಸರ್ಕಾರ ಚಾಲಕರಿಗೆ ಮೋಸ ಮಾಡುತ್ತಿದ್ದಾರೆ. ಇದರ ವಿರುದ್ದ ನಾವು ಮುಂದಿನ ದಿನಗಳಲ್ಲಿ ತೀರ್ವವಾದ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!